Homeಅಂತರಾಷ್ಟ್ರೀಯಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : 'ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

- Advertisement -
- Advertisement -

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು ‘ಐತಿಹಾಸಿಕ ಕ್ಷಣ’ ಎಂದು ಬಣ್ಣಿಸಿದ್ದಾರೆ.

ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಯುಕೆಯ ಪ್ಯಾಲೆಸ್ತೀನ್ ರಾಯಭಾರಿ ಹುಸಾಮ್ ಝೊಮ್ಲೋಟ್, “ರಾಯಭಾರ ಕಚೇರಿಯ ಸ್ಥಾಪನೆಯು ‘ಬ್ರಿಟಿಷ್-ಪ್ಯಾಲೆಸ್ತೀನ್’ ಸಂಬಂಧಗಳಲ್ಲಿ ಒಂದು ದೊಡ್ಡ ಮೈಲಿಗಲ್ಲು” ಎಂದಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದ ಯುಕೆ, ಕಳೆದ ಸೆಪ್ಟೆಂಬರ್‌ನಲ್ಲಿ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ಸ್ವತಂತ್ರ ರಾಷ್ಟ್ರ ಎಂದು ಗುರುತಿಸಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ರಾಯಭಾರ ಕಚೇರಿ ತೆರೆಯಲಾಗಿದೆ.

“ಯುಕೆಯಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿಯ ಉದ್ಘಾಟನೆಯ ಒಂದು ಐತಿಹಾಸಿಕ ಕ್ಷಣದಲ್ಲಿ ನಾವೆಲ್ಲ ಒಟ್ಟುಗೂಡಿದ್ದೇವೆ. ಇದು ಪೂರ್ಣ ರಾಜತಾಂತ್ರಿಕ ಸ್ಥಾನಮಾನ ಮತ್ತು ಸವಲತ್ತುಗಳೊಂದಿಗೆ, ನಮ್ಮ ಜನರ ಸಾರ್ವಭೌಮ ರಾಜ್ಯತ್ವ ಮತ್ತು ರಾಷ್ಟ್ರಗಳ ನಡುವೆ ಸಮಾನತೆಯ ಅವಿಭಾಜ್ಯ ಹಕ್ಕಿನ ಸಂಕೇತವಾಗಿದೆ” ಎಂದು ಝೊಮ್ಲೋಟ್ ಹೇಳಿದ್ದಾರೆ.

“ಗಾಝಾ, ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪಶ್ಚಿಮ ದಂಡೆ, ನಿರಾಶ್ರಿತರ ಶಿಬಿರಗಳು ಮತ್ತು ವಲಸೆಗಾರರಾದ್ಯಂತ ಪ್ಯಾಲೆಸ್ತೀನಿಯರ ತಲೆಮಾರುಗಳಿಗೆ ಈ ರಾಯಭಾರ ಕಚೇರಿ ನಮ್ಮ ಗುರುತನ್ನು ನಿರಾಕರಿಸಲಾಗುವುದಿಲ್ಲ, ನಮ್ಮ ಉಪಸ್ಥಿತಿಯನ್ನು ಅಳಿಸಲಾಗುವುದಿಲ್ಲ ಮತ್ತು ನಮ್ಮ ಜೀವನವನ್ನು ಅಪಮೌಲ್ಯಗೊಳಿಸಲು ಸಾಧ್ಯವಿಲ್ಲ ಎಂಬುವುದಕ್ಕೆ ಪುರಾವೆಯಾಗಿದೆ” ಎಂದಿದ್ದಾರೆ.

“ಒಂದು ಶತಮಾನಕ್ಕೂ ಹೆಚ್ಚು ಕಾಲ ಸ್ವಯಂ ನಿರ್ಣಯವನ್ನು ನಿರಾಕರಿಸಿದ ಜನರಿಗೆ, ಇದು ಒಂದು ಸ್ಮರಣೀಯ ಕ್ಷಣ” ಎಂದು ಹೇಳಿದ್ದಾರೆ.

ಅಂದರೆ, ಪ್ಯಾಲೆಸ್ತೀನಿಯರು ಒಂದು ಶತಮಾನಕ್ಕೂ ಹೆಚ್ಚು ಕಾಲ (1917ರ ಬಾಲ್ಫೋರ್ ಘೋಷಣೆಯಿಂದ ಆರಂಭವಾಗಿ, ಇಸ್ರೇಲ್ ಸ್ಥಾಪನೆ, ಆಕ್ರಮಿತ ಪ್ರದೇಶಗಳು ಇತ್ಯಾದಿ ಮೂಲಕ) ತಮ್ಮ ಸ್ವಯಂ ನಿರ್ಣಯದ ಹಕ್ಕನ್ನು (ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸುವ ಹಕ್ಕು) ನಿರಾಕರಿಸಲ್ಪಟ್ಟಿದ್ದಾರೆ. ಹಾಗಾಗಿ, ಅವರಿಗೆಇದು ಒಂದು ಸ್ಮರಣೀಯ ಕ್ಷಣ ಎಂದು ತಿಳಿಸಿದ್ದಾರೆ.

ಯುಕೆ ಎಲ್ಲಾ ಕಾನೂನು ಹಕ್ಕುಗಳು ಮತ್ತು ಬಾಧ್ಯತೆಗಳನ್ನು ನೀಡಿ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ಸ್ವತಂತ್ರ ರಾಷ್ಟ್ರವೆಂದು ಒಪ್ಪಿಕೊಂಡಿದೆ.

ಹೊಸ ರಾಯಭಾರ ಕಚೇರಿಯ ಫಲಕವನ್ನು ಅನಾವರಣಗೊಳಿಸಿದ ನಂತರ, ರಾಜತಾಂತ್ರಿಕ ದಳದ ಮಾರ್ಷಲ್ ಅಲಿಸ್ಟೈರ್ ಹ್ಯಾರಿಸನ್, ಝಮ್ಲೋಟ್ ಅವರ ಹೇಳಿಕೆಗಳಿಗೆ ದನಿಗೂಡಿಸಿದ್ದು, ರಾಯಭಾರ ಕಚೇರಿಯ ಉದ್ಘಾಟನೆಯು ‘ಪ್ಯಾಲೆಸ್ತೀನ್‌ಗೆ ಐತಿಹಾಸಿಕ ಕ್ಷಣ’ ಎಂದು ಹೇಳಿದ್ದಾರೆ.

“ನಮ್ಮ ಎರಡೂ ದೇಶಗಳ ನಡುವಿನ ಸಂಬಂಧದಲ್ಲಿ ಇದು ಬಹಳ ಮುಖ್ಯವಾದ ಕ್ಷಣ. ಇದು ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಒಂದು ಹೆಜ್ಜೆ ಬದಲಾವಣೆಯ ಆರಂಭ” ಎಂದಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಗಾಝಾದ 14 ವರ್ಷದ ಪ್ಯಾಲೆಸ್ತೀನಿಯನ್ ಬಾಲಕ ಉಬೈದಾ ಮಾತನಾಡಿ “ನಾನು ನರಮೇಧದಿಂದ ಬದುಕುಳಿದೆ, ಆದರೆ ನನ್ನ ದೇಹವು ಆಳವಾದ ಗಾಯಗಳನ್ನು ಹೊಂದಿದೆ” ಎಂದು ಹೇಳಿದ್ದಾರೆ.

ತನ್ನ ಕುಟುಂಬದ ಒಂದು ಭಾಗ ಯುಕೆಯಲ್ಲಿದೆ ಎಂದು ಉಬೈದಾ ತಿಳಿಸಿದ್ದು, ಆದರೆ ಅವರ ತಂದೆ ಇನ್ನೂ ಗಾಝಾದಲ್ಲಿದ್ದಾರೆ, ಅಲ್ಲಿ ‘ಜೀವನವು ಇನ್ನೂ ಭಯದಿಂದ ತುಂಬಿದೆ’ ಎಂದು ಹೇಳಿದ್ದಾರೆ.

“ಒಂದು ದಿನ ನಾನು ರಾಯಭಾರಿಯಾಗಬೇಕೆಂದು ಆಶಿಸುತ್ತೇನೆ, ಯುಕೆ ರಾಯಭಾರಿಯದಾರೂ.. ಈ ಮೂಲಕ ನಾನು ನನ್ನ ಜನರಿಗೆ ಸಹಾಯ ಮಾಡಲು ಮತ್ತು ನಮ್ಮ ಧ್ವನಿಯನ್ನು ಪ್ರಪಂಚದಾದ್ಯಂತ ಕೇಳುವಂತೆ ಮಾಡಲು ಕೆಲಸ ಮಾಡಬಹುದು” ಎಂದು ಉಬೈದಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...