Homeಅಂತರಾಷ್ಟ್ರೀಯವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಅಮೆರಿಕ ಸೇನೆ ಬಂಧಿಸಿರುವ ಹಿನ್ನೆಲೆ, ಹಂಗಾಮಿ ಅಧ್ಯಕ್ಷೆಯಾಗಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ವೆನಿಜುವೆಲಾದ ಸುಪ್ರೀಂ ಕೋರ್ಟ್ ಭಾನುವಾರ (ಜ.4) ಆದೇಶಿಸಿದೆ ಎಂದು ವರದಿಯಾಗಿದೆ.

ಆಡಳಿತಾತ್ಮಕ ನಿರಂತರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಷ್ಟ್ರದ ಒಟ್ಟಾರೆ ರಕ್ಷಣೆಯನ್ನು ನೋಡಿಕೊಳ್ಳಲು ರೊಡ್ರಿಗಸ್ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

56 ವರ್ಷದ ಡೆಲ್ಸಿ ರೊಡ್ರಿಗಸ್ ಅವರು ವೆನಿಜುವೆಲಾದ ಸಮಾಜವಾದಿ ಸರ್ಕಾರದಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಇವರು ಅಧ್ಯಕ್ಷ ನಿಕೋಲಾಸ್ ಮಡುರೊ ಅವರ ಅತ್ಯಂತ ಹತ್ತಿರದ ಮತ್ತು ನಂಬಿಗಸ್ತ ವ್ಯಕ್ತಿಗಳಲ್ಲಿ ಒಬ್ಬರು. ಮಡುರೊ ಅವರಿಗೆ ಯಾವಾಗಲೂ ಬೆಂಬಲ ನೀಡುವ ವ್ಯಕ್ತಿ ಕೂಡ ಹೌದು.

ಈ ಹಿಂದೆ ಉಪಾಧ್ಯಕ್ಷೆ, ಹಣಕಾಸು ಸಚಿವೆ ಮತ್ತು ತೈಲ ಸಚಿವೆ ಸೇರಿದಂತೆ ಪ್ರಮುಖ ಹುದ್ದೆಗಳನ್ನು ಇವರು ನಿರ್ವಹಿಸಿದ್ದಾರೆ. ವೆನಿಜುವೆಲಾದ ಮೇಲೆ ಅಮೆರಿಕ ತೀವ್ರ ನಿರ್ಬಂಧಗಳನ್ನು ಹೇರಿದ್ದ ಸಮಯದಲ್ಲಿ ಮತ್ತು ಹಣದ ಮೌಲ್ಯ ತೀವ್ರವಾಗಿ ಕುಸಿದು ಹಣದುಬ್ಬರ ತುಂಬಾ ಹೆಚ್ಚಾದ ಸಮಯದಲ್ಲಿ, ದೇಶದ ಆರ್ಥಿಕತೆಯ ಜವಾಬ್ದಾರಿಯನ್ನು ರೊಡ್ರಿಗಸ್ ಹೊತ್ತಿದ್ದರು. ಅಂದರೆ, ಹಣಕಾಸು ಮತ್ತು ತೈಲದಂತಹ ಮುಖ್ಯ ವಿಷಯಗಳ ಮೇಲೆ ಇವರ ನಿಯಂತ್ರಣ ತುಂಬಾ ದೊಡ್ಡದಾಗಿತ್ತು.

ತಮ್ಮ ಆಡಳಿತವನ್ನು ರಕ್ಷಿಸಿಕೊಳ್ಳಲು ತುಂಬಾ ಆಕ್ರಮಣಕಾರಿಯಾಗಿ ಮತ್ತು ಧೈರ್ಯವಾಗಿ ಹೋರಾಡುತ್ತಾರೆ ಎಂಬ ಕಾರಣಕ್ಕಾಗಿ ರೊಡ್ರಿಗಸ್ ಅವರನ್ನು ನಿಕೋಲಾಸ್ ಮಡುರೊ ಹಿಂದೆಯೊಮ್ಮೆ ‘ಹುಲಿ’ ಕೊಂಡಾಡಿದ್ದರು.

ರೊಡ್ರಿಗಸ್ ಅವರು ರಾಜಧಾನಿ ಕಾರಕಸ್ ನಗರದಲ್ಲಿ ಹುಟ್ಟಿದವರು. ಅವರ ತಂದೆ ಜಾರ್ಜ್ ಆಂಟೋನಿಯೋ ರೊಡ್ರಿಗಸ್ ಎಡಪಂಥೀಯ ಗೆರಿಲ್ಲಾ ನಾಯಕರಾಗಿದ್ದರು. ಅವರೇ ‘ಸೋಶಿಯಲಿಸ್ಟ್ ಲೀಗ್’ (Socialist League) ಎಂಬ ಸಂಘಟನೆಯನ್ನು ಸ್ಥಾಪಿಸಿದವರು.

ಡೆಲ್ಸಿ ರೊಡ್ರಿಗಸ್ ಅವರು ಎಡಪಂಥೀಯ ರಾಜಕೀಯದ ಹಿನ್ನೆಲೆಯಿಂದ ಬಂದವರು. ಅದೇ ಎಡಪಂಥೀಯ ಆದರ್ಶಗಳನ್ನು ಅನುಸರಿಸುತ್ತಾ ವೆನಿಜುವೆಲಾದ ಸಮಾಜವಾದಿ ಸರ್ಕಾರದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ರೋಡ್ರಿಗಸ್ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಂಧಿತ ಅಧ್ಯಕ್ಷ ನಿಕೋಲಸ್ ಮಡರೊ ಮತ್ತು ಅವರ ಪತ್ನಿಯನ್ನು ಬಿಡುಗಡೆ ಮಾಡುವಂತೆ ಅಮೆರಿಕಗೆ ಆಗ್ರಹಿಸಿದ್ದಾರೆ.

ಮುಂಜಾನೆ ಅನಧಿಕೃತವಾಗಿ ದೇಶದೊಳಗೆ ನುಗ್ಗಿ ಅಧ್ಯಕ್ಷರನ್ನು ಬಂಧಿಸಿರುವ ಅಮೆರಿಕದ ಕೃತ್ಯ ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ದವಾದದು ಎಂದು ಅವರು ಹೇಳಿದ್ದಾರೆ. ಅಮೆರಿಕದ ಈ ನಡೆಯನ್ನು ಲ್ಯಾಟಿನ್ ಅಮೆರಿಕದ ಎಲ್ಲಾ ದೇಶಗಳು ಖಂಡಿಸುವಂತೆ ಮನವಿ ಮಾಡಿದ್ದಾರೆ.

ಅಮೆರಿಕ ಬಂಧಿಸಿದರೂ ಮಡುರೊ ಅವರು ವೆನಿಜುವೆಲಾದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ರೊಡ್ರಿಗಸ್ ಹೇಳಿದ್ದಾರೆ.

ಮಡುರೊ ಅವರನ್ನು ಬಂಧಿಸಿರುವ ಅಮೆರಿಕ ಸೇನೆ ನ್ಯೂಯಾರ್ಕ್‌ಗೆ ಕರೆದೊಯ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನಿಜುವೆಲಾವನ್ನು ಸದ್ಯಕ್ಕೆ ಅಮೆರಿಕ ಆಳಲಿದೆ ಎಂದು ತಿಳಿಸಿದ್ದಾರೆ. ಈ ನಡುವೆ ರೊಡ್ರಿಗಸ್ ಅವರು ಅಧಿಕಾರ ವಹಿಸಿಕೊಂಡಿದ್ದು, ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ.

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...