Homeಅಂತರಾಷ್ಟ್ರೀಯಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : 'ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

- Advertisement -
- Advertisement -

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು ‘ಐತಿಹಾಸಿಕ ಕ್ಷಣ’ ಎಂದು ಬಣ್ಣಿಸಿದ್ದಾರೆ.

ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಯುಕೆಯ ಪ್ಯಾಲೆಸ್ತೀನ್ ರಾಯಭಾರಿ ಹುಸಾಮ್ ಝೊಮ್ಲೋಟ್, “ರಾಯಭಾರ ಕಚೇರಿಯ ಸ್ಥಾಪನೆಯು ‘ಬ್ರಿಟಿಷ್-ಪ್ಯಾಲೆಸ್ತೀನ್’ ಸಂಬಂಧಗಳಲ್ಲಿ ಒಂದು ದೊಡ್ಡ ಮೈಲಿಗಲ್ಲು” ಎಂದಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದ ಯುಕೆ, ಕಳೆದ ಸೆಪ್ಟೆಂಬರ್‌ನಲ್ಲಿ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ಸ್ವತಂತ್ರ ರಾಷ್ಟ್ರ ಎಂದು ಗುರುತಿಸಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ರಾಯಭಾರ ಕಚೇರಿ ತೆರೆಯಲಾಗಿದೆ.

“ಯುಕೆಯಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿಯ ಉದ್ಘಾಟನೆಯ ಒಂದು ಐತಿಹಾಸಿಕ ಕ್ಷಣದಲ್ಲಿ ನಾವೆಲ್ಲ ಒಟ್ಟುಗೂಡಿದ್ದೇವೆ. ಇದು ಪೂರ್ಣ ರಾಜತಾಂತ್ರಿಕ ಸ್ಥಾನಮಾನ ಮತ್ತು ಸವಲತ್ತುಗಳೊಂದಿಗೆ, ನಮ್ಮ ಜನರ ಸಾರ್ವಭೌಮ ರಾಜ್ಯತ್ವ ಮತ್ತು ರಾಷ್ಟ್ರಗಳ ನಡುವೆ ಸಮಾನತೆಯ ಅವಿಭಾಜ್ಯ ಹಕ್ಕಿನ ಸಂಕೇತವಾಗಿದೆ” ಎಂದು ಝೊಮ್ಲೋಟ್ ಹೇಳಿದ್ದಾರೆ.

“ಗಾಝಾ, ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪಶ್ಚಿಮ ದಂಡೆ, ನಿರಾಶ್ರಿತರ ಶಿಬಿರಗಳು ಮತ್ತು ವಲಸೆಗಾರರಾದ್ಯಂತ ಪ್ಯಾಲೆಸ್ತೀನಿಯರ ತಲೆಮಾರುಗಳಿಗೆ ಈ ರಾಯಭಾರ ಕಚೇರಿ ನಮ್ಮ ಗುರುತನ್ನು ನಿರಾಕರಿಸಲಾಗುವುದಿಲ್ಲ, ನಮ್ಮ ಉಪಸ್ಥಿತಿಯನ್ನು ಅಳಿಸಲಾಗುವುದಿಲ್ಲ ಮತ್ತು ನಮ್ಮ ಜೀವನವನ್ನು ಅಪಮೌಲ್ಯಗೊಳಿಸಲು ಸಾಧ್ಯವಿಲ್ಲ ಎಂಬುವುದಕ್ಕೆ ಪುರಾವೆಯಾಗಿದೆ” ಎಂದಿದ್ದಾರೆ.

“ಒಂದು ಶತಮಾನಕ್ಕೂ ಹೆಚ್ಚು ಕಾಲ ಸ್ವಯಂ ನಿರ್ಣಯವನ್ನು ನಿರಾಕರಿಸಿದ ಜನರಿಗೆ, ಇದು ಒಂದು ಸ್ಮರಣೀಯ ಕ್ಷಣ” ಎಂದು ಹೇಳಿದ್ದಾರೆ.

ಅಂದರೆ, ಪ್ಯಾಲೆಸ್ತೀನಿಯರು ಒಂದು ಶತಮಾನಕ್ಕೂ ಹೆಚ್ಚು ಕಾಲ (1917ರ ಬಾಲ್ಫೋರ್ ಘೋಷಣೆಯಿಂದ ಆರಂಭವಾಗಿ, ಇಸ್ರೇಲ್ ಸ್ಥಾಪನೆ, ಆಕ್ರಮಿತ ಪ್ರದೇಶಗಳು ಇತ್ಯಾದಿ ಮೂಲಕ) ತಮ್ಮ ಸ್ವಯಂ ನಿರ್ಣಯದ ಹಕ್ಕನ್ನು (ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸುವ ಹಕ್ಕು) ನಿರಾಕರಿಸಲ್ಪಟ್ಟಿದ್ದಾರೆ. ಹಾಗಾಗಿ, ಅವರಿಗೆಇದು ಒಂದು ಸ್ಮರಣೀಯ ಕ್ಷಣ ಎಂದು ತಿಳಿಸಿದ್ದಾರೆ.

ಯುಕೆ ಎಲ್ಲಾ ಕಾನೂನು ಹಕ್ಕುಗಳು ಮತ್ತು ಬಾಧ್ಯತೆಗಳನ್ನು ನೀಡಿ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ಸ್ವತಂತ್ರ ರಾಷ್ಟ್ರವೆಂದು ಒಪ್ಪಿಕೊಂಡಿದೆ.

ಹೊಸ ರಾಯಭಾರ ಕಚೇರಿಯ ಫಲಕವನ್ನು ಅನಾವರಣಗೊಳಿಸಿದ ನಂತರ, ರಾಜತಾಂತ್ರಿಕ ದಳದ ಮಾರ್ಷಲ್ ಅಲಿಸ್ಟೈರ್ ಹ್ಯಾರಿಸನ್, ಝಮ್ಲೋಟ್ ಅವರ ಹೇಳಿಕೆಗಳಿಗೆ ದನಿಗೂಡಿಸಿದ್ದು, ರಾಯಭಾರ ಕಚೇರಿಯ ಉದ್ಘಾಟನೆಯು ‘ಪ್ಯಾಲೆಸ್ತೀನ್‌ಗೆ ಐತಿಹಾಸಿಕ ಕ್ಷಣ’ ಎಂದು ಹೇಳಿದ್ದಾರೆ.

“ನಮ್ಮ ಎರಡೂ ದೇಶಗಳ ನಡುವಿನ ಸಂಬಂಧದಲ್ಲಿ ಇದು ಬಹಳ ಮುಖ್ಯವಾದ ಕ್ಷಣ. ಇದು ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಒಂದು ಹೆಜ್ಜೆ ಬದಲಾವಣೆಯ ಆರಂಭ” ಎಂದಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಗಾಝಾದ 14 ವರ್ಷದ ಪ್ಯಾಲೆಸ್ತೀನಿಯನ್ ಬಾಲಕ ಉಬೈದಾ ಮಾತನಾಡಿ “ನಾನು ನರಮೇಧದಿಂದ ಬದುಕುಳಿದೆ, ಆದರೆ ನನ್ನ ದೇಹವು ಆಳವಾದ ಗಾಯಗಳನ್ನು ಹೊಂದಿದೆ” ಎಂದು ಹೇಳಿದ್ದಾರೆ.

ತನ್ನ ಕುಟುಂಬದ ಒಂದು ಭಾಗ ಯುಕೆಯಲ್ಲಿದೆ ಎಂದು ಉಬೈದಾ ತಿಳಿಸಿದ್ದು, ಆದರೆ ಅವರ ತಂದೆ ಇನ್ನೂ ಗಾಝಾದಲ್ಲಿದ್ದಾರೆ, ಅಲ್ಲಿ ‘ಜೀವನವು ಇನ್ನೂ ಭಯದಿಂದ ತುಂಬಿದೆ’ ಎಂದು ಹೇಳಿದ್ದಾರೆ.

“ಒಂದು ದಿನ ನಾನು ರಾಯಭಾರಿಯಾಗಬೇಕೆಂದು ಆಶಿಸುತ್ತೇನೆ, ಯುಕೆ ರಾಯಭಾರಿಯದಾರೂ.. ಈ ಮೂಲಕ ನಾನು ನನ್ನ ಜನರಿಗೆ ಸಹಾಯ ಮಾಡಲು ಮತ್ತು ನಮ್ಮ ಧ್ವನಿಯನ್ನು ಪ್ರಪಂಚದಾದ್ಯಂತ ಕೇಳುವಂತೆ ಮಾಡಲು ಕೆಲಸ ಮಾಡಬಹುದು” ಎಂದು ಉಬೈದಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...