Homeಮುಖಪುಟಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

- Advertisement -
- Advertisement -

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ ಎಂದು ವರದಿಯಾಗಿದೆ.

ದಾಳಿ ನಡೆದಾಗ ಜೈನ್ ತಮ್ಮ ನಾಲ್ಕನೇ ಮಹಡಿಯ ಮನೆಯಲ್ಲಿದ್ದರು. ಇಡಿ ಅಧಿಕಾರಿಗಳು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೈನ್ ನಿವಾಸಕ್ಕೆ ಆಗಮಿಸಿದ್ದಾರೆ ಎಂದು telegraphindia.com ವರದಿ ಮಾಡಿದೆ.

ಸಾಲ್ಟ್ ಲೇಕ್‌ನಲ್ಲಿರುವ ಕಟ್ಟಡವೊಂದರ 11ನೇ ಮಹಡಿಯಲ್ಲಿ ಐ -ಪ್ಯಾಕ್ ಕಚೇರಿಯಿದೆ. ಗುರುವಾರ ಬೆಳಗ್ಗಿನ ಜಾವ ಅಲ್ಲಿಗೆ ಇಡಿ ತಂಡ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದೆ. ಲೌಡನ್ ಬೀದಿಯಲ್ಲಿರುವ ಪ್ರತೀಕ್ ಜೈನ್ ಅವರ ಮನೆ ಮತ್ತು ಬುರ್ರಾಬಜಾರ್‌ನ ಪೋಸ್ಟಾದಲ್ಲಿರುವ ಮತ್ತೊಂದು ಕಚೇರಿಯ ಮೇಲೂ ಏಕಕಾಲದಲ್ಲಿ ನಡೆದಿದೆ ಎಂದು ವರದಿ ವಿವರಿಸಿದೆ.

2014ರ ಲೋಕಸಭಾ ಚುನಾವಣೆಗೆ ಮುನ್ನ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ಐ-ಪ್ಯಾಕ್ ಸಂಸ್ಥೆ, 2019ರ ಲೋಕಸಭಾ ಚುನಾವಣೆಯ ನಂತರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಂಗಾಳ ಸರ್ಕಾರದೊಂದಿಗೆ ಕೆಲಸ ಮಾಡುತ್ತಿದೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷವು ಗೆಲುವು ಸಾಧಿಸುವಲ್ಲಿ ಐ-ಪ್ಯಾಕ್ ಪ್ರಮುಖ ಪಾತ್ರವಹಿಸಿದೆ.

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಹೊಂದಿಕೊಂಡಿರುವ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ telegraphindia.com ವರದಿಯಲ್ಲಿ ಉಲ್ಲೇಖಿಸಿದೆ.

ಕಳೆದ ಕೆಲವು ವರ್ಷಗಳಿಂದ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಡೈಮಂಡ್ ಹಾರ್ಬರ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಕೇಂದ್ರ ಸಂಸ್ಥೆಗಳಾದ ಇಡಿ ಮತ್ತು ಸಿಬಿಐ ಎರಡೂ ಹಲವಾರು ಬಾರಿ ವಿಚಾರಣೆಗೆ ಒಳಪಡಿಸಿವೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಇಡಿ ದಾಳಿ ನಡೆದಿರುವುದು ಗಮನಾರ್ಹ ಎನ್ನಲಾಗಿದೆ.

ಟಿಎಂಸಿ ಮತ್ತು ಅದರ ನಾಯಕರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳು ಏನೇ ಆರೋಪಗಳನ್ನು ಹೊರಿಸಿದರೂ, ಪಕ್ಷ ಸತತ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಮರಳುತ್ತದೆ ಎಂದು ಅಭಿಷೇಕ್ ಪದೇ ಪದೇ ಹೇಳಿದ್ದಾರೆ.

ಪ್ರತೀಕ್ ಜೈನ್ ಮನೆಗೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ!

ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿರುವ ನಡುವೆಯೇ ಪ್ರತೀಕ್ ಜೈನ್ ಮನೆಗೆ ಸಿಎಂ ಮಮತಾ ಬ್ಯಾನರ್ಜಿ ಆಗಮಿಸಿದ್ದಾರೆ. ಈ ವೇಳೆ ಜೈನ್ ಮನೆ ಬಳಿ ಗೊಂದಲ ವಾತಾವರಣ ನಿರ್ಮಾಣವಾಯಿತು. ಇಡಿ ಅಧಿಕಾರಿಗಳು ಟಿಎಂಸಿ ಚುನಾವಣಾ ಕಾರ್ಯತಂತ್ರವನ್ನು ಕದಿಯಲು ಪ್ರಯತ್ನ ನಡೆಸಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿರುವುದಾಗಿ ವರದಿಗಳು ಹೇಳಿವೆ.

ಮಮತಾ ಬ್ಯಾನರ್ಜಿ ಸುಮಾರು 20-25 ನಿಮಿಷ ಜೈನ್ ಮನೆ ಬಳಿ ಇದ್ದರು. ಅವರ ಕೈಯಲ್ಲಿ ಫೈಲ್ ಒಂದು ಇತ್ತು. ಅದು ಟಿಎಂಸಿ ಪಕ್ಷದ ದಾಖಲೆಗಳು, ನಾನು ಅದನ್ನು ಪಡೆದುಕೊಂಡಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಡಿ ದಾಳಿಗೆ ಮಮತಾ ಬ್ಯಾನರ್ಜಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಳ್ಳುವುದು ಗೃಹ ಸಚಿವರ ಕೆಲಸವೇ? ಎಂದು ಪ್ರಶ್ನಿಸಿದ್ದಾರೆ.

ಟಿಎಂಸಿಯ ಆಂತರಿಕ ದಾಖಲೆಗಳು, ಹಾರ್ಡ್ ಡಿಸ್ಕ್‌ಗಳು, ಅಭ್ಯರ್ಥಿಗಳ ಪಟ್ಟಿಗಳು, ಚುನಾವಣಾ ತಂತ್ರಗಳು ಮತ್ತು ಪಕ್ಷದ ಡೇಟಾವನ್ನು ವಶಪಡಿಸಿಕೊಳ್ಳಲು ಇಡಿ ಪ್ರಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...