Homeಮುಖಪುಟಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

- Advertisement -
- Advertisement -

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು ರೂಪಿಸಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್, ರೈಜೋರ್ ದಳ, ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್), ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್) ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಪಕ್ಷಗಳು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಅಸ್ಸಾಂ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ದಿಲೀಪ್ ಸೈಕಿಯಾ ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಪಕ್ಷಗಳು ಹೇಳಿಕೊಂಡಿವೆ ಮತ್ತು ರಾಜ್ಯದ 126 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 60 ಕ್ಷೇತ್ರಗಳಲ್ಲಿ ‘ಬಿಜೆಪಿ ವಿರೋಧಿ ಮತದಾರರ’ ಹೆಸರುಗಳನ್ನು ಅಳಿಸುವುದನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಶಾಸಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಆರೋಪಿಸಿವೆ.

ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಅಸ್ಸಾಂನಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್)ಯ ಮಧ್ಯೆ ಈ ಆರೋಪಗಳು ಕೇಳಿ ಬಂದಿವೆ.

ಡಿಸೆಂಬರ್ 27ರಂದು, ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆ ಅಡಿಯಲ್ಲಿ ಮನೆ-ಮನೆ ಪರಿಶೀಲನೆಯ ನಂತರ ಅಸ್ಸಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲು ಗುರುತಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಂತಿಮ ಪಟ್ಟಿಯನ್ನು ಫೆಬ್ರವರಿ 10ರಂದು ಪ್ರಕಟಿಸಲಾಗುವುದು ಎಂದು ಹೇಳಿದೆ.

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಂತೆ, ಚುನಾವಣಾ ಆಯೋಗವು ಅಸ್ಸಾಂನಲ್ಲಿ ಎಸ್‌ಐಆರ್ ನಡೆಸುತ್ತಿಲ್ಲ. ಬದಲಾಗಿ, ನವೆಂಬರ್ 17ರಂದು, ಮತದಾರರ ಪಟ್ಟಿಯ ‘ವಿಶೇಷ ಪರಿಷ್ಕರಣೆ’ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ನವೆಂಬರ್ 22 ಮತ್ತು ಡಿಸೆಂಬರ್ 20ರ ನಡುವೆ ರಾಜ್ಯದಲ್ಲಿ ಮನೆ ಮನೆ ಪರಿಶೀಲನೆ ನಡೆದಿದೆ. ವಿಶೇಷ ತೀವ್ರ ಪರಿಷ್ಕರಣೆಯಂತೆ ಈ ಪ್ರಕ್ರಿಯೆಯು ದಾಖಲೆ ಪರಿಶೀಲನೆಯನ್ನು ಒಳಗೊಂಡಿರಲಿಲ್ಲ.

ಜನವರಿ 4ರಂದು ನಡೆದ ಆನ್‌ಲೈನ್ ಸಭೆಯಲ್ಲಿ ಆರೋಗ್ಯ ಸಚಿವ ಅಶೋಕ್ ಸಿಂಘಾಲ್ ಅವರೊಂದಿಗೆ ಸೈಕಿಯಾ ಅವರು ಅಳಿಸುವಿಕೆ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ವಿರೋಧ ಪಕ್ಷಗಳು ಶುಕ್ರವಾರ ತಮ್ಮ ದೂರಿನಲ್ಲಿ ಆರೋಪಿಸಿವೆ.

ರಾಜ್ಯದಲ್ಲಿ ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ವಿಶೇಷ ಪರಿಷ್ಕರಣೆಗಾಗಿ ಸಭೆಯ ದೃಶ್ಯಗಳನ್ನು ಪಡೆದುಕೊಳ್ಳಲು ಮತ್ತು ‘ಅಪರಾಧಿಗಳು ಹಾಗೂ ಪಿತೂರಿಗಾರರ’ ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷಗಳು ಪೊಲೀಸರನ್ನು ಒತ್ತಾಯಿಸಿವೆ.

ಪ್ರತ್ಯೇಕವಾಗಿ, ರೈಜೋರ್ ದಳದ ಮುಖ್ಯಸ್ಥ ಮತ್ತು ಶಿವಸಾಗರ್ ಶಾಸಕ ಅಖಿಲ್ ಗೊಗೊಯ್ ಅವರು ಶುಕ್ರವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ‘ಮತದಾರರ ಪಟ್ಟಿ ನಿರ್ವಹಣೆ’ ಉದ್ದೇಶಕ್ಕಾಗಿ ಜನವರಿ 4 ರಂದು ನಡೆದ ಆನ್‌ಲೈನ್ ಸಭೆಯ ಬಗ್ಗೆ ಉನ್ನತ ಮಟ್ಟದ, ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

‘ಪ್ರತಿ ಕ್ಷೇತ್ರದ 10,000 ಮತಗಳನ್ನು ಅಳಿಸುವ’ ನಿರ್ದೇಶನಕ್ಕೆ ಸಂಬಂಧಿಸಿದ ಬಿಜೆಪಿ ನಾಯಕತ್ವದ ಎಲ್ಲಾ ಡಿಜಿಟಲ್ ದಾಖಲೆಗಳು ಮತ್ತು ಸಂವಹನ ದಾಖಲೆಗಳನ್ನು ಪಡೆದುಕೊಳ್ಳುವಂತೆ ಗೊಗೊಯ್ ಚುನಾವಣಾ ಸಮಿತಿಯನ್ನು ಕೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಸಲ್ಲಿಸಲಾದ ಫಾರ್ಮ್ 7 ಅರ್ಜಿಗಳ ಲೆಕ್ಕವನ್ನು ಅವರು ಕೋರಿದ್ದು, ಈ ವಿಷಯ ಬಗೆಹರಿಯುವವರೆಗೆ ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಬಿಜೆಪಿ ವಿಪಕ್ಷಗಳ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಹೆಸರುಗಳ ಅಳಿಸುವಿಕೆಯನ್ನು ಗೊಗೊಯ್ ತಪ್ಪಾಗಿ ನಿರೂಪಿಸಿದ್ದಾರೆ ಎಂದು ಪಕ್ಷದ ವಕ್ತಾರ ಜಯಂತ ಕುಮಾರ್ ಗೋಸ್ವಾಮಿ ಹೇಳಿದ್ದಾರೆ.

ಗೋಲಾಘಾಟ್ ಜಿಲ್ಲೆಯ ಸರುಪಥರ್ ವಿಧಾನಸಭಾ ಕ್ಷೇತ್ರದ ಉರಿಯಮ್‌ಘಾಟ್‌ನಲ್ಲಿ ನಡೆಸಲಾದ ತೆರವು ಕಾರ್ಯಾಚರಣೆಯ ನಂತರ 11,000 ಕ್ಕೂ ಹೆಚ್ಚು ಮುಸ್ಲಿಮರನ್ನು ಹೊರಹಾಕಲಾಗಿದೆ. ಹಾಗಾಗಿ, ಈಗ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ ಕ್ಷೇತ್ರದ ಮತದಾರರ ಪಟ್ಟಿಯಿಂದ 11,000 ಸಾವಿರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದಿದ್ದಾರೆ.

ಮಿಯಾಗಳನ್ನು ಓಲೈಸಲು ವಿರೋಧ ಪಕ್ಷಗಳು ಪೊಲೀಸ್ ದೂರು ದಾಖಲಿಸಿವೆ ಎಂದು ಗೋಸ್ವಾಮಿ ಹೇಳಿದ್ದಾರೆ. ‘ಮಿಯಾ’ ಎಂಬುದು ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಅವಹೇಳನಕಾರಿಯಾಗಿ ಸಂಬೋಧಿಸಲು ಬಳಸುವ ಪದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....