Homeಕರ್ನಾಟಕರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ; ಕೋಟೆ ನಿರ್ಮಿಸಿಕೊಂಡವರನ್ನು ಯಾರಾದಾರೂ ಕೊಲ್ಲಲು ಹೋಗುತ್ತಾರೆಯೇ:...

ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ; ಕೋಟೆ ನಿರ್ಮಿಸಿಕೊಂಡವರನ್ನು ಯಾರಾದಾರೂ ಕೊಲ್ಲಲು ಹೋಗುತ್ತಾರೆಯೇ: ಡಿಕೆ ಶಿವಕುಮಾರ್

- Advertisement -
- Advertisement -

“ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಮ್ಮ ಪಕ್ಷ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಶನಿವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಮಾತನಾಡಿದರು.

“ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ. ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್ ಹಾಕುವುದರಿಂದ ಬಿಜೆಪಿಯವರಿಗೆ ಆಗಿರುವ ತೊಂದರೆ ಆದರೂ ಏನು? ಅವರು ಸರ್ಕಾರಿ ಜಾಗದಲ್ಲಿ ಹಾಕಿದ್ದಾರೆ? ಇದರಲ್ಲಿ ರೆಡ್ಡಿ ಜಗಳಕ್ಕೆ ಬರುವ ಅಗತ್ಯವೇನಿತ್ತು. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಬಿಜೆಪಿಯವರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮಾತನಾಡಿದ್ದಾರೆ. ಪೊಲೀಸರ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಪಕ್ಷದ ವತಿಯಿಂದ ಈ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನೂ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ನಮ್ಮ ಸಿಎಂ ಈಗಾಗಲೇ ನಿರ್ದೇಶನ ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರು ಅಲ್ಲಿಗೆ ಬರುವವರೆಗೂ ಅಲ್ಲಿ ಒಂದೇ ಒಂದು ಗಲಾಟೆ ನಡೆದಿರಲಿಲ್ಲ” ಎಂದು ಹೇಳಿದರು.

“ಈ ಪ್ರಕರಣದ ಬೆನ್ನಲ್ಲೇ ಎಲ್ಲಾ ಖಾಸಗಿ ಗನ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗನ್ ವಿತರಣೆ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿದ್ಧಪಡಿಸಿ, ನಿಯಮಾವಳಿ ರೂಪಿಸುತ್ತೇವೆ” ಎಂದು ತಿಳಿಸಿದರು.

ಶಾಸಕರಾದ ಭರತ್ ರೆಡ್ಡಿ ಅವರು ಮನೆಗೆ ಬೆಂಕಿ ಹಚ್ಚುವ ಕುರಿತು ಮಾತನಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಯಾರೂ ಮನೆಗೆ ಬೆಂಕಿ ಹಚ್ಚುವುದಿಲ್ಲ, ಅದನ್ನು ಒಪ್ಪುವುದಿಲ್ಲ. ಮೊದಲು ಅವರ ಹೇಳಿಕೆ ಏನಿದೆ ಎಂದು ಪರಿಶೀಲನೆ ಮಾಡುತ್ತೇನೆ” ಎಂದರು.

ಜನಾರ್ಧನ ರೆಡ್ಡಿ ಮನೆ ಮುಂದೆ ಭರತ್ ರೆಡ್ಡಿ ಬೆಂಬಲಿಗರು ಪೋಸ್ಟರ್ ಅಂಟಿಸಿದ್ದರ ಬಗ್ಗೆ ಕೇಳಿದಾಗ, “ಅಲ್ಲಿ ಭರತ್ ರೆಡ್ಡಿ ಇದ್ದರಾ? ಜನಾರ್ಧನ ರೆಡ್ಡಿ ಅವರ ಮನೆ ಮುಂದೆ ವಾಲ್ಮೀಕಿ ಅವರ ಪೋಸ್ಟರ್ ಇರಬಾರದಾ? ಇದ್ದರೆ ತಪ್ಪೇನಿದೆ” ಎಂದು ಪ್ರಶ್ನಿಸಿದರು.

“ಗುಂಡು ಯಾರು ಹಾರಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ತಿಳಿಸಿದರು.

ಎಸ್‌ಪಿ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಬಗ್ಗೆ ಕೇಳಿದಾಗ, “ನನಗೆ ಈ ಘಟನೆ ತಿಳಿದ ತಕ್ಷಣೆ ಎಸ್‌ಪಿ ಜೊತೆ ಮಾತನಾಡಿದ್ದೇನೆ. ಅವರ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೇ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್‌ಪಿ, ಐಜಿ ಮತ್ತು ಶಾಸಕರ ಜತೆಗೂ ಮಾತನಾಡಿದ್ದೇನೆ. ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ಕೂಡ ನನಗೆ ಕರೆ ಮಾಡಿ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ. ಬಳ್ಳಾರಿಯ ಜನ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದುಕೊಂಡಿದ್ದರು. ನಮಗೆ ಅದು ಮುಖ್ಯ. ಪಕ್ಷದ ಅಧ್ಯಕ್ಷನಾಗಿ ನನಗೆ ನನ್ನದೇ ಆದ ಜವಾಬ್ದಾರಿ ಇದೆ” ಎಂದು ತಿಳಿಸಿದರು.

ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್

ನನ್ನ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ? ಬದಲಿಗೆ ಜನರಿಗೆ ಬೇರೆಯದೇ ರೀತಿಯ ಭಯವಿದೆ. ಜನಾರ್ಧನ ರೆಡ್ಡಿ ಅವರ ಕುಟುಂಬದವರಿಗೆ ಸೋಲು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ. ಯಾರ ಇತಿಹಾಸ ಏನಿದೆ ಎಂಬುದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು” ಎಂದು ತಿರುಗೇಟು ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...