Homeಅಂತರಾಷ್ಟ್ರೀಯ"ನನ್ನನ್ನು ಅಪಹರಿಸಲಾಗಿದೆ, ನಾನು ಈಗಲೂ ವೆನೆಜುವೆಲಾದ ಅಧ್ಯಕ್ಷ" : ಯುಎಸ್‌ ಕೋರ್ಟ್ ಮುಂದೆ ನಿಕೋಲಸ್ ಮಡುರೊ...

“ನನ್ನನ್ನು ಅಪಹರಿಸಲಾಗಿದೆ, ನಾನು ಈಗಲೂ ವೆನೆಜುವೆಲಾದ ಅಧ್ಯಕ್ಷ” : ಯುಎಸ್‌ ಕೋರ್ಟ್ ಮುಂದೆ ನಿಕೋಲಸ್ ಮಡುರೊ ಹೇಳಿಕೆ

- Advertisement -
- Advertisement -

“ಅಮೆರಿಕ ಮಾಡಿರುವ ಮಾದಕವಸ್ತು ಕಳ್ಳಸಾಗಣೆ ಆರೋಪ ಪ್ರಕರಣಗಳಲ್ಲಿ ನಾನು ತಪ್ಪೊಪ್ಪಿಕೊಂಡಿಲ್ಲ. ನಾನು ನಿರಪರಾಧಿ, ನನ್ನನ್ನು ಅಪಹರಿಸಲಾಗಿದೆ. ನಾನು ಈಗಲೂ ವೆನೆಜುವೆಲಾದ ಸಾಂವಿಧಾನಿಕ ಅಧ್ಯಕ್ಷ” ಎಂದು ನಿಕೋಲಸ್ ಮಡುರೊ ಅಮೆರಿಕದ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ವೆನೆಜುವೆಲಾ ದೇಶಕ್ಕೆ ನುಗ್ಗಿ ಅಧ್ಯಕ್ಷ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿದ ಅಮೆರಿಕ ಸೇನೆ, ಬಳಿಕ ಇಬ್ಬರನ್ನೂ ನ್ಯೂಯಾರ್ಕ್‌ಗೆ ಸ್ಥಳಾಂತರಿಸಿತ್ತು. ಸೋಮವಾರ (ಜ.5) ಮೊದಲ ಬಾರಿಗೆ ಮಡುರೊ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಮಾದಕವಸ್ತು, ಭಯೋತ್ಪಾದನೆ ಸೇರಿದಂತೆ ಹಲವು ಆರೋಪಗಳ ಮೇಲೆ ವಿಚಾರಣೆಗಾಗಿ ಮಡರೊ ಅವರನ್ನು ಸೋಮವಾರ ಅಮೆರಿಕದ ಜಿಲ್ಲಾ ನ್ಯಾಯಾಧೀಶ ಆಲ್ವಿನ್ ಕೆ ಹೆಲ್ಲರ್‌ಸ್ಟೈನ್ ಅವರ ಮುಂದೆ ಹಾಜರುಪಡಿಸಲಾಗಿತ್ತು ಎಂದು ಸುದ್ದಿ ಸಂಸ್ಥೆ ಅಲ್ ಜಝೀರಾ ವರದಿ ಮಾಡಿದೆ.

ವಿಚಾರಣೆ ವೇಳೆ ಮಡುರೊ ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಕೂಡ ತಪ್ಪೊಪ್ಪಿಕೊಂಡಿಲ್ಲ. ಗಂಡ-ಹೆಂಡತಿ ಇಬ್ಬರೂ ಜಾಮೀನು ಅಥವಾ ಬಿಡುಗಡೆಯನ್ನು ಕೋರಿಲ್ಲ. ನ್ಯಾಯಾಧೀಶರು ಮಡುರೊ ಅವರ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ನಿಗದಿಪಡಿಸಿದ್ದಾರೆ.

ಈ ನಡುವೆ ಕ್ಯಾರಕಾಸ್‌ನಲ್ಲಿ, ನಿಕೋಲಸ್ ಮಡುರೊ ಅವರ ಮಗ ನಿಕೋಲಸ್ ಮಡುರೊ ಗುಯೆರಾ, ವೆನೆಜುವೆಲಾದ ರಾಷ್ಟ್ರೀಯ ಅಸೆಂಬ್ಲಿಗೆ ತಮ್ಮ ತಂದೆಯನ್ನು ಅಮೆರಿಕ ‘ಅಪಹರಿಸಿದೆ’ ಎಂದು ಹೇಳಿದ್ದು,ಅವರ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ‘ಅಂತಾರಾಷ್ಟ್ರೀಯ ಒಗ್ಗಟ್ಟಿಗೆ’ ಕರೆ ನೀಡಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.

ಮಡುರೊ ದಂಪತಿಯನ್ನು ಸೆರೆಹಿಡಿಯಲಾದ ಎರಡು ದಿನಗಳ ನಂತರ ನಡೆದ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ನಿಕೋಲಸ್ ಮಡುರೊ ಗುಯೆರಾ, ಅಮೆರಿಕದ ಕಾರ್ಯಾಚರಣೆ ವೆನೆಜುವೆಲಾದ ಸಾರ್ವಭೌಮತ್ವವನ್ನು ಉಲ್ಲಂಘಿಸಿದೆ. ಇಂತಹ ಬೆಳವಣಿಗೆ ಬೇರೆ ದೇಶದಲ್ಲೂ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ.

“ರಾಷ್ಟ್ರದ ಮುಖ್ಯಸ್ಥರ ಅಪಹರಣವನ್ನೇ ನಾವು ಸಾಮಾನ್ಯಗೊಳಿಸಿದರೆ, ಯಾವುದೇ ದೇಶವು ಸುರಕ್ಷಿತವಾಗಿರುವುದಿಲ್ಲ. ಇದು ಪ್ರಾದೇಶಿಕ ಸಮಸ್ಯೆಯಲ್ಲ, ಇದು ಜಾಗತಿಕ ಸ್ಥಿರತೆಗೆ, ಮಾನವೀಯತೆಗೆ ಮತ್ತು ರಾಷ್ಟ್ರಗಳ ಸಾರ್ವಭೌಮ ಸಮಾನತೆಗೆ ನೇರ ಬೆದರಿಕೆಯಾಗಿದೆ” ಎಂದು ನಿಕೋಲಸ್ ಮಡುರೊ ಗುಯೆರಾ ಹೇಳಿದ್ದಾಗಿ ಸಿಎನ್‌ಎನ್ ಉಲ್ಲೇಖಿಸಿದೆ.

ಅಮೆರಿಕವು ಮಡುರೊ ವಿರುದ್ಧ ಮಾದಕವಸ್ತು ಭಯೋತ್ಪಾದನೆ (Narco Terrorism)ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ಇತರ ಆರೋಪಗಳನ್ನು ಹೊರಿಸಿದೆ. ವೆನೆಜುವೆಲಾ ಸರ್ಕಾರ ಈ ಆರೋಪಗಳನ್ನು ತಿರಸ್ಕರಿಸಿದೆ.

ವೆನೆಜುವೆಲಾ ಸರ್ಕಾರವು ಅಮೆರಿಕದ ಕೃತ್ಯವನ್ನು ‘ಮಿಲಿಟರಿ ಆಕ್ರಮಣ’ ಎಂದು ಬಣ್ಣಿಸಿದೆ. ಮಡುರೊ ಮತ್ತು ಫ್ಲೋರ್ಸ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಭಾನುವಾರ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರು ಹಂಗಾಮಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಮೆರಿಕದೊಂದಿಗೆ ಸಹಕರಿಸಲು ಅವರು ನಿರ್ಧರಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಸಂದೇಶವೊಂದರಲ್ಲಿ ರೊಡ್ರಿಗಸ್ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ‘ಗೌರವಯುತ ಸಂಬಂಧಗಳನ್ನು’ ಸ್ಥಾಪಿಸುವ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...