Homeದಲಿತ್ ಫೈಲ್ಸ್ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

- Advertisement -
- Advertisement -

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ ಕುಟುಂಬದ ಸದಸ್ಯರನ್ನು ಕೋಲುಗಳಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ದಲಿತ ಕುಟುಂಬದ ಐವರು ಗಾಯಗೊಂಡಿದ್ದು, ಅವರನ್ನು ಜೌರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ದೂರು ದಾಖಲಿಸಿಕೊಳ್ಳಲು ವಿಳಂಬ ಮಾಡಿದ್ದಾರೆ ಎಂದು ಬಲಿಪಶುವಿನ ಕುಟುಂಬ ಆರೋಪಿಸಿದೆ. ಹೊಸ ವರ್ಷದ ಮೊದಲ ದಿನ, ಅಂದರೆ ಗುರುವಾರ ಮಧ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದೆ. ವಿಡಿಯೋ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಸಂತ್ರಸ್ತರಾದ ಮಹಾರಾಜ್ ಜಾತವ್ ಅವರ ಪ್ರಕಾರ, ಪ್ರಭಾವಿ ಗ್ರಾಮಸ್ಥರಾದ ಬನ್ವಾರಿ ಗುರ್ಜರ್ ಮತ್ತು ಅವರ ಸಹಚರರ ಹಸುಗಳು ಹೊಲದಲ್ಲಿ ಮೇಯುತ್ತಿದ್ದವು. ಕುಟುಂಬ ಪ್ರತಿಭಟಿಸಿದಾಗ, ಅವರು ಬಾಜ್ರಾ ಬೆಳೆಯನ್ನೂ ಸಹ ತೆಗೆದುಕೊಂಡು ಹೋಗಿದ್ದಾರೆ. ಇದರಿಂದಾಗಿ ವಿವಾದ ತಾರಕಕ್ಕೇರಿತು, ಪ್ರಭಾವಿ ವ್ಯಕ್ತಿಗಳು ಸೇಡು ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

8-10 ಸುತ್ತು ಗುಂಡು ಹಾರಿಸಿದ ದಾಳಿಕೋರರು

ಜಗಳದ ಬಳಿಕ ಬನ್ವಾರಿ ಗುರ್ಜರ್ ಮತ್ತು ಅವರ 10-12 ಸಹಚರರು ದಲಿತ ಕುಟುಂಬದ ಮನೆಗೆ ತಲುಪಿದ್ದಾರೆ ಎಂದು ಆರೋಪಿಸಲಾಗಿದೆ. ಮೊದಲು 8 ರಿಂದ 10 ಸುತ್ತು ಗುಂಡು ಹಾರಿಸಲಾಯಿತು, ನಂತರ ಕುಟುಂಬದ ಮೇಲೆ ಕೋಲು ಮತ್ತು ಲಾಠಿಗಳಿಂದ ಹಲ್ಲೆ ನಡೆಸಲಾಯಿತು.

ವಿಡಿಯೋದಲ್ಲಿ, ಯುವಕರು ಕೋಲುಗಳು ಮತ್ತು ಲಾಠಿಗಳನ್ನು ಹಿಡಿದಿರುವುದನ್ನು ಸಹ ಕಾಣಬಹುದು. ರಮೇಶ್ ಜಾತವ್, ಮಹಾರಾಜ್ ಜಾತವ್, ಬಹದ್ದೂರ್ ಜಾತವ್, ಮಹಾದೇವಿ ಜಾತವ್ ಮತ್ತು ಸಿಮ್ಲಾ ಜಾತವ್ ಹಲ್ಲೆಯಲ್ಲಿ ಗಾಯಗೊಂಡಿದ್ದಾರೆ.

ವಿವಾದದ ಸಮಯದಲ್ಲಿ, ಕುಟುಂಬದ ಹಿರಿಯ ಸದಸ್ಯರೊಬ್ಬರು ಕೈ ಜೋಡಿಸಿ ದಾಳಿಕೋರರಲ್ಲಿ ಕ್ಷಮೆಯಾಚಿಸಿದ್ದಾರೆ. ಆದರೆ ಇದರ ಹೊರತಾಗಿಯೂ, ಆರೋಪಿಗಳು ಹಲ್ಲೆ ನಿಲ್ಲಿಸಿಲ್ಲ. ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ, ಗಾಯಗೊಂಡ ಕುಟುಂಬ ಸದಸ್ಯರು ಜೌರಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ತಡರಾತ್ರಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಬನ್ವಾರಿ ಗುರ್ಜರ್, ವಿಶ್ರಾಮ್ ಗುರ್ಜರ್, ದಾಮೋದರ್ ಗುರ್ಜರ್, ಬಂಟಿ ಗುರ್ಜರ್ ಮತ್ತು ವೀರ ಗುರ್ಜರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಜೌರಾ ಎಸ್‌ಡಿಒಪಿ ನಿತಿನ್ ಬಾಘೆಲ್ ಮಾಧ್ಯಮಗಳಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...