Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ....

ರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ….

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಕಟ್ಟುಮಸ್ತಾದ ದೇಹದವರು ಕಂಡರೆ ಕಿಯ್ಯೋ ಕಿಯ್ಯೋ ಎಂದು ಕಿರುಚಾಡಿಕೊಂಡು ಓಡಿಹೋಗುವ ಬ್ಲೂಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಖಿಲಭಾರತ ಉಂಡಾಡಿಗುಂಡರ ಪರಿಷತ್ತಿನ ಪುಕ್ಕಲರ ರಣಹೇಡಿ ಕೃತ್ಯವೊಂದು ಬಯಲಾಗಿದೆ. ಜಾರ್ಖಂಡ್‍ನಲ್ಲಿ ಭಾಷಣವೊಂದನ್ನು ಮುಗಿಸಿ ಬರುತ್ತಿದ್ದ ಸ್ವಾಮಿ ಅಗ್ನಿವೇಶ್ ಎಂಬ 80 ವರ್ಷದ ಇಳಿವೃದ್ಧ ಹೋರಾಟಗಾರರ ಮೇಲೆ ಬ್ಲೂಜೆಪಿಯ ಸಣಕಲುತೊಡೆಯ ಕೋಡಂಗಿಗಳು ಮುಗಿಬಿದ್ದು ಹಲ್ಲೆ ನಡೆಸಿವೆ. ವೃದ್ಧರು, ಮಹಿಳೆಯರನ್ನು ಕಂಡರೆ ಇದ್ದಕ್ಕಿದ್ದಂತೆ ಗಂಡಸರಾಗುವ ಈ ಕ್ರಿಮಿಗಳು ಮತ್ತು ಹುಳಹುಪ್ಪಟೆಗಳ ಪಡೆಯು ಹೊಡೆಯುವುದು ಬಡಿಯುವುದು ಮಾಡುವುದು ಈ ದೇಶದಲ್ಲಿ ಸಾಮಾನ್ಯವಾಗಿ ಹೋಗಿದೆ. ಈ ಲಂಪಟಕ್ರಿಮಿಗಳ ಅನಧಿಕೃತ ಪಿತಾಶ್ರೀ ಬ್ಲೂಜೆಪಿಯ ಪಿಶಾಚಿ ನಾಯಕರು ಮತ್ತವರ ಪುಕ್ಕಲು ಮುದುಕ ಮಾತ್ರ ಈ ಬಗ್ಗೆ ಕ್ಯಾರೆ ಕೆತ್ತ ಎನ್ನದೆ ಗಂಟಲಿಗೆ ಸೋರೆಕಾಯಿ ಸಿಗಿಸಿಕೊಂಡು ನಸುಗುನ್ನಿಗಳಂತೆ ಸುಮ್ಮನಿರುವುದು ಮೂರೂಬಿಟ್ಟವರಿಗಿಂತ ಕಡೆಯಾಗಿ ಕಾಣುತ್ತಿರುವುದು ಈ ದೇಶದ ವಾಸ್ತವ.
*****
ಬಾಯಿ ಬಿಟ್ಟರೆ ಸುಳ್ಳುಗಳ ಚರಂಡಿಯನ್ನೇ ಹರಿಸುವ ಅರಳುಮರುಳು ಲೂಸು ಗಿರಾಕಿ ಫಕೀರಪ್ಪನ ಸುಳ್ಳಿನ ಹೊಡೆತ ತಾಳಲಾಗದೆ ಅವನು ಭಾಷಣ ಮಾಡುತ್ತಿದ್ದ ಪೆಂಡಾಲೇ ಸಭಿಕರ ತಲೆಯ ಮೇಲೆ ಧುಡುಮ್ಮನೆ ಕುಸಿದು ಬಿದ್ದಿರುವ ಘಟನೆ ವರದಿಯಾಗಿದೆ. ಪೆಂಡಾಲ್ ಕುಸಿದ ಮೇಲೂ ತನ್ನ ಕೊಳಕುಬಾಯಿಯ ದರಿದ್ರ ಭಾಷಣವನ್ನು ನಿಲ್ಲಿಸದ ಲೂಸ್ ಗಿರಾಕಿ ಫಕೀರಪ್ಪನು ಯಾರ್ ಸತ್ರೆ ನಂಗೇನು ಎಂದು ಕಯೋ ಕಯೋ ಕಯ್ಯಯ್ಯೋ ಅಂತ ಸುಳ್ಳು ಬೊಗಳುತ್ತಲೇ ಇದ್ದನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
*****
ಇದೀಗ ಬಂದ ಸುದ್ದಿ, ತಲೆಕೆಟ್ಟ ಬೀದಿ ಭಿಕಾರಿಯಂತೆ ಐದೂವರೆ ಅಡಿ ಗಡ್ಡ ಬೆಳೆಸಿಕೊಂಡು ಪೋಲಿ ತಿರುಗುವ ‘ಅಂದ್ರುಗಿನ ಸ್ತ್ರೀ ರಾಮುಲು’ ಈಗ ಹೊಸದಾಗಿ ಇನ್ನೊಂದು ಕಲ್ ಚಪ್ಪಡಿ ತಗೊಂಡು ಹೊಟ್ಟೆ ಮೇಲೆ ಎತ್ತಾಕಿಕೊಂಡಿದ್ದಾನೆ. ಕರ್ನಾಟಕ ನಮ್ಮಪ್ಪನ ಮನೆ ಆಸ್ತಿ, ಅದರ ಮೇಲೆ ನಾನು ಖಾತೆಪಾಣಿ ಮಾಡಿಸ್ಕೊಂಡಿದೀನಿ, ಆದ್ರಿಂದ ರಾಜ್ಯ ಎರಡು ಭಾಗ ಆಗಬೇಕು, ಒಂದು ಭಾಗದಲ್ಲಿ ಯಾರಾದ್ರೂ ಇದ್ಕೊಳ್ಳಿ, ಇನ್ನೊಂದು ಭಾಗವನ್ನ ನಾನು ‘ಟೋಫನ್ ತಲೆ ರೆಡ್ಡಿ’ ಇಬ್ರೂ ಹಂಚಿಕೊಂಡು ಉಪ್ಪಿನಕಾಯ್ ಹಾಕ್ಕೊಂಡು ನೆಕ್ಕೋತೀವಿ ಅಂತ ‘ಸ್ತ್ರೀ ರಾಮುಲು’ ಬೊಗಳಿದೆ. ಮಾತೆತ್ತಿದರೆ ನಮ್ದು ಅಖಂಡ ಭಾರತ, ಜಗತ್ತಲ್ಲಿರೋ ಎಲ್ಲ ದೇಶಗಳೂ ಭಾರತಕ್ಕೇ ಸೇರಬೇಕು ಅಂತ ಗಂಟಲು ಹರಿದುಕೊಳ್ಳೋ ಬ್ಲೂಜೆಪಿ ಪಕ್ಷದಲ್ಲಿದ್ದು, ಇಂತಹ ರಾಜ್ಯ ಒಡೆಯುವ ನಮಕ್ ಹರಾಮ್ ಕೆಲಸಕ್ಕೆ ಸಪೋರ್ಟ್ ಮಾಡ್ತೀನಿ ಅಂದ ರಾಮುಲುಗೆ ಈಗ ಜೀವಭಯ ಎದುರಾಗಿ ಹಾರ್ಟು ‘ಚುಟು ಚುಟು, ಚುಮು ಚುಮು’ ಅಂತಾ ಇದೆಯಂತೆ. ಚಳ್ಳಕೆರೆ ಕಡೆಯ ಕನ್ನಡಪರ ಹೋರಾಟಗಾರರು “ರಾಮುಲು ಎಲ್ಲೇ ಕಂಡರೂ ಅವನ ಮುಖವೇ ಹೂತುಹೋಗಿರೋ ಗಡ್ಡಕ್ಕೆ ಸೀಮೆಣ್ಣೆ ಎರಚಿ ಬೆಂಕಿ ಹಚ್ಚಿ, ಸುಟ್ಟ ಗಡ್ಡದ ಬೂದಿಯನ್ನ ಅವನಿಗೇ ತಿನ್ನಿಸ್ತೀವಿ ಅಂತ “ ಇನ್ನೂ ಬೆದರಿಕೆ ಹಾಕಿಲ್ಲವೆಂದು ತಿಳಿದು ಬಂದಿದೆ.
*****
ಸಾವಿರಾರು ವರ್ಷಗಳಿಂದ ಮೈಬಗ್ಗಿಸಿ ದುಡಿದು ತಿಂದು ಗೊತ್ತೇ ಇರದ ಸನಾತನಿ ಶನಿಗಳು, ಕಳೆದ 30 ವರ್ಷಗಳಿಂದ ಶ್ರೀರಾಮನಿಗೆ ಗುಡಿ ಕಟ್ಟುವ ಟಪಾಸ್ ಅಡ್ವೆಂಚರ್ ಮಾಡುತ್ತ ತಿರುಗುತ್ತಿರುವುದು ನಿಮಗೆ ಗೊತ್ತೇ ಇದೆ. ಈ ಅಡ್ವೆಂಚರ್‍ನಲ್ಲಿ ಮಂಚೂಣಿಯಲ್ಲಿದ್ದ ಸಂಘಟನೆಗಳಲ್ಲಿ ಒಂದಾದ ‘ನಿರ್ಮೋಹಿ ಮಂಚ್’ ಸಂಘಟನೆಯು ರಾಮನಗುಡಿ ಕಟ್ತೇವೆಂದು ಸಾವಿರಾರು ಕೋಟಿ ಚಂದಾ ಎತ್ತಿದ ವಿ.ಹೆಚ್.ಪಿಯು ಆ ಹಣದಲ್ಲಿ ಒಂದು ಇಟ್ಟಿಗೆಯನ್ನೂ ಖರೀದಿಸದೆ ಇಡೀ ಚಂದಾಹಣವನ್ನು ಮುಂಡಾ ಮೋಚಿದೆಯೆಂದು ಆಕ್ರೋಶ ವ್ಯಕ್ತಪಡಿಸಿದೆ. ಇದು ಒಂದು ಕಡೆಯಿರುವಾಗ ಇನ್ನೊಂದು ಕಡೆಯಲ್ಲಿ 2019ರ ಎಲೆಕ್ಷನ್ನಿಗೆ ಮುಂಚೆ ರಾಮನಗುಡಿ ಕಟ್ತೀವಿ ಅಂತ ಹೇಳಿಕೆ ಕೊಟ್ಟ ಗುಜರಾತಿನ ಹಳೇ ಕ್ರಿಮಿನಲ್ ಪಂಟರ್ ‘ಹಮಿತ್ ಶಾ’ ಗಂಟಲಿಗೆ ಬ್ಲೂಜೆಪಿ ಪಕ್ಷ ತನ್ನ ಬಲಗಾಲನ್ನು ತುರುಕಿ ಬಾಯಿ ಮುಚ್ಚಿಸುವ ಪ್ರಯತ್ನ ನಡೆಸಿದೆ. ಈ ಬೋಡಗುಂಡನ ಮಾತು ನಂಬಬೇಡಿ, ರಾತ್ರಿ ಹೊಡೆದ ಬಿಟ್ಟಿ ಎಣ್ಣೆ ಏಟಲ್ಲಿ ಹಿಂಗೆಲ್ಲ ವದರವ್ನೆ, ಇವನ ಮಾನಸಿಕ ಸ್ಥಿತಿ ಡೋಲಾಯಮಾನವಾಗಿದೆಯೆಂದು ಸ್ಪಷ್ಟನೆ ಕೊಟ್ಟಿದೆ. ಅಂದಹಾಗೆ, ಇವರ ರಾಮನಗುಡಿ ಅಡ್ವೆಂಚರ್ ಮುಂದಿನ 500 ವರ್ಷಕ್ಕೂ ಮುಂದುವರೆಯಲಿದೆ ಎಂಬುದು ಜನತೆಗೆ ಸ್ಪಷ್ಟವಾಗಿದೆ.
*****
ದೇಶದ ರಕ್ಷಣಾ ಢಾಕಿಣಿ, ಅಲ್ಲಲ್ಲ ಮಂತ್ರಿಣಿಯಾದ ‘ನಿರ್ಮಲಾ ರಾಮಸೀತನ್’ ಎಂಬ ಮಧ್ಯವಯಸ್ಕ ಮಹಿಳೆಯು.. ಲೋಕಸಭೆ ಚುನಾವಣೆಗಿಂತ ಮುಂಚೆ ಕಾಂಗ್ರೆಸ್ ದೇಶದಲ್ಲಿ ಕೋಮು ಗಲಭೆಗಳನ್ನು ಹುಟ್ಟು ಹಾಕುವ ಸಂಚು ಮಾಡುತ್ತಿದೆಯೆಂದು ಹಾಸ್ಯಾಸ್ಪದ ಹೇಳಿಕೆಯೊಂದನ್ನು ಕೊಟ್ಟಿದೆ. ಕೋಮುಗಲಭೆಗಳನ್ನು ದೇಶದ ತುಂಬೆಲ್ಲ ಎರಚಾಡಿ, ಸತ್ತವರ ಹೆಣದ ಮೇಲೆ ತಟ್ಟೆಯಿಟ್ಟುಕೊಂಡು ಅಧಿಕಾರ ಸವಿಯುತ್ತಿರೋ ಪೆಕರು ಪಡಪೋಶಿಗಳ ಪಕ್ಷದಲ್ಲಿದ್ದು, ತನ್ನ ತಟ್ಟೆಯಲ್ಲಿ ಕುದುರೆ ಸತ್ತುಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ಅಮೀಬಾ ಹುಡುಕುವ ಈ ಮತಿಗೇಡಿ ಮಹಿಳೆಗೆ ತಲೆ ಎಂಬುದು ಇದೆಯೇ ಇಲ್ಲವೇ ಎಂಬುದು ಈಗ ಚರ್ಚಾಸ್ಪದ ಸಂಗತಿಯಾಗಿದೆ. ಅತ್ತ ಚೀನಾದೇಶವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಾಜಾರೋಷವಾಗಿ ಬಂಕರ್‍ಗಳನ್ನು ಕಟ್ಟಿಕೊಂಡು ಪಾಕ್ ಜೊತೆ ಜಂಟಿ ಸಮರಾಭ್ಯಾಸ ನಡೆಸುತ್ತಿದ್ದರೆ, ಆ ಅಪಾಯದ ಬಗ್ಗೆ ಕಿಂಚಿತ್ ಗ್ಯಾನವಿಲ್ಲದ ಈ ಮೂರ್ಖಮ್ಮನಿಗೆ ‘ಬಾಯಿಗೆ ಬಂದಂಗೆ ಮಾತಾಡಿಕೊಂಡು ಎಲ್ಲರಿಂದ ಉಗಿಸಿಕೊಳ್ಳುವುದೇ’ ಪ್ರಿಯವಾಗಿರುವುದು ದುರಂತ.

*****

ತರೀಕೆರೆಯ ರೈತರು ತಮ್ಮ ಹೊಲಗದ್ದೆಗಳಿಗೆ ಕಂಟಕಪ್ರಾಯವಾಗಿದ್ದ ಕಾಡುಪ್ರಾಣಿಗಳನ್ನು ಓಡಿಸಲು ಬ್ಲೂಜೆಪಿ ಪಕ್ಷದ ನ್ಯಾಷನಲ್ ಲೀಡರುಗಳ ಕಟೌಟ್‍ಗಳನ್ನು ಹೊಲದಲ್ಲಿ ನೆಟ್ಟು ಪ್ರಾಣಿಕಾಟದಿಂದ ಮುಕ್ತರಾಗಿದ್ದಾರೆ. ಸತ್ತು ಕೊಳೆತ ಘೇಂಡಾಮೃಗದಂತೆ ಕಾಣುವ ‘ಹಮಿತ್ ಶಾ’, ವಯಸ್ಸಾದ ಓತಿಕ್ಯಾತಕ್ಕೆ ಬಿಳಿ ಗಡ್ಡಮೀಸೆ ಬಂದಂತೆ ಕಾಣುವ ಪಕೋಡತಾತ, ಅಡುಗೂಲಜ್ಜಿ ಮುದುಕಿಗೆ ಬಿಳಿ ಪ್ಯಾಂಟು ಶರ್ಟು ಹಾಕಿದಂತೆ ಕಾಡುವ ‘ ಧಡಿಯೂರಪ್ಲ’ನ ಕಟೌಟುಗಳ ಮುಸುಡಿಗಳನ್ನು ಕಂಡು ಹೆದರಿದ ಹೊಲ ಮೇಯಲು ಬರುವ ಕಾಡುಹಂದಿ, ಸಿಂಗಳೀಕ, ಮುಸಿಯ, ಕಾಡೆಮ್ಮೆಗಳು ಉಚ್ಚೆ ಹೊಯ್ದುಕೊಂಡು ವಾಪಸ್ ಕಾಡೊಳಗೆ ಓಡಿ ಹೋಗುತ್ತಿರುವುದು ರೈತರ ಸಂತೋಷಕ್ಕೆ ಕಾರಣವಾಗಿದೆ. ಜನರಿಗಂತೂ ಈ ಕಟೌಟ್ ಮುಷಂಡಿಗಳಿಂದ ಮೂರುಕಾಸಿನ ಪ್ರಯೋಜನ ಇಲ್ಲ, ಕೊನೇಪಕ್ಷ ಕಾಡುಪ್ರಾಣಿಗಳಿಗೆ ಉಚ್ಚೆ ಹುಯ್ಯಿಸಲಾದರೂ ಈ ಕ್ರಿಮಿಗಳು ಬಳಕೆಯಾದವಲ್ಲ ಎಂದು ಗಬ್ಲಿಕ್ ಟಿವಿ ರಂಗಣ್ಣ ಗೊಳೋ ಎಂದು ಅಳುತ್ತ ಕುಳಿತಿದ್ದಾರಂತೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ
ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...