Homeಮುಖಪುಟತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಮತ್ತು ನ್ಯಾಯಮೂರ್ತಿ ಕೆ. ಕೆ ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು ಆದೇಶವನ್ನು ಪ್ರಕಟಿಸುತ್ತಾ, ಹಿಂದಿನ ಮೊಕದ್ದಮೆಗಳಲ್ಲಿ ಈ ವಿಷಯವು ಇತ್ಯರ್ಥವಾಗದ ಕಾರಣ ಏಕ ನ್ಯಾಯಾಧೀಶರ ಆದೇಶವು ರೆಸ್ ಜುಡಿಕಾಟಾದಿಂದ ಪ್ರಭಾವಿತವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ

ರೆಸ್ ಜುಡಿಕಾಟಾ ಎಂದರೆ ಒಂದೇ ವಿಷಯದಲ್ಲಿ ಒಮ್ಮೆ ತೀರ್ಪು ಬಂದ ನಂತರ ಮತ್ತೆ ಅದೇ ಪಕ್ಷಗಳ ನಡುವೆ ಅದೇ ವಿಷಯವನ್ನು ಮರುವಿಚಾರಣೆಗೆ ತೆಗೆದುಕೊಳ್ಳುವಂತಿಲ್ಲ ಎಂಬ ನ್ಯಾಯ ಸಿದ್ಧಾಂತ. ಆದರೆ, ಇಲ್ಲಿ ಏಕಸದಸ್ಯ ಪೀಠದ ಆದೇಶದಲ್ಲಿರುವ ವಿಷಯವು ಹಿಂದಿನ ದಾವೆಗಳಲ್ಲಿ ನಿರ್ಧಾರಕ್ಕೆ ಬಂದಿರಲಿಲ್ಲ, ಆದ್ದರಿಂದ ರೆಸ್ ಜುಡಿಕಾಟಾ ಅನ್ವಯಿಸುವುದಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳು, ಹಜರತ್ ಸುಲ್ತಾನ್ ಸಿಕಂರ್ ಬಾದುಷಾ ಅವುಲಿಯಾ ದರ್ಗಾ ಸೇರಿದಂತೆ ಮೇಲ್ಮನವಿದಾರರು, ಆಗಮ ಶಾಸ್ತ್ರವು ಸ್ಥಳದಲ್ಲಿ ದೀಪ ಬೆಳಗುವುದನ್ನು ತಡೆಯುತ್ತದೆ ಎಂದು ತೋರಿಸಲು ಪ್ರಬಲ ಪುರಾವೆಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪೀಠ ತಿಳಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ‘ಕಾಲ್ಪನಿಕ ಭೂತ’

“ದೇವಸ್ಥಾನದ ಪ್ರತಿನಿಧಿಗಳು ವರ್ಷದಲ್ಲಿ ಒಂದು ನಿರ್ದಿಷ್ಟ ದಿನದಂದು ಕಲ್ಲಿನ ಕಂಬದ ಬಳಿ ದೀಪ ಹಚ್ಚಲು ಅವಕಾಶ ನೀಡುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತದೆ ಎಂಬ ರಾಜ್ಯ ಸರ್ಕಾರದ ಆತಂಕವು ಹಾಸ್ಯಾಸ್ಪದ ಮತ್ತು ನಂಬಲು ಕಷ್ಟ. ಅಂತಹ ಅಡಚಣೆಯನ್ನು ರಾಜ್ಯವೇ ಪ್ರಾಯೋಜಿಸಿದರೆ ಮಾತ್ರ ಅದು ಸಂಭವಿಸಬಹುದು. ಯಾವುದೇ ರಾಜ್ಯವು ತಮ್ಮ ರಾಜಕೀಯ ಕಾರ್ಯಸೂಚಿಯನ್ನು ಸಾಧಿಸಲು ಈ ಮಟ್ಟಕ್ಕೆ ಇಳಿಯಬಾರದು ಎಂದು ನಾವು ಪ್ರಾರ್ಥಿಸುತ್ತೇವೆ ಎಂಬುವುದಾಗಿ ನ್ಯಾಯಾಲಯ ಹೇಳಿದೆ. ಹಾಗೆಯೇ, ದರ್ಗಾ ಪಕ್ಷವು ದೀಪ ಸ್ತಂಭವು ತಮಗೆ ಸೇರಿದೆ ಎಂದು ವಾದಿಸಿದ್ದನ್ನು ‘ದುಷ್ಟತನದ ವಾದ’ ಎಂದು ಕರೆದು, ಅದು ಸಮುದಾಯಗಳ ನಡುವೆ ಅನುಮಾನವನ್ನು ಹೆಚ್ಚಿಸುತ್ತದೆ ಎಂದು ಟೀಕಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಇರುವ ಗ್ರಹಿಕೆಯು, ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ಮುಂದೆ ಅನುಮಾನಕ್ಕೆ ಒಳಪಡಿಸಲು ರಾಜ್ಯ ಅಧಿಕಾರಿಗಳು ಸೃಷ್ಟಿಸಿದ ಕಾಲ್ಪನಿಕ ಭೂತವಾಗಿದೆ” ಎಂದು ಪೀಠ ಹೇಳಿದೆ.

ಜಿಲ್ಲಾಡಳಿತವು ಈ ಸಮಸ್ಯೆಯನ್ನು ಮಧ್ಯಸ್ಥಿಕೆಯ ಮೂಲಕ ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಒಂದು ಅವಕಾಶವಾಗಿ ತೆಗೆದುಕೊಳ್ಳಬೇಕಾಗಿತ್ತು ಎಂದಿದೆ.

ತಿರುಪರನ್‌ಕುಂದ್ರಂ ಬೆಟ್ಟವು ಸಂರಕ್ಷಿತ ತಾಣವಾಗಿರುವುದರಿಂದ ಯಾವುದೇ ಚಟುವಟಿಕೆಯು ಎಎಸ್‌ಐ ಕಾಯ್ದೆಯ ಪ್ರಕಾರ ಇರಬೇಕು ಎಂದು ಪೀಠ ಹೇಳಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯೊಂದಿಗೆ ಸಮಾಲೋಚಿಸಿದ ನಂತರ ದೀಪವನ್ನು ಬೆಳಗಿಸಬಹುದು ಮತ್ತು ವ್ಯಕ್ತಿಗಳ ಸಂಖ್ಯೆಯನ್ನು ನಿಗದಿಪಡಿಸಬಹುದು ಎಂದು ತಿಳಿಸಿದೆ.

ಮಧುರೈನ ತಿರುಪರನ್‌ಕುಂದ್ರಂನಲ್ಲಿರುವ ಅರುಲ್ಮಿಗು ಸುಬ್ರಮಣಿಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯು ತಿರುಪರನ್‌ಕುಂದ್ರಂ ಬೆಟ್ಟಗಳ ಮೇಲಿರುವ ದೀಪಥೂನ್ (ಪ್ರಾಚೀನ ಕಲ್ಲಿನ ದೀಪ ಸ್ತಂಭ) ನಲ್ಲಿ ಕಾರ್ತಿಗೈ ದೀಪವನ್ನು ಬೆಳಗಿಸಬೇಕೆಂದು ಡಿಸೆಂಬರ್ 1ರಂದು ಏಕ ಸದಸ್ಯ ನ್ಯಾಯಾಧೀಶರು ನೀಡಿದ ತೀರ್ಪಿನಿಂದ ಉದ್ಭವಿಸಿದ ಮೇಲ್ಮನವಿಗಳ ಗುಂಪಿನ ಮೇಲೆ ಈ ಆದೇಶಗಳನ್ನು ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...