Homeಅಂತರಾಷ್ಟ್ರೀಯ‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 

ಆಲ್-ಇನ್ ಪಾಡ್‌ಕಾಸ್ಟ್‌ನ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು “ಸ್ಪಷ್ಟವಾಗಿ ಹೇಳುವುದಾದರೆ, ಇದು ಅವರ (ಟ್ರಂಪ್ ಅವರ) ಒಪ್ಪಂದ. ಅವರೇ ಇದನ್ನು ಅಂತಿಮಗೊಳಿಸುವವರು. ಅವರು ಇದನ್ನು ಮಾಡಿಯೇ ಮಾಡುತ್ತಾರೆ. ಒಪ್ಪಂದಕ್ಕೆ ಎಲ್ಲವೂ ಸಿದ್ಧವಾಗಿತ್ತು, ಮೋದಿ ಅವರು ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. ಕರೆ ಮಾಡಲು ಅನಾನುಕೂಲತೆ ಇತ್ತು. ಆದ್ದರಿಂದ ಮೋದಿ ಕರೆ ಮಾಡಲಿಲ್ಲ. ಆ ಶುಕ್ರವಾರ ಮುಗಿಯಿತು. ಅದರ ಮುಂದಿನ ವಾರ ನಾವು ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಜೊತೆ ಒಪ್ಪಂದಗಳನ್ನು ಮಾಡಿದೆವು. ನಾವು ಬಹಳಷ್ಟು ಒಪ್ಪಂದಗಳನ್ನು ಘೋಷಿಸಿದೆವು,” ಎಂದು ಲುಟ್ನಿಕ್ ಹೇಳಿದ್ದಾರೆ. 

ಇದೇ ವೇಳೆ ಒಪ್ಪಂದ ಇನ್ನೂ ಯಾಕೆ ಆಗಲಿಲ್ಲ ಎಂಬುದನ್ನು ವಿವರಿಸಿದ ಅವರು ದೇಶಗಳ ಜೊತೆ ಮಾತುಕತೆ ನಡೆಸುತ್ತಿದ್ದ ದರಗಳ (ಟ್ಯಾರಿಫ್‌ಗಳ) ಮುಂದಿನ ರಚನೆಯ ಬಗ್ಗೆಯೂ ಹೇಳಿದರು. ಮೋದಿ ಅವರು ಕರೆ ಮಾಡದ ಕಾರಣ ಆನಂತರದಲ್ಲಿ ಅಮೆರಿಕವು ಮುಂದಿನ ಆಯ್ಕೆಯಂತೆ ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು ಮಲೇಷ್ಯಾ ಜೊತೆ ಒಪ್ಪಂದಗಳನ್ನು ಮಾಡಿಕೊಂಡಿತು ಎಂದಿದ್ದಾರೆ. 

ಮುಂದುವರೆದು ಸುಂಕದ ಕುರಿತು ಮಾತನಾಡಿದ ಅವರು ‘ಜುಲೈ 2025 ರಲ್ಲಿ ಯುರೋಪಿಯನ್ ಯೂನಿಯನ್, ಯುನೈಟೆಡ್ ಕಿಂಗ್‌ಡಮ್, ಜಪಾನ್, ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ದಕ್ಷಿಣ ಕೊರಿಯಾ ಜೊತೆಗಿನ ಸುಂಕ ಮಾತುಕತೆಗಳನ್ನು ಅಮೆರಿಕ ಮುಕ್ತಾಯಗೊಳಿಸಿದೆ. ಭಾರತದಿಂದ ಅಮೆರಿಕಕ್ಕೆ ಮಾಡುವ ರಫ್ತುಗಳು ಪ್ರಸ್ತುತ ಶೇಕಡಾ 50 ರಷ್ಟು ಸುಂಕ ದರವನ್ನು ಹೊಂದಿವೆ. “ಏಕೆಂದರೆ ನಾವು (ಯುಎಸ್) ಅವರೊಂದಿಗೆ (ಭಾರತ) ಮಾತುಕತೆ ನಡೆಸಿದ್ದೇವೆ ಮತ್ತು ಭಾರತವು (ಇತರ ಏಷ್ಯಾದ ದೇಶಗಳು) ಮೊದಲೇ ಮಾತುಕತೆ ಮುಗಿಸಲಿದೆ ಎಂದು ಭಾವಿಸಿ ಹೆಚ್ಚಿನ ದರದಲ್ಲಿ ಮಾತುಕತೆ ನಡೆಸಿದ್ದೇವೆ. 

ಈಗ ಸಮಸ್ಯೆ ಏನೆಂದರೆ, ಒಪ್ಪಂದಗಳು ಹೊಸ ಮತ್ತು ಹೆಚ್ಚಿನ ದರದಲ್ಲಿ ಹೊರಬಂದವು, ಆ ನಂತರ ಭಾರತವು ಮತ್ತೆ ಕರೆ ಮಾಡಿ ‘ಓಹ್, ನಾವು ಸಿದ್ಧರಿದ್ದೇವೆ’ ಎಂದು ಹೇಳುತ್ತದೆ. ಅದರಿಂದ ನಾನು ಅವರಿಗೆ ಹೇಳಿದೆ, ಯಾವುದಕ್ಕೆ ಸಿದ್ಧ? ನಿಮಗೆ ಗೊತ್ತಾ, ಅದು ಮೂರು ವಾರಗಳ ನಂತರ ಹಾಗೆ ಆಯಿತು. ‘ಮೂರು ವಾರಗಳ ಹಿಂದೆ ನಿಲ್ದಾಣದಿಂದ ಹೊರಟ ರೈಲಿಗೆ ಹತ್ತಲು ನೀವು ಸಿದ್ಧರಿದ್ದೀರಾ?'” ಎಂದು ಕೇಳಿದೆ ಎಂದು ಯುಎಸ್ ವಾಣಿಜ್ಯ ಕಾರ್ಯದರ್ಶಿ ಹೇಳಿದ್ದಾರೆ. 

ಭಾರತ ರಷ್ಯಾದ ತೈಲ ಖರೀದಿಯಿಂದ ಅತೃಪ್ತರಾಗಿದ್ದಾರೆಂದು ಮೋದಿಗೆ ತಿಳಿದಿದೆ ಮತ್ತು ವಾಷಿಂಗ್ಟನ್ ನವದೆಹಲಿಯ ಮೇಲೆ ಸುಂಕವನ್ನು “ಬಹಳ ಬೇಗನೆ” ಹೆಚ್ಚಿಸಬಹುದು ಎಂದು ಟ್ರಂಪ್ ಹೇಳಿದ ಕೆಲವು ದಿನಗಳ ನಂತರ ಲುಟ್ನಿಕ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. 

ಎರಡೂ ದೇಶಗಳು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷರ ಬೆದರಿಕೆ ಮಾತು ಕೇಳಿ ಬಂದಿದೆ. ಇಲ್ಲಿಯವರೆಗೆ, ಅದಕ್ಕಾಗಿ ಆರು ಸುತ್ತಿನ ಮಾತುಕತೆಗಳು ನಡೆದಿವೆ. 

ಅಮೆರಿಕಕ್ಕೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲಿನ ಶೇಕಡಾ 50 ರಷ್ಟು ಸುಂಕವನ್ನು ಪರಿಹರಿಸಲು ಒಂದು ಚೌಕಟ್ಟಿನ ಒಪ್ಪಂದವನ್ನು ಈ ಒಪ್ಪಂದ ಒಳಗೊಂಡಿದೆ. ಈಗ ದರ ಮತ್ತಷ್ಟು ಹೆಚ್ಚಾಗಿರುವುದಾಗಿಯೂ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...