Homeಮುಖಪುಟಮಹಾರಾಷ್ಟ್ರ| ಬಂಗಾಳಿ ಭಾಷೆ ಮಾತನಾಡಿದ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಮೇಲೆ ಹಲ್ಲೆ

ಮಹಾರಾಷ್ಟ್ರ| ಬಂಗಾಳಿ ಭಾಷೆ ಮಾತನಾಡಿದ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಮೇಲೆ ಹಲ್ಲೆ

- Advertisement -
- Advertisement -

ತಮ್ಮ ಮಾತೃ ಭಾಷೆ ಬಂಗಾಳಿಯಲ್ಲಿ ಮಾತನಾಡಿದ್ದಕ್ಕಾಗಿ ಬಾಂಗ್ಲಾದೇಶೀಯರು ಎಂದು ಶಂಕಿಸಿ ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ಮೂವರು ವಲಸೆ ಕಾರ್ಮಿಕರ ಮೇಲೆ ಮಹಾರಾಷ್ಟ್ರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಕಾರ್ಮಿಕರು ತಮ್ಮ ರಾಜ್ಯಕ್ಕೆ ಹಿಂತಿರುಗುತ್ತಿದ್ದಾಗ ಬಿಜೆಪಿ ಆಡಳಿತ ರಾಜ್ಯದಲ್ಲಿ ದಾಳಿ ನಡೆದಿದೆ.

ದಿಲೀಪ್ ಬಾಗ್ಡಿ, ಸಮೀರ್ ಬರುಯಿ ಮತ್ತು ಪಾಂಡಬೇಶ್ವರದ ಮತ್ತೊಬ್ಬ ಸಹೋದ್ಯೋಗಿ ಎಂದು ಗುರುತಿಸಲಾದ ಸಂತ್ರಸ್ತ ಕಾರ್ಮಿಕರು, ಮಹಾರಾಷ್ಟ್ರದಿಂದ ಪಶ್ಚಿಮ ಬಂಗಾಳಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಕೆಲವು ಸ್ಥಳೀಯ ಜನರು, ನಾವು ಬಂಗಾಳಿ ಮಾತನಾಡುವುದನ್ನು ಕೇಳಿದಾಗ ತೊಂದರೆ ಪ್ರಾರಂಭವಾಯಿತು ಎಂದು ಅವರು ಹೇಳಿದ್ದಾರೆ. ಕಾರ್ಮಿಕರ ಪ್ರಕಾರ, ನಾವು ಮೊದಲು ಪ್ರಯಾಣ ಟಿಕೆಟ್‌ಗಳನ್ನು ಖರೀದಿಸುವಾಗ ಹಿಂದಿಯಲ್ಲಿ ಮಾತನಾಡುತ್ತಿದ್ದೆವು, ಆದರೆ ಖಾಸಗಿಯಾಗಿ ಮಾತನಾಡುವಾಗ ಬಂಗಾಳಿ ಮಾತಾಡುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ.

ಬಂಗಾಳಿ ಮಾತನಾಡುತ್ತಿದ್ದ ಕಾರ್ಮಿಕರನ್ನು ತಡೆದ ಸ್ಥಳೀಯರು ಅವರ ಗುರುತನ್ನು ಪ್ರಶ್ನಿಸಿದರು. ನಾವು ಪಶ್ಚಿಮ ಬಂಗಾಳದ ಭಾರತೀಯ ನಾಗರಿಕರು ಎಂದು ಪದೇ ಪದೇ ಹೇಳಿಕೊಂಡರೂ, ಸ್ಥಳೀಯರು ಅವರನ್ನು ಬಾಂಗ್ಲಾದೇಶಿಗಳು ಎಂದು ಒತ್ತಾಯಿಸಿ ಥಳಿಸಿದರು ಎಂದು ಅವರು ಆರೋಪಿಸಿದರು. ನಮ್ಮನ್ನು ಬಲವಂತವಾಗಿ ಬಸ್‌ನಿಂದ ಇಳಿಸಿ ಬೇರೆ ಸ್ಥಳಕ್ಕೆ ಸ್ಥಳಾಂತರಿಸಿ, ಆಧಾರ್ ಕಾರ್ಡ್‌ಗಳನ್ನು ಪರಿಶೀಲಿಸಲಾಯಿತು ಎಂದು ಕಾರ್ಮಿಕರು ಹೇಳಿದರು.

“ನಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸಿದ ನಂತರವೂ, ನಾವು ಭಾರತೀಯರು ಎಂದು ಒಪ್ಪಿಕೊಳ್ಳಲು ಅವರು ನಿರಾಕರಿಸಿದರು” ಎಂದು ಸಮೀರ್ ಬರುಯಿ ಘಟನೆಯನ್ನು ವಿವರಿಸುತ್ತಾ ಹೇಳಿದರು.

ಕಾರ್ಮಿಕರು ತಮ್ಮ ಮೇಲೆ ತೀವ್ರ ಹಿಂಸಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಸಿ ಚಹಾವನ್ನು ತಲೆಯ ಮೇಲೆ ಸುರಿದು, ತಲೆ ಮತ್ತು ಹೊಟ್ಟೆಗೆ ಮೇಲೆ ಒದ್ದರು. ದಾಳಿ ತಡೆಯುವ ಪ್ರಯತ್ನದಲ್ಲಿ, ಓರ್ವ ಕಾರ್ಮಿಕ ಅಸ್ವಸ್ಥನಾದಂತೆ ನಟಿಸಿದ ನಂತರವೂ ಹಲ್ಲೆ ಮುಂದುವರೆಯಿತು ಎಂದು ತಮ್ಮ ಅಸಹಾಯಕ ಸ್ಥಿತಿ ಕುರಿತು ಮಾತನಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ, ವಿಶೇಷವಾಗಿ ಒಡಿಶಾ ಮತ್ತು ರಾಜಸ್ಥಾನ ಸೇರಿದಂತೆ ಬಿಜೆಪಿ ಆಡಳಿತವಿರುವ ಪ್ರದೇಶಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರ ಮೇಲೆ ಕಿರುಕುಳ ಮತ್ತು ಹಲ್ಲೆ ನಡೆಯುತ್ತಿರುವ ಬಗ್ಗೆ ಹೆಚ್ಚುತ್ತಿರುವ ದೂರುಗಳ ಮಧ್ಯೆ ಈ ಘಟನೆ ನಡೆದಿದೆ.

ಕಾರ್ಮಿಕರು ತವರಿಗೆ ಹಿಂದಿರುಗಿದ ನಂತರ, ಪಾಂಡಬೇಶ್ವರ ಶಾಸಕ ನರೇಂದ್ರನಾಥ್ ಚಕ್ರವರ್ತಿ ಭಾನುವಾರ ಅವರನ್ನು ಭೇಟಿ ಮಾಡಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ದೇಶಾದ್ಯಂತ ಬಂಗಾಳಿ ಮಾತನಾಡುವ ಜನರಿಗೆ ಹೆಚ್ಚುತ್ತಿರುವ ಪ್ರತಿಕೂಲ ವಾತಾವರಣಕ್ಕೆ ಅವರು ಕೇಂದ್ರ ಸರ್ಕಾರವನ್ನು ದೂಷಿಸಿದರು.

“ಇದು ಬಂಗಾಳಿಗಳ ವಿರುದ್ಧ ತೀವ್ರ ಕ್ರೌರ್ಯದ ಪ್ರದರ್ಶನವಾಗಿದೆ. ಪಶ್ಚಿಮ ಬಂಗಾಳವು ದೇಶದ ಎಲ್ಲ ಭಾಗಗಳ ಜನರನ್ನು ಸ್ವಾಗತಿಸಿದರೂ, ಬಂಗಾಳಿಗಳನ್ನು ಬೇರೆಡೆ ಗುರಿಯಾಗಿಸಲಾಗುತ್ತಿದೆ. ಜನರು ಇದನ್ನು ಕ್ಷಮಿಸುವುದಿಲ್ಲ” ಎಂದು ಚಕ್ರವರ್ತಿ ಹೇಳಿದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಸ್ಥಳೀಯ ಬಿಜೆಪಿ ನಾಯಕ ದಿಲೀಪ್ ಚಕ್ರವರ್ತಿ, ಪಶ್ಚಿಮ ಬಂಗಾಳ ಸರ್ಕಾರವನ್ನು ದೂಷಿಸಿ, ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಂದಾಗಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಮಹಾರಾಷ್ಟ್ರ, ಗುಜರಾತ್ ಮತ್ತು ಛತ್ತೀಸ್‌ಗಢಕ್ಕೆ ವಲಸೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಘಟನೆಯ ಹಿಂದೆ ರಾಜಕೀಯ ಹಿನ್ನೆಲೆ ಇರಬಹುದು ಎಂದು ಬಿಜೆಪಿ ಸೂಚಿಸಿದ್ದು, ಕಾರ್ಮಿಕರು ನೀಡಿದ ಹೇಳಿಕೆಗಳಲ್ಲಿ ವ್ಯತ್ಯಾಸ ಇದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...