Homeಮುಖಪುಟಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಜ.5) ತಿರಸ್ಕರಿಸಿದೆ.

ಇದು ನ್ಯಾಯಾಲಯ ನಿರ್ಧರಿಸಬಹುದಾದ ಪ್ರಕರಣವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಹೇಳಿದೆ.

“ಚಾದರ್ ಅರ್ಪಣೆ ಈಗಾಗಲೇ ನಡೆದಿರುವುದರಿಂದ ಅರ್ಜಿ ನಿರರ್ಥಕ ಎಂದಿರುವ ನ್ಯಾಯಾಲಯ, ಇದು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡುವ ವಿಷಯವೇ ಅಲ್ಲ. ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಾಲಯ ತಿಳಿಸಿದೆ.

ಈ ಬಾರಿಯ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ 814ನೇ ಉರೂಸ್ ಕಾರ್ಯಕ್ರಮ 2025ರ ಡಿಸೆಂಬರ್ 22ರಿಂದ 30ರವರೆಗೆ ನಡೆದಿದೆ. ಸಂಪ್ರದಾಯದಂತೆ ಕೇಂದ್ರ ಸರ್ಕಾರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಪರವಾಗಿ, ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಸಚಿವ ಕಿರಣ್ ರಿಜಿಜು ಅಜ್ಮೀರ್‌ಗೆ ತೆರಳಿ ಚಾದರ್ ಅರ್ಪಿಸಿದ್ದಾರೆ.

ಸುಪ್ರೀಂ ಕೋರ್ಟ್ ತಾನು ಈಗ ನೀಡಿರುವ ಆದೇಶ ಅಜ್ಮೀರ್ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ಮೊಕದ್ದಮೆ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಸ್ಪಷ್ಟಪಡಿಸಿದೆ.

ಉರೂಸ್‌ ವೇಳೆ ಅಜ್ಮೀರ್‌ಗೆ ದರ್ಗಾಗೆ ಕೇಂದ್ರ ಸರ್ಕಾರದ ವತಿಯಿಂದ ಚಾದರ್ ಅರ್ಪಿಸುವ ಪದ್ದತಿ 1947ರಲ್ಲಿ ಪ್ರಾರಂಭವಾಯಿತು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯ ಕಾಂತ್, ಈ ವಿಷಯವು ನ್ಯಾಯಸಮ್ಮತವಲ್ಲದ ಕಾರಣ ಪೀಠವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.

ಅಜ್ಮೀರ್ ದರ್ಗಾವನ್ನು ಶಿವನ ದೇಗುಲದ ಮೇಲೆ ನಿರ್ಮಿಸಲಾಗಿದೆ. ಹಾಗಾಗಿ, ಅದನ್ನು ಭಗವಾನ್ ಶ್ರೀ ಸಂಕಟಮೋಚನ್‌ ಮಹಾದೇವ್ ವಿರಾಜಮಾನ್‌ ದೇವಸ್ಥಾನ ಎಂದು ಘೋಷಿಸುವಂತೆ ಕೋರಿ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಅವರು ಅಜ್ಮೀರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಇದೇ ವಿಷ್ಣುಗುಪ್ತಾ ಈ ಹಿಂದೆಯೂ ದರ್ಗಾಗೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅಜ್ಮೀರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನೂ ನ್ಯಾಯಾಲಯ ವಜಾಗೊಳಿಸಿತ್ತು.

ವಿವಾದ ನ್ಯಾಯಾಲಯದಲ್ಲಿರುವಾಗ ಕೇಂದ್ರ ಸರ್ಕಾರ ಚಾದರ್ ಅರ್ಪಿಸುವುದು ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ನ್ಯಾಯಸಮ್ಮತ ವಿಚಾರಣೆಯ ಹಕ್ಕನ್ನು ಹಾಳುಗೆಡವುತ್ತದೆ. ಈ ಬೆಳವಣಿಗೆಗಳಿಂದಾಗಿ ಇಡೀ ಪ್ರಕರಣ ನೆಲೆ ಕಳೆದುಕೊಳ್ಳುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಚಾದರ್ ನೀಡಬಾರದು ಎಂದು ವಿಷ್ಣಗುಪ್ತಾ ಪ್ರತಿಪಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...