Homeಅಂತರಾಷ್ಟ್ರೀಯ‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 

ಆಲ್-ಇನ್ ಪಾಡ್‌ಕಾಸ್ಟ್‌ನ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು “ಸ್ಪಷ್ಟವಾಗಿ ಹೇಳುವುದಾದರೆ, ಇದು ಅವರ (ಟ್ರಂಪ್ ಅವರ) ಒಪ್ಪಂದ. ಅವರೇ ಇದನ್ನು ಅಂತಿಮಗೊಳಿಸುವವರು. ಅವರು ಇದನ್ನು ಮಾಡಿಯೇ ಮಾಡುತ್ತಾರೆ. ಒಪ್ಪಂದಕ್ಕೆ ಎಲ್ಲವೂ ಸಿದ್ಧವಾಗಿತ್ತು, ಮೋದಿ ಅವರು ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. ಕರೆ ಮಾಡಲು ಅನಾನುಕೂಲತೆ ಇತ್ತು. ಆದ್ದರಿಂದ ಮೋದಿ ಕರೆ ಮಾಡಲಿಲ್ಲ. ಆ ಶುಕ್ರವಾರ ಮುಗಿಯಿತು. ಅದರ ಮುಂದಿನ ವಾರ ನಾವು ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಜೊತೆ ಒಪ್ಪಂದಗಳನ್ನು ಮಾಡಿದೆವು. ನಾವು ಬಹಳಷ್ಟು ಒಪ್ಪಂದಗಳನ್ನು ಘೋಷಿಸಿದೆವು,” ಎಂದು ಲುಟ್ನಿಕ್ ಹೇಳಿದ್ದಾರೆ. 

ಇದೇ ವೇಳೆ ಒಪ್ಪಂದ ಇನ್ನೂ ಯಾಕೆ ಆಗಲಿಲ್ಲ ಎಂಬುದನ್ನು ವಿವರಿಸಿದ ಅವರು ದೇಶಗಳ ಜೊತೆ ಮಾತುಕತೆ ನಡೆಸುತ್ತಿದ್ದ ದರಗಳ (ಟ್ಯಾರಿಫ್‌ಗಳ) ಮುಂದಿನ ರಚನೆಯ ಬಗ್ಗೆಯೂ ಹೇಳಿದರು. ಮೋದಿ ಅವರು ಕರೆ ಮಾಡದ ಕಾರಣ ಆನಂತರದಲ್ಲಿ ಅಮೆರಿಕವು ಮುಂದಿನ ಆಯ್ಕೆಯಂತೆ ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು ಮಲೇಷ್ಯಾ ಜೊತೆ ಒಪ್ಪಂದಗಳನ್ನು ಮಾಡಿಕೊಂಡಿತು ಎಂದಿದ್ದಾರೆ. 

ಮುಂದುವರೆದು ಸುಂಕದ ಕುರಿತು ಮಾತನಾಡಿದ ಅವರು ‘ಜುಲೈ 2025 ರಲ್ಲಿ ಯುರೋಪಿಯನ್ ಯೂನಿಯನ್, ಯುನೈಟೆಡ್ ಕಿಂಗ್‌ಡಮ್, ಜಪಾನ್, ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ದಕ್ಷಿಣ ಕೊರಿಯಾ ಜೊತೆಗಿನ ಸುಂಕ ಮಾತುಕತೆಗಳನ್ನು ಅಮೆರಿಕ ಮುಕ್ತಾಯಗೊಳಿಸಿದೆ. ಭಾರತದಿಂದ ಅಮೆರಿಕಕ್ಕೆ ಮಾಡುವ ರಫ್ತುಗಳು ಪ್ರಸ್ತುತ ಶೇಕಡಾ 50 ರಷ್ಟು ಸುಂಕ ದರವನ್ನು ಹೊಂದಿವೆ. “ಏಕೆಂದರೆ ನಾವು (ಯುಎಸ್) ಅವರೊಂದಿಗೆ (ಭಾರತ) ಮಾತುಕತೆ ನಡೆಸಿದ್ದೇವೆ ಮತ್ತು ಭಾರತವು (ಇತರ ಏಷ್ಯಾದ ದೇಶಗಳು) ಮೊದಲೇ ಮಾತುಕತೆ ಮುಗಿಸಲಿದೆ ಎಂದು ಭಾವಿಸಿ ಹೆಚ್ಚಿನ ದರದಲ್ಲಿ ಮಾತುಕತೆ ನಡೆಸಿದ್ದೇವೆ. 

ಈಗ ಸಮಸ್ಯೆ ಏನೆಂದರೆ, ಒಪ್ಪಂದಗಳು ಹೊಸ ಮತ್ತು ಹೆಚ್ಚಿನ ದರದಲ್ಲಿ ಹೊರಬಂದವು, ಆ ನಂತರ ಭಾರತವು ಮತ್ತೆ ಕರೆ ಮಾಡಿ ‘ಓಹ್, ನಾವು ಸಿದ್ಧರಿದ್ದೇವೆ’ ಎಂದು ಹೇಳುತ್ತದೆ. ಅದರಿಂದ ನಾನು ಅವರಿಗೆ ಹೇಳಿದೆ, ಯಾವುದಕ್ಕೆ ಸಿದ್ಧ? ನಿಮಗೆ ಗೊತ್ತಾ, ಅದು ಮೂರು ವಾರಗಳ ನಂತರ ಹಾಗೆ ಆಯಿತು. ‘ಮೂರು ವಾರಗಳ ಹಿಂದೆ ನಿಲ್ದಾಣದಿಂದ ಹೊರಟ ರೈಲಿಗೆ ಹತ್ತಲು ನೀವು ಸಿದ್ಧರಿದ್ದೀರಾ?'” ಎಂದು ಕೇಳಿದೆ ಎಂದು ಯುಎಸ್ ವಾಣಿಜ್ಯ ಕಾರ್ಯದರ್ಶಿ ಹೇಳಿದ್ದಾರೆ. 

ಭಾರತ ರಷ್ಯಾದ ತೈಲ ಖರೀದಿಯಿಂದ ಅತೃಪ್ತರಾಗಿದ್ದಾರೆಂದು ಮೋದಿಗೆ ತಿಳಿದಿದೆ ಮತ್ತು ವಾಷಿಂಗ್ಟನ್ ನವದೆಹಲಿಯ ಮೇಲೆ ಸುಂಕವನ್ನು “ಬಹಳ ಬೇಗನೆ” ಹೆಚ್ಚಿಸಬಹುದು ಎಂದು ಟ್ರಂಪ್ ಹೇಳಿದ ಕೆಲವು ದಿನಗಳ ನಂತರ ಲುಟ್ನಿಕ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. 

ಎರಡೂ ದೇಶಗಳು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷರ ಬೆದರಿಕೆ ಮಾತು ಕೇಳಿ ಬಂದಿದೆ. ಇಲ್ಲಿಯವರೆಗೆ, ಅದಕ್ಕಾಗಿ ಆರು ಸುತ್ತಿನ ಮಾತುಕತೆಗಳು ನಡೆದಿವೆ. 

ಅಮೆರಿಕಕ್ಕೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲಿನ ಶೇಕಡಾ 50 ರಷ್ಟು ಸುಂಕವನ್ನು ಪರಿಹರಿಸಲು ಒಂದು ಚೌಕಟ್ಟಿನ ಒಪ್ಪಂದವನ್ನು ಈ ಒಪ್ಪಂದ ಒಳಗೊಂಡಿದೆ. ಈಗ ದರ ಮತ್ತಷ್ಟು ಹೆಚ್ಚಾಗಿರುವುದಾಗಿಯೂ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...