Homeಕರ್ನಾಟಕ‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

- Advertisement -
- Advertisement -

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು ಶಾಂತಿಗಾಗಿ ನಾಗರೀಕ ವೇದಿಕೆ ಹೇಳಿತು. 

2026 ಜನವರಿ 8, ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವೇದಿಕೆಯ ಮುಖ್ಯಸ್ಥರು ನಕ್ಸಲ್ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆದು, ಎಲ್ಲಾ ಮಾಜಿ ನಕ್ಸಲರ ಪುನರ್ವಸತಿ ಕಾರ್ಯವನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. 

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ನಕ್ಸಲ್ ಮುಕ್ತಗೊಂಡು ನಾಳೆಗೆ ಒಂದು ವರ್ಷ. ನಿಮ್ಮ ನೇತೃತ್ವದಲ್ಲಿ ಈ ಮಹತ್ಕಾರ್ಯ ನಡೆಯಿತು. ಇದು ಸಾಧ್ಯವಾಗಿದ್ದು ಕಾಡಿನಲ್ಲಿದ್ದ ನಕ್ಸಲರ ಕೊನೆ ತಂಡ ತೆಗೆದುಕೊಂಡ ತೀರ್ಮಾನದಿಂದಾಗಿ. ಅವರು ಈ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಿದ್ದು ತಮ್ಮ ಮೇಲಿನ ವಿಶ್ವಾಸದಿಂದಾಗಿ. ಆ ವಿಶ್ವಾಸಕ್ಕೆ ಗ್ಯಾರಂಟಿಯಾಗಿ ನಿಂತದ್ದು “ಶಾಂತಿಗಾಗಿ ನಾಗರೀಕರ ವೇದಿಕೆ”. ಒಂದು ವರ್ಷದ ಹಿಂದಿನ ಇಂದಿನ ದಿನದಂದು ನಮ್ಮ ಮನಸ್ಸು ಸಂತೋಷ ಹಾಗೂ ಹೆಮ್ಮೆಯಿಂದ ಕೂಡಿತ್ತು. ಆದರೆ ಒಂದು ವರ್ಷದ ನಂತರದ ಇಂದು ನಮ್ಮ ಮನಸ್ಸಿನ ತುಂಬ ನೋವು, ದುಗುಡ ಹಾಗೂ ಪಾಪ ಪ್ರಜ್ಞೆ ತುಂಬಿಕೊಂಡಿದೆ ಎಂದು ಹೇಳಿದ್ದಾರೆ.

2025 ಜನವರಿ 8 ರಂದು ನಿಮ್ಮ ಕಛೇರಿಯಲ್ಲಿ, ನೂರಾರು ಮೀಡಿಯಾ ಕ್ಯಾಮರಾಗಳ ಎದುರು, ಅವರನ್ನು ಬರಮಾಡಿಕೊಳ್ಳುತ್ತಾ ತಾವು ಆಡಿದ ಮಾತು – “ಇಂದು ಅವರು ಕಾಡಿನಿಂದ ಜೈಲಿಗೆ ಬಂದಿದ್ದಾರೆ, ಆದಷ್ಟು ಬೇಗ ಜೈಲಿಂದ ನಾಡಿಗೆ ಬರುವಂತೆ ಮಾಡುವ ಜವಬ್ದಾರಿ ನಮ್ಮ ಸರ್ಕಾರ ಮೇಲಿದೆ. ಅದನ್ನು ನಿರ್ವಹಿಸುತ್ತೇವೆ”. ಆದರೆ ತಾವು ಕೊಟ್ಟ ಈ ಆಶ್ವಾಸನೆ ಇನ್ನೂ ಆಶ್ವಾಸನೆಯಾಗಷ್ಟೇ ಉಳಿದಿದೆ. ಈ ಸಂದರ್ಭದಲ್ಲಿ ಕೆಲವು ಕಠೋರ ವಾಸ್ತವಗಳನ್ನು ತಮ್ಮ ಗಮನಕ್ಕೆ ತರಲು ಬಯಸುತ್ತಿದ್ದೇವೆ ಎಂದಿರುವ ಶಾಂತಿಗಾಗಿ ನಾಗರೀಕ ವೇದಿಕೆಯ ಮುಖ್ಯಸ್ಥರು ಮುಖ್ಯವಾಹಿನಿಗೆ ಬಂದ ನಕ್ಸಲ್ ಕಾರ್ಯಕರ್ತರು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಿದರು. 

ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು [ಲತಾ, ಸುಂದರಿ, ವನಜಾಕ್ಷಿ ರಮೇಶ್, ವಸಂತ್, ರವೀಂದ್ರ] ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ.

ಅವರ ಕಾನೂನು ಪ್ರಕ್ರಿಯೆ ಒಂದು ಇಂಚು ಸಹ ಮುಂದಕ್ಕೆ ಹೋಗಿಲ್ಲ. ತ್ವರಿತ ವಿಚಾರಣೆಗಾಗಿ ಸರ್ಕಾರ ಪ್ರಸ್ತಾಪಿಸಿದ್ದ ವಿಶೇಷ ನ್ಯಾಯಲಯ ಕಾರ್ಯರೂಪಕ್ಕೆ ಬಂದಿಲ್ಲ.

ಇದಕ್ಕೂ ಮೊದಲು ಮುಖ್ಯವಾಹಿನಿಗೆ ಬಂದಿದ್ದ ಕನ್ಯಾಕುಮಾರಿ ಕಳೆದ 9 ವರ್ಷಗಳಿಂದ ಜೈಲಿನಲ್ಲೇ ಇದ್ದಾರೆ. ಆಕೆಯ ಮಗು ಐದು ವರ್ಷ ಜೈಲಿನಲ್ಲೇ ಇತ್ತು, ಈಗ ಹೊರಗಿದೆ. ಕಂಬಿಗಳ ಹಿಂದಿನಿಂದಲೇ ಅಮ್ಮನನ್ನು ಆಗಾಗ ಕಂಡು ಬರುತ್ತಿದೆ.

ಇವರೆಲ್ಲರ ಮೇಲೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲೂ ಅನೇಕ ಕೇಸುಗಳಿವೆ. ನೀವು ಅಲ್ಲಿನ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆದಿದ್ದೀರಿ. ಅದು ಅಲ್ಲಿಗೇ ಮುಗಿಯಿತು. ಅಲ್ಲಿಂದಲೂ ಯಾವುದೇ ರೀತಿಯ ನೆರವು ಸರ್ಕಾರವನ್ನು ಮತ್ತು ನಮ್ಮನ್ನು ನಂಬಿ ಬಂದ ಈ ಆದಿವಾಸಿ, ದಲಿತ ಕಾರ್ಯಕರ್ತರುಗಳಿಗೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.  

ಅಲ್ಲದೇ ಈ ಹಿಂದೆ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ, ರೇಣುಕಾ, ರಿಜ್ವಾನಾ, ಚೆನ್ನಮ್ಮ, ಜ್ಞಾನದೇವ, ಪರಶುರಾಮ ಎಲ್ಲರೂ ಕಡುಕಷ್ಟಗಳ ನಡುವೆ ಬದುಕು ನೂಕುತ್ತಿದ್ದಾರೆ. ಪರಿಹಾರವಾಗಿ ಬಂದ ಹಣ ಮಾಡಿಕೊಂಡಿದ್ದ ಸಾಲ ಮತ್ತು ಕೋರ್ಟು ಖರ್ಚುಗಳಿಗೇ ಸಾಲಲಿಲ್ಲ. ಪುನರ್ವಸತಿ ಸಂಬಂಧಿತ [ಸ್ವಯಂ ಉದ್ಯೋಗಕ್ಕೆ ನೆರವು ಮತ್ತು ವಸತಿ] ನಿರ್ಣಯಗಳು ಕಾಗದದ ಮೇಲಷ್ಟೇ ಉಳಿದಿವೆ.

ನಕ್ಸಲರು ಮುಖ್ಯವಾಹಿನಿಗೆ ಬರುವಾಗ ಮಲೆನಾಡಿನ ಬಡಜನರ ಬದುಕನ್ನು ಬಾಧಿಸುತ್ತಿರುವ 18 ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದು ಅವನ್ನು ಸಹನೀಯಗೊಳಿಸುವ ಮಟ್ಟದ ಕ್ರಮಗಳನ್ನಾದರೂ ತೆಗೆದುಕೊಳ್ಳುವಂತೆ ತಮಗೆ ಮನವಿ ಮಾಡಿದ್ದರು. ಈ ಸಮಸ್ಯೆಗಳ ಅಧ್ಯಯನ ಮತ್ತು ಯೋಜಿತ ಪರಿಹಾರ ಕ್ರಮಗಳನ್ನು ರೂಪಿಸಲು ಕಳೆದ ಬಜೆಟ್ಟಿನಲ್ಲಿ ತಾವು 10 ಕೋಟಿ ಹಣವನ್ನು ಎತ್ತಿಟ್ಟಿದ್ದೀರಿ. ಆದರೆ ಆ ಹಣ ಮೂಲ ಉದ್ದೇಶದ ಜೊತೆ ಸಂಬಂಧವನ್ನೇ ಇಟ್ಟುಕೊಳ್ಳದೆ ಖರ್ಚಾಗಿದೆ. ಇದಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಿಸಬೇಕು ಎಂದು ಆಗಿದ್ದ ತೀರ್ಮಾನವೂ ಜಾರಿಯಾಗಿಲ್ಲ.

ಸಾರಾಂಶದಲ್ಲಿ ನಕ್ಸಲೀಯರನ್ನು ಮನವೊಲಿಸಿ ಮುಖ್ಯವಾಹಿನಿಗೆ ತರುವುದರಲ್ಲಿ ಕರ್ನಾಟಕ ಮೇಲ್ಪಂಕ್ತಿ ಹಾಕಿಕೊಟ್ಟಿತು. ಆದರೆ ಕಾನೂನಿನ ನೆರವು ನೀಡುವುದರಲ್ಲಿ ಹಾಗೂ ಬದುಕು ಕಟ್ಟಿ ಕೊಡುವುದರಲ್ಲಿ ಸಂಪೂರ್ಣವಾಗಿ ಸೋತಿದೆ ಎಂದೇ ಹೇಳಬೇಕು.

ಇಂದು ಉಪವಾಸ ಸತ್ಯಾಗ್ರಹ ನಡೆಸಬೇಕು ಎಂದುಕೊಂಡಿದ್ದೆವು ಆದರೂ ಕೊನೆ ಪ್ರಯತ್ನವೆಂದು ತಮ್ಮಲ್ಲಿ ಈ ಒತ್ತಾಯಪೂರ್ವಕ ಮನವಿಯನ್ನು ಮಾಡುತ್ತಿದ್ದೇವೆ. ಈ ಕೆಳಕಂಡ ಕ್ರಮಗಳನ್ನು ತಾವು ತೆಗೆದುಕೊಳ್ಳಲೇಬೇಕು.

ಜೈಲಲ್ಲಿರುವವರನ್ನು ಇನ್ನೂ ಕಾಯಿಸುವುದು, ಮತ್ತೆ ಕೋರ್ಟಿಗೆ ಅಲೆಸುವುದು ಸರಿಯಲ್ಲ. ಹಾಗಾಗಿ ಛತ್ತೀಸ್ ಘಡ ಸರ್ಕಾರದ ಮಾದರಿಯಲ್ಲಿ ಅವರ ಮೇಲಿನ ಎಲ್ಲಾ ಕೇಸುಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು.

ಒಂಭತ್ತು ವರ್ಷದಿಂದ ಜೈಲಲ್ಲಿರುವ ಕನ್ಯಾಕುಮಾರಿಯ ಬಿಡುಗಡೆಗೆ ಆಧ್ಯತೆಯ ಮೇರೆಗೆ ಕ್ರಮ ತೆಗೆದುಕೊಳ್ಳಬೇಕು.

ಹೊರಗಿರುವ ಎಲ್ಲಾ ಮಾಜಿ ನಕ್ಸಲೀಯರ ಪುನರ್ವಸತಿಗೆ ಸಂಬಂಧಿಸಿದ ತೀರ್ಮಾನಗಳು ಕೂಡಲೇ ಜಾರಿಯಾಗುವಂತೆ ತಾವು ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು.

ನಕ್ಸಲ್ ಪ್ರದೇಶದ ಅಭಿವೃದ್ಧಿಗಾಗಿ ಮಂಜೂರಾಗಿರುವ ಹಣವನ್ನು ಮೂಲ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಜಾರಿಯಾಗುವಂತೆ ಮಾಡಲು ವಿಶೇಷ ಅಧಿಕಾರಿಯನ್ನು ನಿಯೋಜಿಸಿ ಸದ್ಬಳಕೆ ಮಾಡುವಂತೆ ತಾವು ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ್, ವಿ.ಎಸ್. ಶ್ರೀಧರ್, ತಾರಾ ರಾವ್, ಬಿ.ಟಿ. ಲಲಿತಾ ನಾಯ್, ನೂರ್ ಶ್ರೀಧರ್ ಹಾಗೂ ವೀರಸಂಗಯ್ಯ ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...