Homeಕರ್ನಾಟಕಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

ಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

- Advertisement -
- Advertisement -

​ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣವೊಂದನ್ನು ದಾಖಲಿಸುವ ವೇಳೆ ಸಂತ್ರಸ್ತೆಯ ತಾಯಿ ನೀಡಿದ ಮೂಲ ದೂರನ್ನು ತಿರುಚಿ, ಪೊಲೀಸರು ತಮಗೆ ಇಷ್ಟ ಬಂದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

​​ಅಪ್ರಾಪ್ತೆಯ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೋರಿ ಆಕೆಯ ತಾಯಿ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಆನಂದೇಗೌಡ ಸಂತ್ರಸ್ತೆ ಮತ್ತು ಆಕೆಯ ತಾಯಿ ನೀಡಿದ ನಿಖರವಾದ ಹೇಳಿಕೆಗಳನ್ನು ದಾಖಲಿಸಿಕೊಳ್ಳದೆ, ಪ್ರಕರಣದ ತೀವ್ರತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ದೂರಿನ ಅಂಶಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

​​ಈ ಕುರಿತು ಮಾತನಾಡಿರುವ ಸಂತ್ರಸ್ತೆಯ ತಾಯಿ, “ನಾನು ಮೊದಲೇ ಒಂದು ಹೇಳಿಕೆ ನೀಡಿದ್ದೆ. ಆದರೆ ಪೊಲೀಸರು ನೆಟ್‌ವರ್ಕ್ ಇಲ್ಲ ಎಂಬ ನೆಪ ಹೇಳಿ ಸಮಯ ಕಳೆದರು. ನಂತರ ನನಗೆ ತಿಳಿಯದಂತೆ ಬೇರೆಯದೇ ರೀತಿಯ ದೂರು ಪತ್ರ ಸಿದ್ಧಪಡಿಸಿ, ಅದರ ಮೇಲೆ ಸಹಿ ಹಾಕುವಂತೆ ಒತ್ತಡ ಹೇರಿದರು. ಅತ್ಯಂತ ಅವಸರವಾಗಿ ನನ್ನಿಂದ ಸಹಿ ಪಡೆದುಕೊಂಡಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಆರೋಪಿ ಕಿರಣ್ ಎಂ.ಎನ್ “ನನ್ನ ಮೇಲೆ ದೂರು ದಾಖಲಿಸಿದರೆ ನಿಮ್ಮ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ನನಗೆ ಮತ್ತು ನನ್ನ ಮಗಳಿಗೆ ಪೋನಿನ ಮೂಲಕ ಬೆದರಿಕೆ ಪತ್ರ ಕಳುಹಿಸಿದ್ದಾನೆ” ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.

ಪೊಕ್ಸೋ ಪ್ರಕರಣದಲ್ಲಿ ರಾಜಿ ಪಂಚಾಯಿತಿಗೆ ಅವಕಾಶ ಇಲ್ಲದಿದ್ದರೂ, ನ್ಯಾಯ ಕೊಡಿಸುವುದಾಗಿ ಮಣಿಪುರಕ್ಕೆ ಕರೆದುಕೊಂಡು ಹೋಗಿ ಸಂತ್ರಸ್ತೆಯ ತಾಯಿಯಿಂದ ಲಕ್ಷಾಂತರ ರೂಪಾಯಿ ಹಣ ದುಂದು ವೆಚ್ಚ ಮಾಡಿಸಿ ಮೋಸ ಮಾಡಿ, ನಂತರ ಅವರಿಗೇ ಬೆದರಿಕೆ ಹಾಕುತ್ತಿರುವ ರಜನಿರಾಜ್ ಎಂಬ ಮಹಿಳೆಯ ಮೇಲೆ ಎಫ್‌ಐಆರ್ ದಾಖಲಿಸುವಂತೆ ​ದೂರಿನಲ್ಲಿ ಉಲ್ಲೇಖಿಸಲಾಗಿದ್ದರೂ, ಅವರ ಹೆಸರನ್ನು ಕೈಬಿಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂಬ ಅಂಶವೂ ಸಂತ್ರಸ್ತೆಯ ತಾಯಿಯ ಹೇಳಿಕೆಯಿಂದ ತಿಳಿದುಬಂದಿದೆ.

​​ಈ ಕುರಿತು ಮಾತನಾಡಿರುವ ‘ಮಹಿಳಾ ಮುನ್ನಡೆ’ ಸಂಘಟನೆಯ ಸಾಮಾಜಿಕ ಕಾರ್ಯಕರ್ತೆ ಪೂರ್ಣಿಮಾ, “ಪೊಲೀಸರು ಸಂತ್ರಸ್ತೆಯ ಪರವಾಗಿ ನಿಲ್ಲುವ ಬದಲು ಆರೋಪಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ-ಮಗಳು ನೀಡಿದ ದೂರಿನಂತೆ ಎಫ್‌ಐಆರ್ ದಾಖಲಿಸದೆ, ಇನ್ಸ್‌ಪೆಕ್ಟರ್ ತಮಗೆ ಬೇಕಾದಂತೆ ಬರೆದುಕೊಂಡಿದ್ದಾರೆ. ಇದನ್ನು ವಿರೋಧಿಸಿದಾಗ ಸಂತ್ರಸ್ತೆಯನ್ನೇ ಅಪರಾಧಿಯಂತೆ ಕಂಡು ಠಾಣೆಯಲ್ಲಿ ಕೂರಿಸುವ ಮೂಲಕ ದರ್ಪ ಪ್ರದರ್ಶಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

​ಈಗಾಗಲೇ ಈ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ಪಿ) ಮತ್ತು ಜಿಲ್ಲಾಧಿಕಾರಿಗಳ (ಡಿಸಿ) ಗಮನಕ್ಕೆ ತರಲಾಗಿದೆ. ಸಂತ್ರಸ್ತೆಗೆ ನ್ಯಾಯ ಸಿಗದಿದ್ದರೆ ಮತ್ತು ತಿರುಚಲಾದ ಎಫ್‌ಐಆರ್ ಅನ್ನು ಸರಿಪಡಿಸದಿದ್ದರೆ ಬೃಹತ್ ಪ್ರತಿಭಟನೆ ಮಾಡಿ ಪತ್ರಿಕಾಗೋಷ್ಠಿ ನಡೆಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಠಾಣೆಗೆ ಭೇಟಿ ನೀಡಿದ ಅತ್ಯಾಚಾರ ವಿರೋಧಿ ಆಂದೋಲನದ ನಿಯೋಗದಲ್ಲಿ ಪದಾಧಿಕಾರಿಗಳಾದ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಕರ್ನಾಟಕ ರೈತ ಸಂಘದ ಲತಾಶಂಕರ್, ಮಹಿಳಾ ಮುನ್ನಡೆಯ ಶಿಲ್ಪ, ಗಂಗಾಧರ್ ಬಿಎಸ್‌ಪಿ, ರವಿ ಹಾಗೂ ಜಾಗೃತ ಕರ್ನಾಟಕದ ಜಗದೀಶ್ ನಗರಕೆರೆ ಇನ್ನೂ ಮುಂತಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...