Homeಮುಖಪುಟತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಮತ್ತು ನ್ಯಾಯಮೂರ್ತಿ ಕೆ. ಕೆ ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು ಆದೇಶವನ್ನು ಪ್ರಕಟಿಸುತ್ತಾ, ಹಿಂದಿನ ಮೊಕದ್ದಮೆಗಳಲ್ಲಿ ಈ ವಿಷಯವು ಇತ್ಯರ್ಥವಾಗದ ಕಾರಣ ಏಕ ನ್ಯಾಯಾಧೀಶರ ಆದೇಶವು ರೆಸ್ ಜುಡಿಕಾಟಾದಿಂದ ಪ್ರಭಾವಿತವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ

ರೆಸ್ ಜುಡಿಕಾಟಾ ಎಂದರೆ ಒಂದೇ ವಿಷಯದಲ್ಲಿ ಒಮ್ಮೆ ತೀರ್ಪು ಬಂದ ನಂತರ ಮತ್ತೆ ಅದೇ ಪಕ್ಷಗಳ ನಡುವೆ ಅದೇ ವಿಷಯವನ್ನು ಮರುವಿಚಾರಣೆಗೆ ತೆಗೆದುಕೊಳ್ಳುವಂತಿಲ್ಲ ಎಂಬ ನ್ಯಾಯ ಸಿದ್ಧಾಂತ. ಆದರೆ, ಇಲ್ಲಿ ಏಕಸದಸ್ಯ ಪೀಠದ ಆದೇಶದಲ್ಲಿರುವ ವಿಷಯವು ಹಿಂದಿನ ದಾವೆಗಳಲ್ಲಿ ನಿರ್ಧಾರಕ್ಕೆ ಬಂದಿರಲಿಲ್ಲ, ಆದ್ದರಿಂದ ರೆಸ್ ಜುಡಿಕಾಟಾ ಅನ್ವಯಿಸುವುದಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳು, ಹಜರತ್ ಸುಲ್ತಾನ್ ಸಿಕಂರ್ ಬಾದುಷಾ ಅವುಲಿಯಾ ದರ್ಗಾ ಸೇರಿದಂತೆ ಮೇಲ್ಮನವಿದಾರರು, ಆಗಮ ಶಾಸ್ತ್ರವು ಸ್ಥಳದಲ್ಲಿ ದೀಪ ಬೆಳಗುವುದನ್ನು ತಡೆಯುತ್ತದೆ ಎಂದು ತೋರಿಸಲು ಪ್ರಬಲ ಪುರಾವೆಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪೀಠ ತಿಳಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ‘ಕಾಲ್ಪನಿಕ ಭೂತ’

“ದೇವಸ್ಥಾನದ ಪ್ರತಿನಿಧಿಗಳು ವರ್ಷದಲ್ಲಿ ಒಂದು ನಿರ್ದಿಷ್ಟ ದಿನದಂದು ಕಲ್ಲಿನ ಕಂಬದ ಬಳಿ ದೀಪ ಹಚ್ಚಲು ಅವಕಾಶ ನೀಡುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತದೆ ಎಂಬ ರಾಜ್ಯ ಸರ್ಕಾರದ ಆತಂಕವು ಹಾಸ್ಯಾಸ್ಪದ ಮತ್ತು ನಂಬಲು ಕಷ್ಟ. ಅಂತಹ ಅಡಚಣೆಯನ್ನು ರಾಜ್ಯವೇ ಪ್ರಾಯೋಜಿಸಿದರೆ ಮಾತ್ರ ಅದು ಸಂಭವಿಸಬಹುದು. ಯಾವುದೇ ರಾಜ್ಯವು ತಮ್ಮ ರಾಜಕೀಯ ಕಾರ್ಯಸೂಚಿಯನ್ನು ಸಾಧಿಸಲು ಈ ಮಟ್ಟಕ್ಕೆ ಇಳಿಯಬಾರದು ಎಂದು ನಾವು ಪ್ರಾರ್ಥಿಸುತ್ತೇವೆ ಎಂಬುವುದಾಗಿ ನ್ಯಾಯಾಲಯ ಹೇಳಿದೆ. ಹಾಗೆಯೇ, ದರ್ಗಾ ಪಕ್ಷವು ದೀಪ ಸ್ತಂಭವು ತಮಗೆ ಸೇರಿದೆ ಎಂದು ವಾದಿಸಿದ್ದನ್ನು ‘ದುಷ್ಟತನದ ವಾದ’ ಎಂದು ಕರೆದು, ಅದು ಸಮುದಾಯಗಳ ನಡುವೆ ಅನುಮಾನವನ್ನು ಹೆಚ್ಚಿಸುತ್ತದೆ ಎಂದು ಟೀಕಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಇರುವ ಗ್ರಹಿಕೆಯು, ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ಮುಂದೆ ಅನುಮಾನಕ್ಕೆ ಒಳಪಡಿಸಲು ರಾಜ್ಯ ಅಧಿಕಾರಿಗಳು ಸೃಷ್ಟಿಸಿದ ಕಾಲ್ಪನಿಕ ಭೂತವಾಗಿದೆ” ಎಂದು ಪೀಠ ಹೇಳಿದೆ.

ಜಿಲ್ಲಾಡಳಿತವು ಈ ಸಮಸ್ಯೆಯನ್ನು ಮಧ್ಯಸ್ಥಿಕೆಯ ಮೂಲಕ ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಒಂದು ಅವಕಾಶವಾಗಿ ತೆಗೆದುಕೊಳ್ಳಬೇಕಾಗಿತ್ತು ಎಂದಿದೆ.

ತಿರುಪರನ್‌ಕುಂದ್ರಂ ಬೆಟ್ಟವು ಸಂರಕ್ಷಿತ ತಾಣವಾಗಿರುವುದರಿಂದ ಯಾವುದೇ ಚಟುವಟಿಕೆಯು ಎಎಸ್‌ಐ ಕಾಯ್ದೆಯ ಪ್ರಕಾರ ಇರಬೇಕು ಎಂದು ಪೀಠ ಹೇಳಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯೊಂದಿಗೆ ಸಮಾಲೋಚಿಸಿದ ನಂತರ ದೀಪವನ್ನು ಬೆಳಗಿಸಬಹುದು ಮತ್ತು ವ್ಯಕ್ತಿಗಳ ಸಂಖ್ಯೆಯನ್ನು ನಿಗದಿಪಡಿಸಬಹುದು ಎಂದು ತಿಳಿಸಿದೆ.

ಮಧುರೈನ ತಿರುಪರನ್‌ಕುಂದ್ರಂನಲ್ಲಿರುವ ಅರುಲ್ಮಿಗು ಸುಬ್ರಮಣಿಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯು ತಿರುಪರನ್‌ಕುಂದ್ರಂ ಬೆಟ್ಟಗಳ ಮೇಲಿರುವ ದೀಪಥೂನ್ (ಪ್ರಾಚೀನ ಕಲ್ಲಿನ ದೀಪ ಸ್ತಂಭ) ನಲ್ಲಿ ಕಾರ್ತಿಗೈ ದೀಪವನ್ನು ಬೆಳಗಿಸಬೇಕೆಂದು ಡಿಸೆಂಬರ್ 1ರಂದು ಏಕ ಸದಸ್ಯ ನ್ಯಾಯಾಧೀಶರು ನೀಡಿದ ತೀರ್ಪಿನಿಂದ ಉದ್ಭವಿಸಿದ ಮೇಲ್ಮನವಿಗಳ ಗುಂಪಿನ ಮೇಲೆ ಈ ಆದೇಶಗಳನ್ನು ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...