Homeಮುಖಪುಟಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ ಗ್ರಾಮದಲ್ಲಿ ಜನವರಿ 1ರಂದು ನಡೆದಿದೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಖಚಿತಪಡಿಸಿರುವುದಾಗಿ ಆಲ್ಟ್ ನ್ಯೂಸ್‌ ವರದಿ ಮಾಡಿದೆ.

ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಎರಡ್ಮೂರು ವಿಡಿಯೋಗಳು ವೈರಲ್ ಆಗಿವೆ. ನಮಗೆ ದೊರೆತ ಮೊದಲ ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಕೊಳೆಯಾದ ಬಟ್ಟೆ ಧರಿಸಿ ರಸ್ತೆ ಬದಿಯ ಕಸದ ರಾಶಿಯ ಮುಂದೆ ಕುಳಿತಿದ್ದು, ಕಸದ ರಾಶಿಯಲ್ಲಿ ಸತ್ತ ಹಸುವಿನ ಕಳೇಬರದಂತಹ ವಸ್ತು ಇದೆ. ದುಷ್ಕರ್ಮಿಗಳ ಗುಂಪು ಆ ವ್ಯಕ್ತಿಯ ಬಳಿಗೆ ತೆರಳಿ ಪ್ರಶ್ನಿಸಲು ಪ್ರಾರಂಭಿಸುತ್ತಾರೆ. ಒಬ್ಬ ವ್ಯಕ್ತಿಯು “ಹಸು ನಮ್ಮ ತಾಯಿ” ಎಂದು ಹೇಳಲು ಒತ್ತಾಯಿಸುತ್ತಾನೆ. ಗುಂಪಿನಲ್ಲಿದ್ದ ಕೆಲವರು, “ಅವನು ಹೊರಗಿನವನು, ಇಲ್ಲಿಂದ ಬಂದವನಲ್ಲ” ಎಂದು ಹೇಳುತ್ತಾರೆ.

ನಮಗೆ ದೊರೆತ ಇನ್ನೊಂದು ವಿಡಿಯೋ ದುಷ್ಕರ್ಮಿಗಳು ಆ ವ್ಯಕ್ತಿಯನ್ನು ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಎಳೆದೊಯ್ಯುವ, ಕ್ರೂರವಾಗಿ ಥಳಿಸುವ, ಕಾಲಿನಿಂದ ಒದಿಯುವ ಮತ್ತು ಆ ವ್ಯಕ್ತಿ ನೋವಿನಿಂದ ‘ಅಯ್ಯೋ ಅಪ್ಪ’ ಎಂದು ಚೀರಾಡುವ ದೃಶ್ಯವಿದೆ. ಈ ವೇಳೆ ಓರ್ವ ದುಷ್ಕರ್ಮಿ ‘ಆತ ಮುಸ್ಲಿಂ’ ಎಂದು ಹೇಳುವುದನ್ನು ಕೇಳಬಹುದು.

‘ಅಯ್ಯೋ ಅಪ್ಪ’ ಎಂದು ದಕ್ಷಿಣ ಭಾರತ ಭಾಷೆಗಳಲ್ಲಿ ಹೇಳುವ ಪದವಾಗಿದೆ. ಹಾಗಾಗಿ, ಹಲ್ಲೆಗೊಳಗಾದ ವ್ಯಕ್ತಿ ದಕ್ಷಿಣ ಭಾರತೀಯ ಆಗಿರಬಹುದು ಎಂದು ಅಲ್ಟ್ ನ್ಯೂಸ್ ಅಭಿಪ್ರಾಯಪಟ್ಟಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಅವರನ್ನು ಸಂಪರ್ಕಿಸಿದ್ದೇವೆ. ಘಟನೆಯ ವಿಡಿಯೋ ದೊರೆತ ಬಳಿಕ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಹಸುವನ್ನು ಕೊಂದು, ಅದರ ಮಾಂಸ ಸೇವಿಸಿದ ಶಂಕೆಯ ಮೇಲೆ ಥಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ ಎಂದು ಅಲ್ಟ್ ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಜೊತೆ ಮಾತನಾಡಿದ ಅಕ್ಲೇರಾ ಪೊಲೀಸ್ ಇನ್ಸ್‌ಪೆಕ್ಟರ್ ಧರ್ಮರಾಮ್, ಬಲಿಪಶು ಮಾನಸಿಕ ಅಸ್ವಸ್ಥನಾಗಿದ್ದು, ಸತ್ತ ಹಸುವಿನ ಅವಶೇಷಗಳ ಬಳಿ ಕುಳಿತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ. ಆತ ಒಬ್ಬ ಅಲೆಮಾರಿಯಾಗಿದ್ದು, ದಾಳಿಯ ನಂತರ ಸ್ಥಳದಿಂದ ಹೊರಟು ಹೋಗಿದ್ದಾರೆ. ಪೊಲೀಸರು ಇನ್ನೂ ಬಲಿಪಶುವನ್ನು ಪತ್ತೆಹಚ್ಚದಿದ್ದರೂ, ಹಲ್ಲೆ ನಡೆಸಿದವರನ್ನು ರಾಕೇಶ್, ರೋಹನ್ ಮತ್ತು ಅಜಯ್ ಎಂದು ಗುರುತಿಸಲಾಗಿದೆ. ಅವರನ್ನು ಬಂಧಿಸಲಾಗಿದೆ ಎಂದು ಧರ್ಮರಾಮ್ ಮಾಹಿತಿ ನೀಡಿದ್ದಾರೆ.

ದೈನಿಕ್ ಭಾಸ್ಕರ್ ವರದಿಯು ಆರೋಪಿಗಳನ್ನು ರಾಕೇಶ್ ರಾವ್, ಅಜಯ್ ಪರೇಟಾ ಮತ್ತು ರೋಹನ್ ಸೇನ್ ಎಂದು ಹೆಸರಿಸಿದೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳ ಬಗ್ಗೆ ಹೆಚ್ಚಿನ ವಿವರ ತಿಳಿದುಕೊಳ್ಳಲು ನಾವು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪರಿಶೀಲಿಸಿದ್ದೇವೆ. ಅವರು ಹಿಂದುತ್ವ ಸಂಘಟನೆ ಬಜರಂಗದಳದ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ತಮ್ಮನ್ನು ತಾವು ಗೋರಕ್ಷಕರು ಎಂದು ಹೇಳಿಕೊಂಡಿದ್ದಾರೆ ಎಂದು ಆಲ್ಟ್ ನ್ಯೂಸ್ ತಿಳಿಸಿದೆ.

ಈ ಕುರಿತ ವಿವರವಾದ ವರದಿಯನ್ನು ಇಲ್ಲಿ ಓದಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...