Homeಅಂತರಾಷ್ಟ್ರೀಯಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

- Advertisement -
- Advertisement -

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ.

ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ ಕುಸಿತ, ಹಣದುಬ್ಬರ, ಬೆಲೆ ಏರಿಕೆ) ಶುರುವಾದ ಪ್ರತಿಭಟನೆ, ಈಗ ಸರ್ಕಾರ ವಿರೋಧಿ ಕ್ರಾಂತಿಯಾಗಿ ಬದಲಾಗಿದೆ. ಪ್ರತಿಭಟನಕಾರರು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯನ್ನು ಅಧಿಕಾರದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ.

“ಸರ್ವಾಧಿಕಾರಿಗೆ ಮರಣ!”, “ಈ ವರ್ಷ ರಕ್ತದ ವರ್ಷ, ಸೈಯದ್ ಅಲಿ ಉರುಳುತ್ತಾನೆ/ಕೆಳಗಿಳಿಯುತ್ತಾನೆ” ಇತ್ಯಾದಿ ಘೋಷಣೆಗಳನ್ನು ಖಮೇನಿ ವಿರುದ್ದ ಪ್ರತಿಭಟನಕಾರರು ಕೂಗುತ್ತಿದ್ದಾರೆ. ಇದೇ ವೇಳೆ ಹಳೆಯ ಪಹ್ಲವಿ ರಾಜವಂಶದ ರಾಜಕುಮಾರ ರೆಝಾ ಪಹ್ಲವಿಯನ್ನು ಬೆಂಬಲಿಸುತ್ತಿದ್ದಾರೆ. “ಶಾಹ್ ದೀರ್ಘಾಯುಷ್ಯ!”, “ರೆಝಾ ಪಹ್ಲವಿ ಬರುತ್ತಿದ್ದಾರೆ!” ಈ ಘೋಷಣೆಗಳೂ ಕೂಡ ಪ್ರತಿಭಟನಾಕಾರರಿಂದ ಕೇಳಿ ಬರುತ್ತಿವೆ.

ಇರಾನ್‌ನ ಎಲ್ಲ 31 ಪ್ರಾಂತ್ಯಗಳ 100ಕ್ಕೂ ಹೆಚ್ಚು ನಗರಗಳಲ್ಲಿ (ತೆಹ್ರಾನ್, ಇಸ್ಫಹಾನ್, ಕೊಮ್, ಶಿರಾಜ್, ಕರ್ಮಾನ್‌ಶಾಹ್, ಮಶ್ಹದ್ ಸೇರಿದಂತೆ) ಪ್ರತಿಭಟನೆಗಳು ನಡೆಯುತ್ತಿವೆ. ಖಮೇನಿಯ ಪ್ರಭಾವ ಹೆಚ್ಚಿರುವ ಕೇಂದ್ರಗಳಲ್ಲೂ (ಕೊಮ್, ಮಶ್ಹದ್) ಪ್ರತಿಭಟನೆಗಳು ಹರಡಿವೆ.

ಪೊಲೀಸ್, ಬಸಿಜ್ ಪ್ಯಾರಾ ಮಿಲಿಟರಿ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೈನಿಕರು ಲೈವ್ ಬುಲೆಟ್, ಟಿಯರ್ ಗ್ಯಾಸ್, ಶಾಟ್‌ಗನ್‌ನಿಂದ ಮೆಟಲ್ ಪೆಲೆಟ್‌ಗಳನ್ನು ಬಳಸಿ ಪ್ರತಿಭಟನಾಕಾರರ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿಭಟನಕಾರರು ಬಸಿಜ್ ಕಚೇರಿಗಳು, ಸರ್ಕಾರಿ ಕಟ್ಟಡಗಳು, ಪೊಲೀಸ್ ವಾಹನಗಳನ್ನು ಸುಟ್ಟಿದ್ದಾರೆ. ಕೆಲವು ಸ್ಥಳಗಳಲ್ಲಿ ತೀವ್ರ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ಮಾನವ ಹಕ್ಕು ಸಂಘಟನೆಗಳ ಪ್ರಕಾರ (HRANA, Hengaw, Amnesty)ಕನಿಷ್ಠ 51 ರಿಂದ 65ಕ್ಕೂ ಹೆಚ್ಚು ಪ್ರತಿಭಟನಕಾರರು ಸತ್ತಿದ್ದಾರೆ (ಮಕ್ಕಳು ಸೇರಿದಂತೆ). ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಐಆರ್‌ಜಿಸಿ ಸೈನಿಕರು ಕೂಡ ಬಲಿಯಾಗಿದ್ದಾರೆ.

2000ಕ್ಕಿಂತ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಬಂಧಿಸುವ ಪ್ರಕ್ರಿಯೆಗಳೂ ನಡೆದಿವೆ.

ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳನ್ನು ಸರ್ಕಾರ ಕಡಿತಗೊಳಿಸಿದೆ. ಇದರಿಂದ ಮಾಹಿತಿ ಹರಿವು ತಡೆಯಲಾಗಿದೆ, ಆದರೆ ವಿಪಿಎನ್‌ ಮತ್ತು ಸ್ಟಾರ್‌ಲಿಂಕ್ ಮೂಲಕ ಕೆಲವು ವೀಡಿಯೊಗಳು ಹೊರಬರುತ್ತಿವೆ.

ರಸ್ತೆಗಳನ್ನು ತಡೆಯುವುದು, ಬೆಂಕಿ ಹಚ್ಚುವುದು, ಖಮೇನಿ ಪೋಸ್ಟರ್‌ಗಳನ್ನು ಸುಡುವುದು (ಮಹಿಳೆಯರು ಸಿಗರೇಟ್ ಉರಿಸಲು ಬಳಸುವುದು), ಹಳೆಯ ಲಯನ್ ಅಂಡ್ ಸನ್ ಧ್ವಜವನ್ನು (ಪಹ್ಲವಿ ಕಾಲದ ರಾಜಧ್ವಜ) ತೋರಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಖಮೇನಿ ಆಡಳಿತದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಂತಾರಾಷ್ಟ್ರಿಯ ಪ್ರತಿಕ್ರಿಯೆ

ಅಮೆರಿಕ ಅಧ್ಯಕ್ಷ ಟ್ರಂಪ್ “ಇರಾನ್ ದೊಡ್ಡ ಸಮಸ್ಯೆಯಲ್ಲಿದೆ” ಎಂದಿದ್ದು, ಪ್ರತಿಭಟನಕಾರರನ್ನು “ಧೈರ್ಯಶಾಲಿಗಳು” ಎಂದು ಹೊಗಳಿದ್ದಾರೆ. ಹೆಚ್ಚಿನ ಸಾವುಗಳಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯುರೋಪಿಯನ್ ದೇಶಗಳು (ಫ್ರಾನ್ಸ್, ಯುಕೆ, ಜರ್ಮನಿ) ಹತ್ಯೆಗಳನ್ನು ಖಂಡಿಸಿದ್ದು, ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸಿವೆ. ಎಕ್ಸ್‌ (ಟ್ವಿಟರ್) ಪ್ರತಿಭಟನಾಕಾರರನ್ನು ಬೆಂಬಲಿಸಿ ಇರಾನ್ ಧ್ವಜದ ಇಮೋಜಿಯನ್ನು ಹಳೆಯ ಲಯನ್ ಅಂಡ್ ಸನ್‌ಗೆ ಬದಲಾಯಿಸಿದೆ.

ಈ ಪ್ರತಿಭಟನೆಗಳು ಇರಾನ್‌ನ ಇಸ್ಲಾಮಿಕ್ ರಿಪಬ್ಲಿಕ್‌ಗೆ ಇತ್ತೀಚಿನ ವರ್ಷಗಳಲ್ಲಿ ಎದುರಾಗಿರುವ ಅತಿ ದೊಡ್ಡ ಆಂತರಿಕ ಸವಾಲುಗಳಲ್ಲಿ ಒಂದು. ಆರ್ಥಿಕ ದುಸ್ಥಿತಿ, ರಾಜಕೀಯ ಆಡಳಿತದ ವಿರುದ್ದ ಆಕ್ರೋಶ ಮತ್ತು 2025ರ ಇಸ್ರೇಲ್-ಇರಾನ್ ಸಂಘರ್ಷದ ನಂತರ ಖಮೇನಿ ಆಡಳಿತಕ್ಕೆ ದೊಡ್ಡ ಸವಾಲು ಎದುರಾಗಿದೆ. ಸ್ಥಿತಿ ಬಹಳ ತ್ವರಿತವಾಗಿ ಬದಲಾಗುತ್ತಿದೆ, ದಮನ ತೀವ್ರವಾಗುತ್ತಿದ್ದರೂ ಪ್ರತಿಭಟನೆಗಳು ಮುಂದುವರೆಯುತ್ತಿವೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಮಧ್ಯಪ್ರವೇಶ ಕೋರಿದ ಪಹ್ಲವಿ

ಹೊರಗಟ್ಟಲ್ಪಟ್ಟ ಇರಾನ್‌ನ ಮಾಜಿ ರಾಜಕುಮಾರ ರೆಝಾ ಪಹ್ಲವಿ (ಪಹ್ಲವಿ ವಂಶದ ಕೊನೆಯ ಶಾಹ್‌ನ ಮಗ) ಜನವರಿ 9, 2026ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸಾಮಾಜಿಕ ಜಾಲತಾಣ ಪೋಸ್ಟ್ ಮೂಲಕ ತುರ್ತು ಮನವಿಯೊಂದನ್ನು ಮಾಡಿದ್ದು, ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಪ್ರತಿಭಟನಾಕಾರರನ್ನು ಬೆಂಬಲಿಸುವಂತೆ ಕೋರಿದ್ದಾರೆ.

“ಮಿಸ್ಟರ್ ಪ್ರೆಸಿಡೆಂಟ್, ಇದು ನಿಮ್ಮ ಗಮನ, ಬೆಂಬಲ ಮತ್ತು ಕ್ರಮಕ್ಕಾಗಿ ತುರ್ತು ಮತ್ತು ತಕ್ಷಣದ ಕೋರಿಕೆಯಾಗಿದೆ. ಪ್ರತಿಭಟನಕಾರರು ರಸ್ತೆಗಳಲ್ಲಿ ಲೈವ್ ಬುಲೆಟ್‌ಗಳನ್ನು ಎದುರಿಸುತ್ತಿದ್ದಾರೆ. ಈಗ ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳ ನಿರ್ಬಂಧದಿಂದ ಸಂಪರ್ಕ ಕಡಿತಗೊಂಡಿದೆ. ಸುಪ್ರೀಂ ಲೀಡರ್ ಅಲಿ ಖಮೇನಿ ಇಂಟರ್‌ನೆಟ್‌, ಫೋನ್‌ ಸೇವೆಗಳನ್ನು ನಿರ್ಬಂಧಿಸಿ ‘ಯುವ ನಾಯಕರನ್ನು ಕೊಲ್ಲಲು’ ಯೋಜಿಸುತ್ತಿದ್ದಾರೆ” ಎಂದು ಪಹ್ಲವಿ ಟ್ರಂಪ್‌ ಅನ್ನು ಉದ್ದೇಶಿಸಿ ಮಾಡಿದ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಟ್ರಂಪ್ ಶಾಂತಿ ಬಯಸುವ ಮತ್ತು ಮಾತಿನ ಮೇಲೆ ನಿಲ್ಲುವ ಮನುಷ್ಯ” ಎಂದು ಕೊಂಡಾಡಿರುವ ಪಹ್ಲವಿ, ಇರಾನ್ ಜನರಿಗೆ ಸಹಾಯ ಮಾಡಲು ಸಿದ್ಧರಾಗಿರಿ ಎಂದು ಕೋರಿದ್ದಾರೆ.

ಖಮೇನಿ ಹೇಳಿದ್ದೇನು?

ಜನವರಿ 9, 2026ರಂದು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ಪ್ರತಿಭಟನೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನಕಾರರನ್ನು “ವಾಂಡಲ್ಸ್” (ವಿನಾಶಕಾರಿ), “ಸಬೋಟರ್ಸ್” (ವಿನಾಶಕಾರಿ ಏಜೆಂಟ್‌ಗಳು) ಮತ್ತು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ) ಬೆಂಬಲಿಗರು ಎಂದು ಕರೆದಿದ್ದಾರೆ.

“ಅಮೆರಿಕಾ ಅಧ್ಯಕ್ಷನನ್ನು ಸಂತೋಷಪಡಿಸಲು ಪ್ರತಿಭಟನಾಕಾರರು ತಮ್ಮ ರಸ್ತೆಗಳನ್ನು ಹಾಳುಗೆಡವುತ್ತಿದ್ದಾರೆ. ಟ್ರಂಪ್ ಕೈಗಳಲ್ಲಿ ಇರಾನ್ ಜನರ ರಕ್ತ ಮೆತ್ತಿಕೊಂಡಿವೆ. ಅವರು ತಮ್ಮ ದೇಶದ ಸಮಸ್ಯೆಗಳತ್ತ ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ಆಡಳಿತ “ಹಿಂದಕ್ಕೆ ಸರಿಯುವುದಿಲ್ಲ” ಎಂದು ದೃಢವಾಗಿ ಹೇಳಿ, ಹೆಚ್ಚಿನ ದಮನದ ಸಂಕೇತ ನೀಡಿದೆ.
ಪ್ರತಿಭಟನೆಗಳನ್ನು “ಟೆರರಿಸ್ಟ್ ಆಕ್ಷನ್‌” ಎಂದು ಕರೆದು, ಏಕತೆಗೆ ಕರೆ ಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...