Homeಅಂತರಾಷ್ಟ್ರೀಯವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಅಮೆರಿಕ ಸೇನೆ ಬಂಧಿಸಿರುವ ಹಿನ್ನೆಲೆ, ಹಂಗಾಮಿ ಅಧ್ಯಕ್ಷೆಯಾಗಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ವೆನಿಜುವೆಲಾದ ಸುಪ್ರೀಂ ಕೋರ್ಟ್ ಭಾನುವಾರ (ಜ.4) ಆದೇಶಿಸಿದೆ ಎಂದು ವರದಿಯಾಗಿದೆ.

ಆಡಳಿತಾತ್ಮಕ ನಿರಂತರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಷ್ಟ್ರದ ಒಟ್ಟಾರೆ ರಕ್ಷಣೆಯನ್ನು ನೋಡಿಕೊಳ್ಳಲು ರೊಡ್ರಿಗಸ್ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

56 ವರ್ಷದ ಡೆಲ್ಸಿ ರೊಡ್ರಿಗಸ್ ಅವರು ವೆನಿಜುವೆಲಾದ ಸಮಾಜವಾದಿ ಸರ್ಕಾರದಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಇವರು ಅಧ್ಯಕ್ಷ ನಿಕೋಲಾಸ್ ಮಡುರೊ ಅವರ ಅತ್ಯಂತ ಹತ್ತಿರದ ಮತ್ತು ನಂಬಿಗಸ್ತ ವ್ಯಕ್ತಿಗಳಲ್ಲಿ ಒಬ್ಬರು. ಮಡುರೊ ಅವರಿಗೆ ಯಾವಾಗಲೂ ಬೆಂಬಲ ನೀಡುವ ವ್ಯಕ್ತಿ ಕೂಡ ಹೌದು.

ಈ ಹಿಂದೆ ಉಪಾಧ್ಯಕ್ಷೆ, ಹಣಕಾಸು ಸಚಿವೆ ಮತ್ತು ತೈಲ ಸಚಿವೆ ಸೇರಿದಂತೆ ಪ್ರಮುಖ ಹುದ್ದೆಗಳನ್ನು ಇವರು ನಿರ್ವಹಿಸಿದ್ದಾರೆ. ವೆನಿಜುವೆಲಾದ ಮೇಲೆ ಅಮೆರಿಕ ತೀವ್ರ ನಿರ್ಬಂಧಗಳನ್ನು ಹೇರಿದ್ದ ಸಮಯದಲ್ಲಿ ಮತ್ತು ಹಣದ ಮೌಲ್ಯ ತೀವ್ರವಾಗಿ ಕುಸಿದು ಹಣದುಬ್ಬರ ತುಂಬಾ ಹೆಚ್ಚಾದ ಸಮಯದಲ್ಲಿ, ದೇಶದ ಆರ್ಥಿಕತೆಯ ಜವಾಬ್ದಾರಿಯನ್ನು ರೊಡ್ರಿಗಸ್ ಹೊತ್ತಿದ್ದರು. ಅಂದರೆ, ಹಣಕಾಸು ಮತ್ತು ತೈಲದಂತಹ ಮುಖ್ಯ ವಿಷಯಗಳ ಮೇಲೆ ಇವರ ನಿಯಂತ್ರಣ ತುಂಬಾ ದೊಡ್ಡದಾಗಿತ್ತು.

ತಮ್ಮ ಆಡಳಿತವನ್ನು ರಕ್ಷಿಸಿಕೊಳ್ಳಲು ತುಂಬಾ ಆಕ್ರಮಣಕಾರಿಯಾಗಿ ಮತ್ತು ಧೈರ್ಯವಾಗಿ ಹೋರಾಡುತ್ತಾರೆ ಎಂಬ ಕಾರಣಕ್ಕಾಗಿ ರೊಡ್ರಿಗಸ್ ಅವರನ್ನು ನಿಕೋಲಾಸ್ ಮಡುರೊ ಹಿಂದೆಯೊಮ್ಮೆ ‘ಹುಲಿ’ ಕೊಂಡಾಡಿದ್ದರು.

ರೊಡ್ರಿಗಸ್ ಅವರು ರಾಜಧಾನಿ ಕಾರಕಸ್ ನಗರದಲ್ಲಿ ಹುಟ್ಟಿದವರು. ಅವರ ತಂದೆ ಜಾರ್ಜ್ ಆಂಟೋನಿಯೋ ರೊಡ್ರಿಗಸ್ ಎಡಪಂಥೀಯ ಗೆರಿಲ್ಲಾ ನಾಯಕರಾಗಿದ್ದರು. ಅವರೇ ‘ಸೋಶಿಯಲಿಸ್ಟ್ ಲೀಗ್’ (Socialist League) ಎಂಬ ಸಂಘಟನೆಯನ್ನು ಸ್ಥಾಪಿಸಿದವರು.

ಡೆಲ್ಸಿ ರೊಡ್ರಿಗಸ್ ಅವರು ಎಡಪಂಥೀಯ ರಾಜಕೀಯದ ಹಿನ್ನೆಲೆಯಿಂದ ಬಂದವರು. ಅದೇ ಎಡಪಂಥೀಯ ಆದರ್ಶಗಳನ್ನು ಅನುಸರಿಸುತ್ತಾ ವೆನಿಜುವೆಲಾದ ಸಮಾಜವಾದಿ ಸರ್ಕಾರದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ರೋಡ್ರಿಗಸ್ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಂಧಿತ ಅಧ್ಯಕ್ಷ ನಿಕೋಲಸ್ ಮಡರೊ ಮತ್ತು ಅವರ ಪತ್ನಿಯನ್ನು ಬಿಡುಗಡೆ ಮಾಡುವಂತೆ ಅಮೆರಿಕಗೆ ಆಗ್ರಹಿಸಿದ್ದಾರೆ.

ಮುಂಜಾನೆ ಅನಧಿಕೃತವಾಗಿ ದೇಶದೊಳಗೆ ನುಗ್ಗಿ ಅಧ್ಯಕ್ಷರನ್ನು ಬಂಧಿಸಿರುವ ಅಮೆರಿಕದ ಕೃತ್ಯ ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ದವಾದದು ಎಂದು ಅವರು ಹೇಳಿದ್ದಾರೆ. ಅಮೆರಿಕದ ಈ ನಡೆಯನ್ನು ಲ್ಯಾಟಿನ್ ಅಮೆರಿಕದ ಎಲ್ಲಾ ದೇಶಗಳು ಖಂಡಿಸುವಂತೆ ಮನವಿ ಮಾಡಿದ್ದಾರೆ.

ಅಮೆರಿಕ ಬಂಧಿಸಿದರೂ ಮಡುರೊ ಅವರು ವೆನಿಜುವೆಲಾದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ರೊಡ್ರಿಗಸ್ ಹೇಳಿದ್ದಾರೆ.

ಮಡುರೊ ಅವರನ್ನು ಬಂಧಿಸಿರುವ ಅಮೆರಿಕ ಸೇನೆ ನ್ಯೂಯಾರ್ಕ್‌ಗೆ ಕರೆದೊಯ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನಿಜುವೆಲಾವನ್ನು ಸದ್ಯಕ್ಕೆ ಅಮೆರಿಕ ಆಳಲಿದೆ ಎಂದು ತಿಳಿಸಿದ್ದಾರೆ. ಈ ನಡುವೆ ರೊಡ್ರಿಗಸ್ ಅವರು ಅಧಿಕಾರ ವಹಿಸಿಕೊಂಡಿದ್ದು, ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ.

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...