Homeಮುಖಪುಟಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

- Advertisement -
- Advertisement -

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು ‘ಸ್ಕ್ರೋಲ್’ ವರದಿ ಮಾಡಿದೆ.

ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200 ಕ್ಕೂ ಹೆಚ್ಚು ಪತ್ರಕರ್ತರು ಉಡುಗೊರೆಯನ್ನು ಸ್ವೀಕರಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಉಲ್ಲೇಖಿಸಿದ್ದಾರೆ. ಆನ್‌ಲೈನ್‌ನಲ್ಲಿ ಫೋನ್‌ನ ಬೆಲೆ ರೂ. 12,600 ರಿಂದ ರೂ. 16,000 ರವರೆಗೆ ಇದೆ.

ಗುರುವಾರ ಗುವಾಹಟಿಯಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ರಿಕಾಗೋಷ್ಠಿಯಲ್ಲಿ ಕೆಲವು ಪತ್ರಕರ್ತರು ಮೊಬೈಲ್ ಫೋನ್‌ಗಳನ್ನು ಪಡೆದರು. ಜನವರಿ 14 ರಂದು ಆಚರಿಸಲಾಗುವ ಮಾಘ ಬಿಹು ವೇಳೆಗೆ ಇತರರು ಜಿಲ್ಲಾಧಿಕಾರಿಗಳಿಂದ ಫೋನ್‌ಗಳನ್ನು ಪಡೆಯಲಿದ್ದಾರೆ.

ಮುಂದಿನ ನಾಲ್ಕು ತಿಂಗಳಲ್ಲಿ ರಾಜ್ಯವು ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವಂತೆಯೇ ಪತ್ರಕರ್ತರಿಗೆ ಸರ್ಕಾರದ ಉಡುಗೊರೆ ಮೊಬೈಲ್ ಫೋನ್ ನೀಡಿದೆ.

‘ಎಲ್ಲಾ ಡಿಐಪಿಆರ್ ಕಾರ್ಡ್‌ದಾರರು ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್ 17 ಅನ್ನು ಸ್ವೀಕರಿಸುತ್ತಾರೆ’ ಎಂದು ಅಧಿಕಾರಿ ಹೇಳಿರುವುದಾಗಿ ವರದಿಯಾಗಿದೆ, ‘ಪ್ರತಿ ವರ್ಷ ನಾವು ಪತ್ರಕರ್ತರಿಗೆ ಕೆಲವು ಉಡುಗೊರೆಗಳನ್ನು ನೀಡುತ್ತೇವೆ.’ ನಾವು ಲ್ಯಾಪ್‌ಟಾಪ್ ಬ್ಯಾಗ್‌ಗಳು, ಲೆದರ್ ಚೀಲಗಳು, ನೀರಿನ ಬಾಟಲ್ ಇತ್ಯಾದಿಗಳನ್ನು ನೀಡಿದ್ದೆವು.

ದಿ ಟೆಲಿಗ್ರಾಫ್‌ನ ಉಮಾನಂದ್ ಜಿಯಾಸ್ವಾಲ್ ಮತ್ತು ದಿ ಎಕನಾಮಿಕ್ ಟೈಮ್ಸ್‌ನ ಬಿಕಾಶ್ ಸಿಂಗ್ ಮೊಬೈಲ್ ಫೋನ್‌ಗಳನ್ನು ಹಿಂತಿರುಗಿಸಿದ್ದಾರೆ ಎಂದು ವರದಿಯಾಗಿದೆ.

2011 ರಲ್ಲಿ ಕಾಂಗ್ರೆಸ್ ಸರ್ಕಾರವು ಮಾನ್ಯತೆ ಪಡೆದ ಪತ್ರಕರ್ತರಿಗೆ ಮತ್ತು 10 ವರ್ಷಗಳ ವೃತ್ತಿಯನ್ನು ಪೂರ್ಣಗೊಳಿಸಿದವರಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...