Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ....

ರಾಜ್ಯ ಎಲ್ಡು ಭಾಗ ಆಗ್ಲಿ, ಒಂದು ಭಾಗದ ಖಾತೆಪಾಣಿ ನನ್ನಪ್ಪನ ಹೆಸರಿನ್ಯಾಗೆ ಐತೆ….

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಕಟ್ಟುಮಸ್ತಾದ ದೇಹದವರು ಕಂಡರೆ ಕಿಯ್ಯೋ ಕಿಯ್ಯೋ ಎಂದು ಕಿರುಚಾಡಿಕೊಂಡು ಓಡಿಹೋಗುವ ಬ್ಲೂಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಖಿಲಭಾರತ ಉಂಡಾಡಿಗುಂಡರ ಪರಿಷತ್ತಿನ ಪುಕ್ಕಲರ ರಣಹೇಡಿ ಕೃತ್ಯವೊಂದು ಬಯಲಾಗಿದೆ. ಜಾರ್ಖಂಡ್‍ನಲ್ಲಿ ಭಾಷಣವೊಂದನ್ನು ಮುಗಿಸಿ ಬರುತ್ತಿದ್ದ ಸ್ವಾಮಿ ಅಗ್ನಿವೇಶ್ ಎಂಬ 80 ವರ್ಷದ ಇಳಿವೃದ್ಧ ಹೋರಾಟಗಾರರ ಮೇಲೆ ಬ್ಲೂಜೆಪಿಯ ಸಣಕಲುತೊಡೆಯ ಕೋಡಂಗಿಗಳು ಮುಗಿಬಿದ್ದು ಹಲ್ಲೆ ನಡೆಸಿವೆ. ವೃದ್ಧರು, ಮಹಿಳೆಯರನ್ನು ಕಂಡರೆ ಇದ್ದಕ್ಕಿದ್ದಂತೆ ಗಂಡಸರಾಗುವ ಈ ಕ್ರಿಮಿಗಳು ಮತ್ತು ಹುಳಹುಪ್ಪಟೆಗಳ ಪಡೆಯು ಹೊಡೆಯುವುದು ಬಡಿಯುವುದು ಮಾಡುವುದು ಈ ದೇಶದಲ್ಲಿ ಸಾಮಾನ್ಯವಾಗಿ ಹೋಗಿದೆ. ಈ ಲಂಪಟಕ್ರಿಮಿಗಳ ಅನಧಿಕೃತ ಪಿತಾಶ್ರೀ ಬ್ಲೂಜೆಪಿಯ ಪಿಶಾಚಿ ನಾಯಕರು ಮತ್ತವರ ಪುಕ್ಕಲು ಮುದುಕ ಮಾತ್ರ ಈ ಬಗ್ಗೆ ಕ್ಯಾರೆ ಕೆತ್ತ ಎನ್ನದೆ ಗಂಟಲಿಗೆ ಸೋರೆಕಾಯಿ ಸಿಗಿಸಿಕೊಂಡು ನಸುಗುನ್ನಿಗಳಂತೆ ಸುಮ್ಮನಿರುವುದು ಮೂರೂಬಿಟ್ಟವರಿಗಿಂತ ಕಡೆಯಾಗಿ ಕಾಣುತ್ತಿರುವುದು ಈ ದೇಶದ ವಾಸ್ತವ.
*****
ಬಾಯಿ ಬಿಟ್ಟರೆ ಸುಳ್ಳುಗಳ ಚರಂಡಿಯನ್ನೇ ಹರಿಸುವ ಅರಳುಮರುಳು ಲೂಸು ಗಿರಾಕಿ ಫಕೀರಪ್ಪನ ಸುಳ್ಳಿನ ಹೊಡೆತ ತಾಳಲಾಗದೆ ಅವನು ಭಾಷಣ ಮಾಡುತ್ತಿದ್ದ ಪೆಂಡಾಲೇ ಸಭಿಕರ ತಲೆಯ ಮೇಲೆ ಧುಡುಮ್ಮನೆ ಕುಸಿದು ಬಿದ್ದಿರುವ ಘಟನೆ ವರದಿಯಾಗಿದೆ. ಪೆಂಡಾಲ್ ಕುಸಿದ ಮೇಲೂ ತನ್ನ ಕೊಳಕುಬಾಯಿಯ ದರಿದ್ರ ಭಾಷಣವನ್ನು ನಿಲ್ಲಿಸದ ಲೂಸ್ ಗಿರಾಕಿ ಫಕೀರಪ್ಪನು ಯಾರ್ ಸತ್ರೆ ನಂಗೇನು ಎಂದು ಕಯೋ ಕಯೋ ಕಯ್ಯಯ್ಯೋ ಅಂತ ಸುಳ್ಳು ಬೊಗಳುತ್ತಲೇ ಇದ್ದನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
*****
ಇದೀಗ ಬಂದ ಸುದ್ದಿ, ತಲೆಕೆಟ್ಟ ಬೀದಿ ಭಿಕಾರಿಯಂತೆ ಐದೂವರೆ ಅಡಿ ಗಡ್ಡ ಬೆಳೆಸಿಕೊಂಡು ಪೋಲಿ ತಿರುಗುವ ‘ಅಂದ್ರುಗಿನ ಸ್ತ್ರೀ ರಾಮುಲು’ ಈಗ ಹೊಸದಾಗಿ ಇನ್ನೊಂದು ಕಲ್ ಚಪ್ಪಡಿ ತಗೊಂಡು ಹೊಟ್ಟೆ ಮೇಲೆ ಎತ್ತಾಕಿಕೊಂಡಿದ್ದಾನೆ. ಕರ್ನಾಟಕ ನಮ್ಮಪ್ಪನ ಮನೆ ಆಸ್ತಿ, ಅದರ ಮೇಲೆ ನಾನು ಖಾತೆಪಾಣಿ ಮಾಡಿಸ್ಕೊಂಡಿದೀನಿ, ಆದ್ರಿಂದ ರಾಜ್ಯ ಎರಡು ಭಾಗ ಆಗಬೇಕು, ಒಂದು ಭಾಗದಲ್ಲಿ ಯಾರಾದ್ರೂ ಇದ್ಕೊಳ್ಳಿ, ಇನ್ನೊಂದು ಭಾಗವನ್ನ ನಾನು ‘ಟೋಫನ್ ತಲೆ ರೆಡ್ಡಿ’ ಇಬ್ರೂ ಹಂಚಿಕೊಂಡು ಉಪ್ಪಿನಕಾಯ್ ಹಾಕ್ಕೊಂಡು ನೆಕ್ಕೋತೀವಿ ಅಂತ ‘ಸ್ತ್ರೀ ರಾಮುಲು’ ಬೊಗಳಿದೆ. ಮಾತೆತ್ತಿದರೆ ನಮ್ದು ಅಖಂಡ ಭಾರತ, ಜಗತ್ತಲ್ಲಿರೋ ಎಲ್ಲ ದೇಶಗಳೂ ಭಾರತಕ್ಕೇ ಸೇರಬೇಕು ಅಂತ ಗಂಟಲು ಹರಿದುಕೊಳ್ಳೋ ಬ್ಲೂಜೆಪಿ ಪಕ್ಷದಲ್ಲಿದ್ದು, ಇಂತಹ ರಾಜ್ಯ ಒಡೆಯುವ ನಮಕ್ ಹರಾಮ್ ಕೆಲಸಕ್ಕೆ ಸಪೋರ್ಟ್ ಮಾಡ್ತೀನಿ ಅಂದ ರಾಮುಲುಗೆ ಈಗ ಜೀವಭಯ ಎದುರಾಗಿ ಹಾರ್ಟು ‘ಚುಟು ಚುಟು, ಚುಮು ಚುಮು’ ಅಂತಾ ಇದೆಯಂತೆ. ಚಳ್ಳಕೆರೆ ಕಡೆಯ ಕನ್ನಡಪರ ಹೋರಾಟಗಾರರು “ರಾಮುಲು ಎಲ್ಲೇ ಕಂಡರೂ ಅವನ ಮುಖವೇ ಹೂತುಹೋಗಿರೋ ಗಡ್ಡಕ್ಕೆ ಸೀಮೆಣ್ಣೆ ಎರಚಿ ಬೆಂಕಿ ಹಚ್ಚಿ, ಸುಟ್ಟ ಗಡ್ಡದ ಬೂದಿಯನ್ನ ಅವನಿಗೇ ತಿನ್ನಿಸ್ತೀವಿ ಅಂತ “ ಇನ್ನೂ ಬೆದರಿಕೆ ಹಾಕಿಲ್ಲವೆಂದು ತಿಳಿದು ಬಂದಿದೆ.
*****
ಸಾವಿರಾರು ವರ್ಷಗಳಿಂದ ಮೈಬಗ್ಗಿಸಿ ದುಡಿದು ತಿಂದು ಗೊತ್ತೇ ಇರದ ಸನಾತನಿ ಶನಿಗಳು, ಕಳೆದ 30 ವರ್ಷಗಳಿಂದ ಶ್ರೀರಾಮನಿಗೆ ಗುಡಿ ಕಟ್ಟುವ ಟಪಾಸ್ ಅಡ್ವೆಂಚರ್ ಮಾಡುತ್ತ ತಿರುಗುತ್ತಿರುವುದು ನಿಮಗೆ ಗೊತ್ತೇ ಇದೆ. ಈ ಅಡ್ವೆಂಚರ್‍ನಲ್ಲಿ ಮಂಚೂಣಿಯಲ್ಲಿದ್ದ ಸಂಘಟನೆಗಳಲ್ಲಿ ಒಂದಾದ ‘ನಿರ್ಮೋಹಿ ಮಂಚ್’ ಸಂಘಟನೆಯು ರಾಮನಗುಡಿ ಕಟ್ತೇವೆಂದು ಸಾವಿರಾರು ಕೋಟಿ ಚಂದಾ ಎತ್ತಿದ ವಿ.ಹೆಚ್.ಪಿಯು ಆ ಹಣದಲ್ಲಿ ಒಂದು ಇಟ್ಟಿಗೆಯನ್ನೂ ಖರೀದಿಸದೆ ಇಡೀ ಚಂದಾಹಣವನ್ನು ಮುಂಡಾ ಮೋಚಿದೆಯೆಂದು ಆಕ್ರೋಶ ವ್ಯಕ್ತಪಡಿಸಿದೆ. ಇದು ಒಂದು ಕಡೆಯಿರುವಾಗ ಇನ್ನೊಂದು ಕಡೆಯಲ್ಲಿ 2019ರ ಎಲೆಕ್ಷನ್ನಿಗೆ ಮುಂಚೆ ರಾಮನಗುಡಿ ಕಟ್ತೀವಿ ಅಂತ ಹೇಳಿಕೆ ಕೊಟ್ಟ ಗುಜರಾತಿನ ಹಳೇ ಕ್ರಿಮಿನಲ್ ಪಂಟರ್ ‘ಹಮಿತ್ ಶಾ’ ಗಂಟಲಿಗೆ ಬ್ಲೂಜೆಪಿ ಪಕ್ಷ ತನ್ನ ಬಲಗಾಲನ್ನು ತುರುಕಿ ಬಾಯಿ ಮುಚ್ಚಿಸುವ ಪ್ರಯತ್ನ ನಡೆಸಿದೆ. ಈ ಬೋಡಗುಂಡನ ಮಾತು ನಂಬಬೇಡಿ, ರಾತ್ರಿ ಹೊಡೆದ ಬಿಟ್ಟಿ ಎಣ್ಣೆ ಏಟಲ್ಲಿ ಹಿಂಗೆಲ್ಲ ವದರವ್ನೆ, ಇವನ ಮಾನಸಿಕ ಸ್ಥಿತಿ ಡೋಲಾಯಮಾನವಾಗಿದೆಯೆಂದು ಸ್ಪಷ್ಟನೆ ಕೊಟ್ಟಿದೆ. ಅಂದಹಾಗೆ, ಇವರ ರಾಮನಗುಡಿ ಅಡ್ವೆಂಚರ್ ಮುಂದಿನ 500 ವರ್ಷಕ್ಕೂ ಮುಂದುವರೆಯಲಿದೆ ಎಂಬುದು ಜನತೆಗೆ ಸ್ಪಷ್ಟವಾಗಿದೆ.
*****
ದೇಶದ ರಕ್ಷಣಾ ಢಾಕಿಣಿ, ಅಲ್ಲಲ್ಲ ಮಂತ್ರಿಣಿಯಾದ ‘ನಿರ್ಮಲಾ ರಾಮಸೀತನ್’ ಎಂಬ ಮಧ್ಯವಯಸ್ಕ ಮಹಿಳೆಯು.. ಲೋಕಸಭೆ ಚುನಾವಣೆಗಿಂತ ಮುಂಚೆ ಕಾಂಗ್ರೆಸ್ ದೇಶದಲ್ಲಿ ಕೋಮು ಗಲಭೆಗಳನ್ನು ಹುಟ್ಟು ಹಾಕುವ ಸಂಚು ಮಾಡುತ್ತಿದೆಯೆಂದು ಹಾಸ್ಯಾಸ್ಪದ ಹೇಳಿಕೆಯೊಂದನ್ನು ಕೊಟ್ಟಿದೆ. ಕೋಮುಗಲಭೆಗಳನ್ನು ದೇಶದ ತುಂಬೆಲ್ಲ ಎರಚಾಡಿ, ಸತ್ತವರ ಹೆಣದ ಮೇಲೆ ತಟ್ಟೆಯಿಟ್ಟುಕೊಂಡು ಅಧಿಕಾರ ಸವಿಯುತ್ತಿರೋ ಪೆಕರು ಪಡಪೋಶಿಗಳ ಪಕ್ಷದಲ್ಲಿದ್ದು, ತನ್ನ ತಟ್ಟೆಯಲ್ಲಿ ಕುದುರೆ ಸತ್ತುಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ಅಮೀಬಾ ಹುಡುಕುವ ಈ ಮತಿಗೇಡಿ ಮಹಿಳೆಗೆ ತಲೆ ಎಂಬುದು ಇದೆಯೇ ಇಲ್ಲವೇ ಎಂಬುದು ಈಗ ಚರ್ಚಾಸ್ಪದ ಸಂಗತಿಯಾಗಿದೆ. ಅತ್ತ ಚೀನಾದೇಶವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಾಜಾರೋಷವಾಗಿ ಬಂಕರ್‍ಗಳನ್ನು ಕಟ್ಟಿಕೊಂಡು ಪಾಕ್ ಜೊತೆ ಜಂಟಿ ಸಮರಾಭ್ಯಾಸ ನಡೆಸುತ್ತಿದ್ದರೆ, ಆ ಅಪಾಯದ ಬಗ್ಗೆ ಕಿಂಚಿತ್ ಗ್ಯಾನವಿಲ್ಲದ ಈ ಮೂರ್ಖಮ್ಮನಿಗೆ ‘ಬಾಯಿಗೆ ಬಂದಂಗೆ ಮಾತಾಡಿಕೊಂಡು ಎಲ್ಲರಿಂದ ಉಗಿಸಿಕೊಳ್ಳುವುದೇ’ ಪ್ರಿಯವಾಗಿರುವುದು ದುರಂತ.

*****

ತರೀಕೆರೆಯ ರೈತರು ತಮ್ಮ ಹೊಲಗದ್ದೆಗಳಿಗೆ ಕಂಟಕಪ್ರಾಯವಾಗಿದ್ದ ಕಾಡುಪ್ರಾಣಿಗಳನ್ನು ಓಡಿಸಲು ಬ್ಲೂಜೆಪಿ ಪಕ್ಷದ ನ್ಯಾಷನಲ್ ಲೀಡರುಗಳ ಕಟೌಟ್‍ಗಳನ್ನು ಹೊಲದಲ್ಲಿ ನೆಟ್ಟು ಪ್ರಾಣಿಕಾಟದಿಂದ ಮುಕ್ತರಾಗಿದ್ದಾರೆ. ಸತ್ತು ಕೊಳೆತ ಘೇಂಡಾಮೃಗದಂತೆ ಕಾಣುವ ‘ಹಮಿತ್ ಶಾ’, ವಯಸ್ಸಾದ ಓತಿಕ್ಯಾತಕ್ಕೆ ಬಿಳಿ ಗಡ್ಡಮೀಸೆ ಬಂದಂತೆ ಕಾಣುವ ಪಕೋಡತಾತ, ಅಡುಗೂಲಜ್ಜಿ ಮುದುಕಿಗೆ ಬಿಳಿ ಪ್ಯಾಂಟು ಶರ್ಟು ಹಾಕಿದಂತೆ ಕಾಡುವ ‘ ಧಡಿಯೂರಪ್ಲ’ನ ಕಟೌಟುಗಳ ಮುಸುಡಿಗಳನ್ನು ಕಂಡು ಹೆದರಿದ ಹೊಲ ಮೇಯಲು ಬರುವ ಕಾಡುಹಂದಿ, ಸಿಂಗಳೀಕ, ಮುಸಿಯ, ಕಾಡೆಮ್ಮೆಗಳು ಉಚ್ಚೆ ಹೊಯ್ದುಕೊಂಡು ವಾಪಸ್ ಕಾಡೊಳಗೆ ಓಡಿ ಹೋಗುತ್ತಿರುವುದು ರೈತರ ಸಂತೋಷಕ್ಕೆ ಕಾರಣವಾಗಿದೆ. ಜನರಿಗಂತೂ ಈ ಕಟೌಟ್ ಮುಷಂಡಿಗಳಿಂದ ಮೂರುಕಾಸಿನ ಪ್ರಯೋಜನ ಇಲ್ಲ, ಕೊನೇಪಕ್ಷ ಕಾಡುಪ್ರಾಣಿಗಳಿಗೆ ಉಚ್ಚೆ ಹುಯ್ಯಿಸಲಾದರೂ ಈ ಕ್ರಿಮಿಗಳು ಬಳಕೆಯಾದವಲ್ಲ ಎಂದು ಗಬ್ಲಿಕ್ ಟಿವಿ ರಂಗಣ್ಣ ಗೊಳೋ ಎಂದು ಅಳುತ್ತ ಕುಳಿತಿದ್ದಾರಂತೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ
ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...