Homeಮುಖಪುಟಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

- Advertisement -
- Advertisement -

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ ‘ಜನ್ಮಭೂಮಿ’, ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ ‘ಚಂದ್ರಿಕಾ’ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ.

‘ಜನ್ಮಭೂಮಿ’ ಪತ್ರಿಕೆಯ ಕಣ್ಣೂರು-ಕಾಸರಗೋಡು ಆವೃತ್ತಿಯಲ್ಲಿ ಈ ಗೊಂದಲ ಉಂಟಾಗಿದೆ. “ಇದು ಮುದ್ರಣ ಪ್ರಕ್ರಿಯೆಯಲ್ಲಿ ಉಂಟಾದ ತಾಂತ್ರಿಕ ಗೊಂದಲ” ಎಂದು ಜನ್ಮಭೂಮಿಯ ಕಣ್ಣೂರು ಬ್ಯೂರೋ ಮುಖ್ಯಸ್ಥ ಗಣೇಶ್ ಮೋಹನ್ ಹೇಳಿದ್ದಾರೆ.

ಕಣ್ಣೂರಿನ ಅದೇ ಖಾಸಗಿ ಕಂಪ್ಯೂಟರ್-ಟು-ಪ್ಲೇಟ್ (CTP) ಕೇಂದ್ರದಲ್ಲಿ ಪ್ರತಿಸ್ಪರ್ಧಿ ಪತ್ರಿಕೆಗಳನ್ನು ಸಂಸ್ಕರಿಸಲಾಗುತ್ತದೆ ಎಂದು ಹಿಂದೂ ವರದಿ ಮಾಡಿದೆ. CTP ಯಲ್ಲಿ, ಚಂದ್ರಿಕಾದ ಸಂಪಾದಕೀಯ ಪುಟದ ಫಲಕಗಳನ್ನು ಆಕಸ್ಮಿಕವಾಗಿ ಜನ್ಮಭೂಮಿಯ ಫಲಕಗಳೊಂದಿಗೆ ಇರಿಸಲಾಯಿತು ಮತ್ತು ಮುದ್ರಕರಿಗೆ ಕಳುಹಿಸಲಾಯಿತು.

ಚಂದ್ರಿಕಾ ಮತ್ತು ಜನ್ಮಭೂಮಿ ಎರಡೂ ಪತ್ರಿಕೆಗಳು ಕಣ್ಣೂರಿನಲ್ಲಿರುವ ಪ್ರತೀಕ್ಷಾ ಪ್ರಿಂಟರ್ಸ್‌ ಎಂಬ ಕಂಪ್ಯೂಟರ್-ಟು-ಪ್ಲೇಟ್ (ಸಿಟಿಪಿ) ಕೇಂದ್ರದಲ್ಲಿ ತಮ್ಮ ಪ್ರಿಂಟಿಂಗ್ ಪ್ಲೇಟ್‌ಗಳನ್ನು ತಯಾರಿಸಿಕೊಳ್ಳುತ್ತವೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಸಿಟಿಪಿ ಕೇಂದ್ರದಲ್ಲಿ, ಚಂದ್ರಿಕಾ ಪತ್ರಿಕೆಯ ಸಂಪಾದಕೀಯ ಪುಟದ ಪ್ಲೇಟ್‌ಗಳು ತಪ್ಪಾಗಿ ಜನ್ಮಭೂಮಿ ಪತ್ರಿಕೆಯ ಪ್ಲೇಟ್‌ಗಳೊಂದಿಗೆ ಬೆರೆತುಹೋಗಿ, ಪ್ರಿಂಟಿಂಗ್ ಯೂನಿಟ್‌ಗೆ ಹೋಗಿವೆ. ಇದರಿಂದಾಗಿ, ಒಂದು ಪತ್ರಿಕೆಯ ಸಂಪಾದಕೀಯ ಇನ್ನೊಂದು ಪತ್ರಿಕೆಯಲ್ಲಿ ತಪ್ಪಾಗಿ ಮುದ್ರಿತವಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಮಾಧ್ಯಮಂ, ಸುಪ್ರಭಾತಂ ಮತ್ತು ವೀಕ್ಷಣಂನಂತಹ ಇತರ ಸ್ಥಳೀಯ ಪತ್ರಿಕೆಗಳನ್ನೂ ಪ್ರತೀಕ್ಷಾ ಪ್ರಿಂಟರ್ಸ್‌ನಲ್ಲಿ ಮುದ್ರಿಸಲಾಗುತ್ತದೆ.

ಜನ್ಮಭೂಮಿ ಪತ್ರಿಕೆಯ ಪುಟ 4ರಲ್ಲಿ ಚಂದ್ರಿಕಾ ಪತ್ರಿಕೆಯ ಮುಖ್ಯ ಶೀರ್ಷಿಕೆ ಹಾಗೂ ಐಯುಎಂಎಲ್‌ ರಾಜ್ಯಾಧ್ಯಕ್ಷ ಸೈಯದ್ ಸಾದಿಕಲಿ ಶಿಹಾಬ್ ತಂಙಳ್, ಎಂ.ಕೆ. ಮುನೀರ್ ಮತ್ತು ಮೊಹಮ್ಮದ್ ಶಾ ಅವರ ಮೂರು ಅಭಿಪ್ರಾಯಗಳನ್ನು ಪ್ರಕಟಿಸಲಾಗಿದೆ. ಜನ್ಮಭೂಮಿಯ ‘ಅದೃಷ್ಟವ ಎಂಬಂತೆ, ಗೊಂದಲ ಉಂಟಾದ ದಿನ ಚಂದ್ರಿಕಾದ ಸಂಪಾದಕೀಯ ಪುಟದಲ್ಲಿ ಬಿಜೆಪಿಯನ್ನು ನೇರವಾಗಿ ಗುರಿಯಾಗಿಸಿಕೊಂಡ ಯಾವುದೇ ಲೇಖನ ಇರಲಿಲ್ಲ ಎಂದು ಕಾಸರಗೋಡಿನ ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ ದಿ ಹಿಂದೂ ವಿವರಿಸಿದೆ.

ಪತ್ರಿಕೆಯಲ್ಲಿ ಬಂಕಿಮ್ ಚಂದ್ರ ಚಟರ್ಜಿಯವರ ಕೃತಿಗಳ ಕುರಿತಾದ ಲೇಖನ ಮತ್ತು ಯಲಹಂಕ ತೆರವು ಕಾರ್ಯಾಚರಣೆ ಕುರಿತಾದ ಒಂದು ಲೇಖನವೂ ತಪ್ಪಾಗಿ ಪ್ರಕಟಗೊಂಡಿದೆ ಎಂದು ವರದಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾದಿಕಲಿ ಶಿಹಾಬ್ ತಂಙಳ್, “ಹೆಚ್ಚಿನ ಓದುಗರನ್ನು ತಲುಪುವುದಕ್ಕಿಂತ, ವಿಭಿನ್ನ ವರ್ಗದ ಓದುಗರನ್ನು ತಲುಪಲು ಸಾಧ್ಯವಾಗಿದ್ದಕ್ಕೆ ನನಗೆ ಸಂತೋಷವಾಗಿದೆ. ಇದು ನಿಜವಾಗಿಯೂ ಹೊಸ ವರ್ಷದ ಅಚ್ಚರಿಯಾಗಿತ್ತು. ಮುಂದಿನ ವರ್ಷ ನಾನು ಇದನ್ನು ಖಂಡಿತವಾಗಿಯೂ ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

“ಹೊಸ ವರ್ಷದ ದಿನ ನಮ್ಮ ಸಂಪಾದಕೀಯ ಹೆಚ್ಚಿನ ಓದುಗರನ್ನು ಪಡೆದಿರುವುದು ಒಳ್ಳೆಯ ಸೂಚನೆ. ಇದು ಮುಂದಿನ ದಿನಗಳು ಉಜ್ವಲವಾಗಿವೆ ಎಂಬುದನ್ನು ತೋರಿಸುತ್ತದೆ” ಎಂದು ಚಂದ್ರಿಕಾ ಪತ್ರಿಕೆಯ ಸಂಪಾದಕ ಕಮಲ್ ವರದೂರ್ ಹೇಳಿದ್ದಾರೆ.

ನ್ಯೂಸ್‌ ಮಿನಿಟ್‌ನ ಪತ್ರಕರ್ತೆ ಧನ್ಯಾ ರಾಜೇಂದ್ರನ್ ವಿರುದ್ಧದ ಅವಹೇಳನಕಾರಿ ವಿಷಯವನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಈ ಹಿಂದೆ ಕೇರಳ ಮೂಲದ ಸುದ್ದಿ ವಾಹಿನಿಗಳಾದ ದಿ ಕರ್ಮ ನ್ಯೂಸ್ ಮತ್ತು ಜನಮ್ ಟಿವಿಯೊಂದಿಗೆ ಜನ್ಮಭೂಮಿಗೂ ಆದೇಶಿಸಿತ್ತು. ಆಗ ಬಿಜೆಪಿ ಮುಖವಾಣಿ ಸುದ್ದಿಯಾಗಿತ್ತು. ಈಗ ಸಂಪಾದಕೀಯದ ಮೂಲಕ ಮತ್ತೊಮ್ಮೆ ಸುದ್ದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....