Homeಮುಖಪುಟಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

- Advertisement -
- Advertisement -

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯದ ವಿರುದ್ಧ ಎರಡು ದೂರುಗಳನ್ನು ದಾಖಲಿಸಿದ್ದಾರೆ. 

ದೂರುಗಳ ಆಧಾರದ ಮೇಲೆ, ಕೋಲ್ಕತ್ತಾ ಮತ್ತು ಬಿಧಾನ್ನಗರ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ. 

ಲೌಡಾನ್‌ ರಸ್ತೆಯಲ್ಲಿರುವ ಜೈನ್‌ ಅವರ ನಿವಾಸ ಹಾಗೂ ಸಾಲ್ಟ್‌ ಲೇಕ್‌ ಕಚೇರಿ ಮೇಲೆ ಗುರುವಾರ ಇ.ಡಿ. ದಾಳಿ ನಡೆದಿತ್ತು. ಜೈನ್ ಅವರು ಟಿಎಂಸಿ ಐ.ಟಿ ಸೆಲ್‌ನ ಮುಖ್ಯಸ್ಥರೂ ಹೌದು.

ಇ.ಡಿ. ಕಾರ್ಯಾಚರಣೆ ವೇಳೆ ಖುದ್ದಾಗಿ ಭೇಟಿ ನೀಡಿದ ಸಿಎಂ, ಪ್ರಮುಖ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್‌ ಸಾಧನೆಗಳನ್ನು ಸ್ಥಳದಿಂದ ತೆಗೆದುಹಾಕಿದ್ದಾರೆ ಎನ್ನಲಾಗಿದೆ. ಈ ನಾಟಕೀಯ ಬೆಳವಣಿಗೆ ಬೆನ್ನಲ್ಲೇ, ದಾಖಲಾಗಿರುವ ದೂರುಗಳು ಮತ್ತು ಇ.ಡಿ. ವಿರುದ್ಧ ಕಲ್ಕತ್ತ ಹೈಕೋರ್ಟ್‌ಗೆ ಟಿಎಂಸಿ ಸಲ್ಲಿಸಿರುವ ಮೇಲ್ಮನವಿಯು ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಮಮತಾ ಅವರು, ಇ.ಡಿ ಅಧಿಕಾರಿಗಳು ಹಾಗೂ ಸಿಆರ್‌ಪಿಎಫ್‌ ಸಿಬ್ಬಂದಿ ವಿರುದ್ಧ ಷೇಕ್ಸ್‌ಪಿಯರ್‌ ಸರಾನಿ ಪೊಲೀಸ್‌ ಠಾಣೆಯಲ್ಲಿ ಮತ್ತು ಎಲೆಕ್ಟ್ರಾನಿಕ್ ಕಾಂಪ್ಲೆಕ್ಸ್‌ನಲ್ಲಿ ತನಿಖೆ ನಡೆಸುತ್ತಿದ್ದ ಇ.ಡಿ. ತನಿಖಾಧಿಕಾರಿ ವಿರುದ್ಧ ಬಿಧಾನನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು ತಮ್ಮ ಮೇಲಿನ ಆರೋಪಕ್ಕೆ ಉತ್ತರಿಸಿರುವ ಮಮತಾ ಬ್ಯಾನರ್ಜಿ ಅವರು ನಾನು “ಯಾವುದೇ ತಪ್ಪು ಮಾಡಿಲ್ಲ” ಎಂದು ಶುಕ್ರವಾರ ಹೇಳಿದ್ದಾರೆ. ತಮ್ಮ ಪಕ್ಷದ ಡೇಟಾವನ್ನು ರಕ್ಷಿಸಲು ಮತ್ತು ಆತ್ಮರಕ್ಷಣೆಗಾಗಿ ಕಾರ್ಯನಿರ್ವಹಿಸಲು ಅವರಿಗೆ ಎಲ್ಲ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. 

“ಯಾರಾದರೂ ನನ್ನನ್ನು ಕೊಲ್ಲಲು ಬಂದರೆ, ನನಗೆ ಆತ್ಮರಕ್ಷಣೆಯ ಹಕ್ಕಿಲ್ಲವೇ?” ಎಂದು ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಬ್ಯಾನರ್ಜಿ ಕೇಳಿದರು. 

“ನಾನು ನಿನ್ನೆ ಮಾಡಿದ್ದು ತಪ್ಪಲ್ಲ. ಅವರು ನನ್ನ ಪಕ್ಷದ ಡೇಟಾವನ್ನು ಕದಿಯಲು ಪ್ರಯತ್ನಿಸಿದರು”. ತೃಣಮೂಲ ಕಾಂಗ್ರೆಸ್ ಜೊತೆ ಕೆಲಸ ಮಾಡುವ ಜೈನ್ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಅವರ ನಿವಾಸ ಮತ್ತು ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿಯನ್ನು ವಿರೋಧಿಸಿ ಬ್ಯಾನರ್ಜಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ರ್ಯಾಲಿಯು 8 ಬಿ ಬಸ್ ನಿಲ್ದಾಣ ಪ್ರದೇಶದಿಂದ ಪ್ರಾರಂಭವಾಗಿ ಹಜ್ರಾ ಮೋರ್ ಕಡೆಗೆ ಸಾಗಿತು, ಪಕ್ಷದ ಹಿರಿಯ ನಾಯಕರು, ಸಚಿವರು, ಸಂಸದರು, ಶಾಸಕರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.

ಇಡಿ ಕ್ರಮವನ್ನು ಉಲ್ಲೇಖಿಸಿ, ಬ್ಯಾನರ್ಜಿ, 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ತೃಣಮೂಲ ಕಾಂಗ್ರೆಸ್ ಕಾರ್ಯತಂತ್ರ ದಾಖಲೆಗಳನ್ನು ವಶಪಡಿಸಿಕೊಳ್ಳಲು ಸಂಸ್ಥೆ ಪ್ರಯತ್ನಿಸಿದೆ ಎಂದು ಆರೋಪಿಸಿದರು. 

“ನಿನ್ನೆ ಐ-ಪಿಎಸಿಯಲ್ಲಿ ನಡೆದ ದಾಳಿಯ ಸಮಯದಲ್ಲಿ, ಅವರು ನನ್ನ ಪಕ್ಷದ ಕಾರ್ಯತಂತ್ರದ ವಿವರಗಳನ್ನು ಕದಿಯಲು ಪ್ರಯತ್ನಿಸಿದರು. ನಾವು ಇದನ್ನು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ. 

ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು. “ಯಾರಾದರೂ ನನ್ನನ್ನು ರಾಜಕೀಯವಾಗಿ ಹೊಡೆಯಲು ಪ್ರಯತ್ನಿಸಿದರೆ, ನಾನು ರಾಜಕೀಯವಾಗಿ ಪುನರುಜ್ಜೀವನಗೊಳ್ಳುತ್ತೇನೆ” ಎಂದು ಅವರು ಹೇಳಿದರು.

ಸಾಂವಿಧಾನಿಕ ಸಂಸ್ಥೆಗಳ ಸಹಾಯದಿಂದ ಬಿಜೆಪಿ ಚುನಾವಣಾ ಕುಶಲತೆಯನ್ನು ನಡೆಸಿದೆ ಎಂದು ಬ್ಯಾನರ್ಜಿ ಆರೋಪಿಸಿದರು. “ಚುನಾವಣಾ ಆಯೋಗದ ಸಹಾಯದಿಂದ ಜನಾದೇಶವನ್ನು ಕದಿಯುವ ಮೂಲಕ ಬಿಜೆಪಿ ಮಹಾರಾಷ್ಟ್ರ ಚುನಾವಣೆಯನ್ನು ಗೆದ್ದಿತು. ಈಗ ಅವರು ಬಂಗಾಳದಲ್ಲಿಯೂ ಅದೇ ವಿಷಯವನ್ನು ಪುನರಾವರ್ತಿಸಲು ಬಯಸುತ್ತಾರೆ” ಎಂದು ಆರೋಪಿಸಿದರು.

ಪಕ್ಷದ ಪ್ರತಿಭಟನೆಯನ್ನು ವಿಸ್ತರಿಸಲು ಅವರು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರಿಗೆ ಸೂಚನೆ ನೀಡಿದರು. “ನಮ್ಮ ಮುಂದಿನ ಪ್ರತಿಭಟನೆಯ ತಾಣ ಚುನಾವಣಾ ಆಯೋಗದ ಕಚೇರಿಯಾಗಿರಲಿ” ಎಂದು ಅವರು ಹೇಳಿದ್ದಾರೆ. 

ಬಿಜೆಪಿ ನಾಯಕತ್ವವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಬ್ಯಾನರ್ಜಿ, ದೆಹಲಿಯ ಹಿರಿಯ ನಾಯಕರು ಆಪಾದಿತ ಹಗರಣಗಳಿಂದ ಲಾಭ ಪಡೆದಿದ್ದಾರೆ ಎಂದು ಹೇಳಿದ್ದಾರೆ. “ದೆಹಲಿಯ ಹಿರಿಯ ಬಿಜೆಪಿ ನಾಯಕರು ಕಲ್ಲಿದ್ದಲು ಹಗರಣದ ಆದಾಯವನ್ನು ಪಡೆದಿದ್ದಾರೆ. ಅಗತ್ಯವಿದ್ದರೆ ನಾನು ಸಾರ್ವಜನಿಕರ ಮುಂದೆ ಪುರಾವೆಗಳನ್ನು ಒದಗಿಸಬಲ್ಲೆ” ಎಂದು ಅವರು ಹೇಳಿದ್ದಾರೆ. 

ಅಧಿಕಾರಿಗಳು ನಮ್ಮನ್ನು ವಿಭಿನ್ನವಾಗಿ ನಡೆಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಮ್ಮ ಸಂಸದರ ಮೇಲೆ ಹಲ್ಲೆ ನಡೆಸಲಾಯಿತು, ಆದರೆ ಬಂಗಾಳದಲ್ಲಿ ಬಿಜೆಪಿ ನಾಯಕರಿಗೆ ಕೆಂಪು ಹಾಸಿನ ಸ್ವಾಗತ ದೊರೆಯಿತು” ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...