Homeಅಂತರಾಷ್ಟ್ರೀಯ"ನನ್ನನ್ನು ಅಪಹರಿಸಲಾಗಿದೆ, ನಾನು ಈಗಲೂ ವೆನೆಜುವೆಲಾದ ಅಧ್ಯಕ್ಷ" : ಯುಎಸ್‌ ಕೋರ್ಟ್ ಮುಂದೆ ನಿಕೋಲಸ್ ಮಡುರೊ...

“ನನ್ನನ್ನು ಅಪಹರಿಸಲಾಗಿದೆ, ನಾನು ಈಗಲೂ ವೆನೆಜುವೆಲಾದ ಅಧ್ಯಕ್ಷ” : ಯುಎಸ್‌ ಕೋರ್ಟ್ ಮುಂದೆ ನಿಕೋಲಸ್ ಮಡುರೊ ಹೇಳಿಕೆ

- Advertisement -
- Advertisement -

“ಅಮೆರಿಕ ಮಾಡಿರುವ ಮಾದಕವಸ್ತು ಕಳ್ಳಸಾಗಣೆ ಆರೋಪ ಪ್ರಕರಣಗಳಲ್ಲಿ ನಾನು ತಪ್ಪೊಪ್ಪಿಕೊಂಡಿಲ್ಲ. ನಾನು ನಿರಪರಾಧಿ, ನನ್ನನ್ನು ಅಪಹರಿಸಲಾಗಿದೆ. ನಾನು ಈಗಲೂ ವೆನೆಜುವೆಲಾದ ಸಾಂವಿಧಾನಿಕ ಅಧ್ಯಕ್ಷ” ಎಂದು ನಿಕೋಲಸ್ ಮಡುರೊ ಅಮೆರಿಕದ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ವೆನೆಜುವೆಲಾ ದೇಶಕ್ಕೆ ನುಗ್ಗಿ ಅಧ್ಯಕ್ಷ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿದ ಅಮೆರಿಕ ಸೇನೆ, ಬಳಿಕ ಇಬ್ಬರನ್ನೂ ನ್ಯೂಯಾರ್ಕ್‌ಗೆ ಸ್ಥಳಾಂತರಿಸಿತ್ತು. ಸೋಮವಾರ (ಜ.5) ಮೊದಲ ಬಾರಿಗೆ ಮಡುರೊ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಮಾದಕವಸ್ತು, ಭಯೋತ್ಪಾದನೆ ಸೇರಿದಂತೆ ಹಲವು ಆರೋಪಗಳ ಮೇಲೆ ವಿಚಾರಣೆಗಾಗಿ ಮಡರೊ ಅವರನ್ನು ಸೋಮವಾರ ಅಮೆರಿಕದ ಜಿಲ್ಲಾ ನ್ಯಾಯಾಧೀಶ ಆಲ್ವಿನ್ ಕೆ ಹೆಲ್ಲರ್‌ಸ್ಟೈನ್ ಅವರ ಮುಂದೆ ಹಾಜರುಪಡಿಸಲಾಗಿತ್ತು ಎಂದು ಸುದ್ದಿ ಸಂಸ್ಥೆ ಅಲ್ ಜಝೀರಾ ವರದಿ ಮಾಡಿದೆ.

ವಿಚಾರಣೆ ವೇಳೆ ಮಡುರೊ ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಕೂಡ ತಪ್ಪೊಪ್ಪಿಕೊಂಡಿಲ್ಲ. ಗಂಡ-ಹೆಂಡತಿ ಇಬ್ಬರೂ ಜಾಮೀನು ಅಥವಾ ಬಿಡುಗಡೆಯನ್ನು ಕೋರಿಲ್ಲ. ನ್ಯಾಯಾಧೀಶರು ಮಡುರೊ ಅವರ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ನಿಗದಿಪಡಿಸಿದ್ದಾರೆ.

ಈ ನಡುವೆ ಕ್ಯಾರಕಾಸ್‌ನಲ್ಲಿ, ನಿಕೋಲಸ್ ಮಡುರೊ ಅವರ ಮಗ ನಿಕೋಲಸ್ ಮಡುರೊ ಗುಯೆರಾ, ವೆನೆಜುವೆಲಾದ ರಾಷ್ಟ್ರೀಯ ಅಸೆಂಬ್ಲಿಗೆ ತಮ್ಮ ತಂದೆಯನ್ನು ಅಮೆರಿಕ ‘ಅಪಹರಿಸಿದೆ’ ಎಂದು ಹೇಳಿದ್ದು,ಅವರ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ‘ಅಂತಾರಾಷ್ಟ್ರೀಯ ಒಗ್ಗಟ್ಟಿಗೆ’ ಕರೆ ನೀಡಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.

ಮಡುರೊ ದಂಪತಿಯನ್ನು ಸೆರೆಹಿಡಿಯಲಾದ ಎರಡು ದಿನಗಳ ನಂತರ ನಡೆದ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ನಿಕೋಲಸ್ ಮಡುರೊ ಗುಯೆರಾ, ಅಮೆರಿಕದ ಕಾರ್ಯಾಚರಣೆ ವೆನೆಜುವೆಲಾದ ಸಾರ್ವಭೌಮತ್ವವನ್ನು ಉಲ್ಲಂಘಿಸಿದೆ. ಇಂತಹ ಬೆಳವಣಿಗೆ ಬೇರೆ ದೇಶದಲ್ಲೂ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ.

“ರಾಷ್ಟ್ರದ ಮುಖ್ಯಸ್ಥರ ಅಪಹರಣವನ್ನೇ ನಾವು ಸಾಮಾನ್ಯಗೊಳಿಸಿದರೆ, ಯಾವುದೇ ದೇಶವು ಸುರಕ್ಷಿತವಾಗಿರುವುದಿಲ್ಲ. ಇದು ಪ್ರಾದೇಶಿಕ ಸಮಸ್ಯೆಯಲ್ಲ, ಇದು ಜಾಗತಿಕ ಸ್ಥಿರತೆಗೆ, ಮಾನವೀಯತೆಗೆ ಮತ್ತು ರಾಷ್ಟ್ರಗಳ ಸಾರ್ವಭೌಮ ಸಮಾನತೆಗೆ ನೇರ ಬೆದರಿಕೆಯಾಗಿದೆ” ಎಂದು ನಿಕೋಲಸ್ ಮಡುರೊ ಗುಯೆರಾ ಹೇಳಿದ್ದಾಗಿ ಸಿಎನ್‌ಎನ್ ಉಲ್ಲೇಖಿಸಿದೆ.

ಅಮೆರಿಕವು ಮಡುರೊ ವಿರುದ್ಧ ಮಾದಕವಸ್ತು ಭಯೋತ್ಪಾದನೆ (Narco Terrorism)ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ಇತರ ಆರೋಪಗಳನ್ನು ಹೊರಿಸಿದೆ. ವೆನೆಜುವೆಲಾ ಸರ್ಕಾರ ಈ ಆರೋಪಗಳನ್ನು ತಿರಸ್ಕರಿಸಿದೆ.

ವೆನೆಜುವೆಲಾ ಸರ್ಕಾರವು ಅಮೆರಿಕದ ಕೃತ್ಯವನ್ನು ‘ಮಿಲಿಟರಿ ಆಕ್ರಮಣ’ ಎಂದು ಬಣ್ಣಿಸಿದೆ. ಮಡುರೊ ಮತ್ತು ಫ್ಲೋರ್ಸ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಭಾನುವಾರ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರು ಹಂಗಾಮಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಮೆರಿಕದೊಂದಿಗೆ ಸಹಕರಿಸಲು ಅವರು ನಿರ್ಧರಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಸಂದೇಶವೊಂದರಲ್ಲಿ ರೊಡ್ರಿಗಸ್ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ‘ಗೌರವಯುತ ಸಂಬಂಧಗಳನ್ನು’ ಸ್ಥಾಪಿಸುವ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...