Homeಕರ್ನಾಟಕರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ; ಕೋಟೆ ನಿರ್ಮಿಸಿಕೊಂಡವರನ್ನು ಯಾರಾದಾರೂ ಕೊಲ್ಲಲು ಹೋಗುತ್ತಾರೆಯೇ:...

ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ; ಕೋಟೆ ನಿರ್ಮಿಸಿಕೊಂಡವರನ್ನು ಯಾರಾದಾರೂ ಕೊಲ್ಲಲು ಹೋಗುತ್ತಾರೆಯೇ: ಡಿಕೆ ಶಿವಕುಮಾರ್

- Advertisement -
- Advertisement -

“ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಮ್ಮ ಪಕ್ಷ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಶನಿವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಮಾತನಾಡಿದರು.

“ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ. ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್ ಹಾಕುವುದರಿಂದ ಬಿಜೆಪಿಯವರಿಗೆ ಆಗಿರುವ ತೊಂದರೆ ಆದರೂ ಏನು? ಅವರು ಸರ್ಕಾರಿ ಜಾಗದಲ್ಲಿ ಹಾಕಿದ್ದಾರೆ? ಇದರಲ್ಲಿ ರೆಡ್ಡಿ ಜಗಳಕ್ಕೆ ಬರುವ ಅಗತ್ಯವೇನಿತ್ತು. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಬಿಜೆಪಿಯವರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮಾತನಾಡಿದ್ದಾರೆ. ಪೊಲೀಸರ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಪಕ್ಷದ ವತಿಯಿಂದ ಈ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನೂ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ನಮ್ಮ ಸಿಎಂ ಈಗಾಗಲೇ ನಿರ್ದೇಶನ ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರು ಅಲ್ಲಿಗೆ ಬರುವವರೆಗೂ ಅಲ್ಲಿ ಒಂದೇ ಒಂದು ಗಲಾಟೆ ನಡೆದಿರಲಿಲ್ಲ” ಎಂದು ಹೇಳಿದರು.

“ಈ ಪ್ರಕರಣದ ಬೆನ್ನಲ್ಲೇ ಎಲ್ಲಾ ಖಾಸಗಿ ಗನ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗನ್ ವಿತರಣೆ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿದ್ಧಪಡಿಸಿ, ನಿಯಮಾವಳಿ ರೂಪಿಸುತ್ತೇವೆ” ಎಂದು ತಿಳಿಸಿದರು.

ಶಾಸಕರಾದ ಭರತ್ ರೆಡ್ಡಿ ಅವರು ಮನೆಗೆ ಬೆಂಕಿ ಹಚ್ಚುವ ಕುರಿತು ಮಾತನಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಯಾರೂ ಮನೆಗೆ ಬೆಂಕಿ ಹಚ್ಚುವುದಿಲ್ಲ, ಅದನ್ನು ಒಪ್ಪುವುದಿಲ್ಲ. ಮೊದಲು ಅವರ ಹೇಳಿಕೆ ಏನಿದೆ ಎಂದು ಪರಿಶೀಲನೆ ಮಾಡುತ್ತೇನೆ” ಎಂದರು.

ಜನಾರ್ಧನ ರೆಡ್ಡಿ ಮನೆ ಮುಂದೆ ಭರತ್ ರೆಡ್ಡಿ ಬೆಂಬಲಿಗರು ಪೋಸ್ಟರ್ ಅಂಟಿಸಿದ್ದರ ಬಗ್ಗೆ ಕೇಳಿದಾಗ, “ಅಲ್ಲಿ ಭರತ್ ರೆಡ್ಡಿ ಇದ್ದರಾ? ಜನಾರ್ಧನ ರೆಡ್ಡಿ ಅವರ ಮನೆ ಮುಂದೆ ವಾಲ್ಮೀಕಿ ಅವರ ಪೋಸ್ಟರ್ ಇರಬಾರದಾ? ಇದ್ದರೆ ತಪ್ಪೇನಿದೆ” ಎಂದು ಪ್ರಶ್ನಿಸಿದರು.

“ಗುಂಡು ಯಾರು ಹಾರಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ತಿಳಿಸಿದರು.

ಎಸ್‌ಪಿ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಬಗ್ಗೆ ಕೇಳಿದಾಗ, “ನನಗೆ ಈ ಘಟನೆ ತಿಳಿದ ತಕ್ಷಣೆ ಎಸ್‌ಪಿ ಜೊತೆ ಮಾತನಾಡಿದ್ದೇನೆ. ಅವರ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೇ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್‌ಪಿ, ಐಜಿ ಮತ್ತು ಶಾಸಕರ ಜತೆಗೂ ಮಾತನಾಡಿದ್ದೇನೆ. ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ಕೂಡ ನನಗೆ ಕರೆ ಮಾಡಿ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ. ಬಳ್ಳಾರಿಯ ಜನ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದುಕೊಂಡಿದ್ದರು. ನಮಗೆ ಅದು ಮುಖ್ಯ. ಪಕ್ಷದ ಅಧ್ಯಕ್ಷನಾಗಿ ನನಗೆ ನನ್ನದೇ ಆದ ಜವಾಬ್ದಾರಿ ಇದೆ” ಎಂದು ತಿಳಿಸಿದರು.

ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್

ನನ್ನ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ? ಬದಲಿಗೆ ಜನರಿಗೆ ಬೇರೆಯದೇ ರೀತಿಯ ಭಯವಿದೆ. ಜನಾರ್ಧನ ರೆಡ್ಡಿ ಅವರ ಕುಟುಂಬದವರಿಗೆ ಸೋಲು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ. ಯಾರ ಇತಿಹಾಸ ಏನಿದೆ ಎಂಬುದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು” ಎಂದು ತಿರುಗೇಟು ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...