Homeಕರ್ನಾಟಕಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

ಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

- Advertisement -
- Advertisement -

​ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣವೊಂದನ್ನು ದಾಖಲಿಸುವ ವೇಳೆ ಸಂತ್ರಸ್ತೆಯ ತಾಯಿ ನೀಡಿದ ಮೂಲ ದೂರನ್ನು ತಿರುಚಿ, ಪೊಲೀಸರು ತಮಗೆ ಇಷ್ಟ ಬಂದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

​​ಅಪ್ರಾಪ್ತೆಯ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೋರಿ ಆಕೆಯ ತಾಯಿ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಆನಂದೇಗೌಡ ಸಂತ್ರಸ್ತೆ ಮತ್ತು ಆಕೆಯ ತಾಯಿ ನೀಡಿದ ನಿಖರವಾದ ಹೇಳಿಕೆಗಳನ್ನು ದಾಖಲಿಸಿಕೊಳ್ಳದೆ, ಪ್ರಕರಣದ ತೀವ್ರತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ದೂರಿನ ಅಂಶಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

​​ಈ ಕುರಿತು ಮಾತನಾಡಿರುವ ಸಂತ್ರಸ್ತೆಯ ತಾಯಿ, “ನಾನು ಮೊದಲೇ ಒಂದು ಹೇಳಿಕೆ ನೀಡಿದ್ದೆ. ಆದರೆ ಪೊಲೀಸರು ನೆಟ್‌ವರ್ಕ್ ಇಲ್ಲ ಎಂಬ ನೆಪ ಹೇಳಿ ಸಮಯ ಕಳೆದರು. ನಂತರ ನನಗೆ ತಿಳಿಯದಂತೆ ಬೇರೆಯದೇ ರೀತಿಯ ದೂರು ಪತ್ರ ಸಿದ್ಧಪಡಿಸಿ, ಅದರ ಮೇಲೆ ಸಹಿ ಹಾಕುವಂತೆ ಒತ್ತಡ ಹೇರಿದರು. ಅತ್ಯಂತ ಅವಸರವಾಗಿ ನನ್ನಿಂದ ಸಹಿ ಪಡೆದುಕೊಂಡಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಆರೋಪಿ ಕಿರಣ್ ಎಂ.ಎನ್ “ನನ್ನ ಮೇಲೆ ದೂರು ದಾಖಲಿಸಿದರೆ ನಿಮ್ಮ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ನನಗೆ ಮತ್ತು ನನ್ನ ಮಗಳಿಗೆ ಪೋನಿನ ಮೂಲಕ ಬೆದರಿಕೆ ಪತ್ರ ಕಳುಹಿಸಿದ್ದಾನೆ” ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.

ಪೊಕ್ಸೋ ಪ್ರಕರಣದಲ್ಲಿ ರಾಜಿ ಪಂಚಾಯಿತಿಗೆ ಅವಕಾಶ ಇಲ್ಲದಿದ್ದರೂ, ನ್ಯಾಯ ಕೊಡಿಸುವುದಾಗಿ ಮಣಿಪುರಕ್ಕೆ ಕರೆದುಕೊಂಡು ಹೋಗಿ ಸಂತ್ರಸ್ತೆಯ ತಾಯಿಯಿಂದ ಲಕ್ಷಾಂತರ ರೂಪಾಯಿ ಹಣ ದುಂದು ವೆಚ್ಚ ಮಾಡಿಸಿ ಮೋಸ ಮಾಡಿ, ನಂತರ ಅವರಿಗೇ ಬೆದರಿಕೆ ಹಾಕುತ್ತಿರುವ ರಜನಿರಾಜ್ ಎಂಬ ಮಹಿಳೆಯ ಮೇಲೆ ಎಫ್‌ಐಆರ್ ದಾಖಲಿಸುವಂತೆ ​ದೂರಿನಲ್ಲಿ ಉಲ್ಲೇಖಿಸಲಾಗಿದ್ದರೂ, ಅವರ ಹೆಸರನ್ನು ಕೈಬಿಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂಬ ಅಂಶವೂ ಸಂತ್ರಸ್ತೆಯ ತಾಯಿಯ ಹೇಳಿಕೆಯಿಂದ ತಿಳಿದುಬಂದಿದೆ.

​​ಈ ಕುರಿತು ಮಾತನಾಡಿರುವ ‘ಮಹಿಳಾ ಮುನ್ನಡೆ’ ಸಂಘಟನೆಯ ಸಾಮಾಜಿಕ ಕಾರ್ಯಕರ್ತೆ ಪೂರ್ಣಿಮಾ, “ಪೊಲೀಸರು ಸಂತ್ರಸ್ತೆಯ ಪರವಾಗಿ ನಿಲ್ಲುವ ಬದಲು ಆರೋಪಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ-ಮಗಳು ನೀಡಿದ ದೂರಿನಂತೆ ಎಫ್‌ಐಆರ್ ದಾಖಲಿಸದೆ, ಇನ್ಸ್‌ಪೆಕ್ಟರ್ ತಮಗೆ ಬೇಕಾದಂತೆ ಬರೆದುಕೊಂಡಿದ್ದಾರೆ. ಇದನ್ನು ವಿರೋಧಿಸಿದಾಗ ಸಂತ್ರಸ್ತೆಯನ್ನೇ ಅಪರಾಧಿಯಂತೆ ಕಂಡು ಠಾಣೆಯಲ್ಲಿ ಕೂರಿಸುವ ಮೂಲಕ ದರ್ಪ ಪ್ರದರ್ಶಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

​ಈಗಾಗಲೇ ಈ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ಪಿ) ಮತ್ತು ಜಿಲ್ಲಾಧಿಕಾರಿಗಳ (ಡಿಸಿ) ಗಮನಕ್ಕೆ ತರಲಾಗಿದೆ. ಸಂತ್ರಸ್ತೆಗೆ ನ್ಯಾಯ ಸಿಗದಿದ್ದರೆ ಮತ್ತು ತಿರುಚಲಾದ ಎಫ್‌ಐಆರ್ ಅನ್ನು ಸರಿಪಡಿಸದಿದ್ದರೆ ಬೃಹತ್ ಪ್ರತಿಭಟನೆ ಮಾಡಿ ಪತ್ರಿಕಾಗೋಷ್ಠಿ ನಡೆಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಠಾಣೆಗೆ ಭೇಟಿ ನೀಡಿದ ಅತ್ಯಾಚಾರ ವಿರೋಧಿ ಆಂದೋಲನದ ನಿಯೋಗದಲ್ಲಿ ಪದಾಧಿಕಾರಿಗಳಾದ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಕರ್ನಾಟಕ ರೈತ ಸಂಘದ ಲತಾಶಂಕರ್, ಮಹಿಳಾ ಮುನ್ನಡೆಯ ಶಿಲ್ಪ, ಗಂಗಾಧರ್ ಬಿಎಸ್‌ಪಿ, ರವಿ ಹಾಗೂ ಜಾಗೃತ ಕರ್ನಾಟಕದ ಜಗದೀಶ್ ನಗರಕೆರೆ ಇನ್ನೂ ಮುಂತಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್ ವಿಶೇಷ ಆರ್ಥಿಕ ವಲಯದಿಂದ ಪಡೆದ ವಿದ್ಯುತ್‌ಗಾಗಿ ಅದಾನಿ ಕಂಪನಿಗೆ ಕಸ್ಟಮ್ಸ್ ಸುಂಕ ವಿನಾಯಿತಿ ನೀಡಲು ಸುಪ್ರೀಂ ಅನುಮತಿ

ಮುಂದ್ರಾದಲ್ಲಿರುವ ತನ್ನ SEZ ಘಟಕದಿಂದ ದೇಶೀಯ ಸುಂಕ ಪ್ರದೇಶಕ್ಕೆ (DTA) ಸರಬರಾಜು ಮಾಡುವ ವಿದ್ಯುತ್ ಮೇಲಿನ ಕಸ್ಟಮ್ಸ್ ಸುಂಕವನ್ನು ವಿಧಿಸುವುದರಿಂದ ಅದಾನಿ ಪವರ್‌ಗೆ ವಿನಾಯಿತಿ ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್‌ನ ಜೂನ್ 28, 2019...

ಅರಣ್ಯ ಭೂಮಿ ಒತ್ತುವರಿ ಆರೋಪ; ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್, ಬಿಜೆಪಿ ಶಾಸಕರು

ಬೀದರ್ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್...

ಅಮೆರಿಕಾ: ಭಾರತೀಯ ಮಹಿಳೆ ಶವವಾಗಿ ಪತ್ತೆ, ಮಾಜಿ ಗೆಳೆಯ ಹತ್ಯೆ ಮಾಡಿ ಭಾರತಕ್ಕೆ ಪರಾರಿಯಾಗಿರುವ ಶಂಕೆ

ಕಳೆದ ವಾರ ನಾಪತ್ತೆಯಾಗಿದ್ದ 27 ವರ್ಷದ ಭಾರತೀಯ ಮಹಿಳೆ ನಿಕಿತಾ ಗೋಡಿಶಾಲಾ ಅಮೆರಿಕಾದ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಆಕೆಯ ಮಾಜಿ ಗೆಳೆಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತ ಆಕೆಯನ್ನು ಕೊಂದು ಭಾರತಕ್ಕೆ...

ಐಪಿಎಲ್ ಪ್ರಸಾರ ಅನಿರ್ದಿಷ್ಟಾವಧಿಗೆ ನಿಷೇಧಿಸಲು ಆದೇಶಿಸಿದ ಬಾಂಗ್ಲಾದೇಶ ಸರ್ಕಾರ

2026 ರ ಋತುವಿನ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ (ಐಪಿಎಲ್‌) ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೆಕೆಆರ್‌ ಕೈಬಿಟ್ಟ ಬಳಿಕ, ಐಪಿಎಲ್‌ ಪ್ರಸಾರ ಮತ್ತು ಪ್ರಚಾರದ ಮೇಲೆ ಬಾಂಗ್ಲಾದೇಶ ಸರ್ಕಾರ ಅನಿರ್ದಿಷ್ಟಾವಧಿ ನಿಷೇಧ ಹೇರಿದೆ. ಈ ನಿರ್ಧಾರವನ್ನು...

‘ನನ್ನನ್ನು ಸಂತೋಷಗೊಳಿಸುವುದು ಮುಖ್ಯ’: ಭಾರತದ ಮೇಲೆ ಸುಂಕ ಏರಿಸುವ ಬೆದರಿಕೆ ಹಾಕಿದ ಟ್ರಂಪ್

‘ರಷ್ಯಾದ ತೈಲ ಸಮಸ್ಯೆಯನ್ನು ಬಗೆಹರಿಸಲು ಸಹಾಯ ಮಾಡದಿದ್ದಲ್ಲಿ ಭಾರತದ ಮೇಲಿನ ಸುಂಕ ಹೆಚ್ಚಿಸುತ್ತೇವೆ’ ಎಂದು ಟ್ರಂಪ್ ಏರ್‌ಫೋರ್ಸ್ ಒನ್ ವಿಮಾನ ಪ್ರಯಾಣದ ವೇಳೆ ವರದಿಗಾರರೊಂದಿಗೆ ತಿಳಿಸಿದ್ದನ್ನು ‘ಎಎನ್‌ಐ’ ಸುದ್ದಿ ಸಂಸ್ಥೆ ‘ಎಕ್ಸ್’ನಲ್ಲಿ ಪ್ರಕಟಿಸಿದೆ. ರಷ್ಯಾ...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್-ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ್ದು ಯಾಕೆ?

2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ. ಆದರೆ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್,...

ವೆನೆಜುವೆಲಾ-ಅಮೇರಿಕಾ ಸಂಘರ್ಷ: ಭಾರತದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

ಅಮೆರಿಕ ಮತ್ತು ವೆನೆಜುವೆಲಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಈ ಸಂಘರ್ಷವು ಭಾರತದ ತೈಲ ಆಮದು ಮಸೂದೆ ಮತ್ತು ವ್ಯಾಪಾರ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದೇ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ. ವೆನೆಜುವೆಲಾ ದೇಶದ ಅಧ್ಯಕ್ಷ...

ಮಹಾರಾಷ್ಟ್ರ| ಬಂಗಾಳಿ ಭಾಷೆ ಮಾತನಾಡಿದ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಮೇಲೆ ಹಲ್ಲೆ

ತಮ್ಮ ಮಾತೃ ಭಾಷೆ ಬಂಗಾಳಿಯಲ್ಲಿ ಮಾತನಾಡಿದ್ದಕ್ಕಾಗಿ ಬಾಂಗ್ಲಾದೇಶೀಯರು ಎಂದು ಶಂಕಿಸಿ ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ಮೂವರು ವಲಸೆ ಕಾರ್ಮಿಕರ ಮೇಲೆ ಮಹಾರಾಷ್ಟ್ರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಕಾರ್ಮಿಕರು ತಮ್ಮ...

ವೆನೆಜುವೆಲಾ ದಾಳಿಯ ನಂತರ ಕೊಲಂಬಿಯಾ, ಕ್ಯೂಬಾ, ಮೆಕ್ಸಿಕೊ, ಗ್ರೀನ್‌ಲ್ಯಾಂಡ್‌ಗೆ ಟ್ರಂಪ್ ಬೆದರಿಕೆ

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡೊರೊ ಅವರನ್ನು ವಾಷಿಂಗ್ಟನ್ ಅಪಹರಿಸಿದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಮತ್ತು ಕ್ಯೂಬಾ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರನ್ನು...

ಯುಎಸ್‌| ಐತಿಹಾಸಿಕ ಪಾರ್ಸಿಪ್ಪಾನಿ ನಗರದ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಭಾರತೀಯ-ಅಮೆರಿಕನ್ ಪ್ರಜೆ ಪುಲ್ಕಿತ್ ದೇಸಾಯಿ

ಅಮೆರಿಕದ ನೌಕಾಪಡೆಯ ಅನುಭವಿ ಮತ್ತು ತಂತ್ರಜ್ಞಾನ ವೃತ್ತಿಪರ ಪುಲ್ಕಿತ್ ದೇಸಾಯಿ ಅವರು ನ್ಯೂಜೆರ್ಸಿಯ ಪಾರ್ಸಿಪ್ಪಾನಿಯ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಭಾರೀ ಪೈಪೋಟಿಯ ಸ್ಪರ್ಧೆಯ ಚುನಾವಣೆಯ ನಂತರ ಅಧಿಕಾರ ವಹಿಸಿಕೊಂಡ ಮೊದಲ ಭಾರತೀಯ-ಅಮೆರಿಕನ್...