Homeಅಂತರಾಷ್ಟ್ರೀಯಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

- Advertisement -
- Advertisement -

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ.

ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ ಕುಸಿತ, ಹಣದುಬ್ಬರ, ಬೆಲೆ ಏರಿಕೆ) ಶುರುವಾದ ಪ್ರತಿಭಟನೆ, ಈಗ ಸರ್ಕಾರ ವಿರೋಧಿ ಕ್ರಾಂತಿಯಾಗಿ ಬದಲಾಗಿದೆ. ಪ್ರತಿಭಟನಕಾರರು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯನ್ನು ಅಧಿಕಾರದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ.

“ಸರ್ವಾಧಿಕಾರಿಗೆ ಮರಣ!”, “ಈ ವರ್ಷ ರಕ್ತದ ವರ್ಷ, ಸೈಯದ್ ಅಲಿ ಉರುಳುತ್ತಾನೆ/ಕೆಳಗಿಳಿಯುತ್ತಾನೆ” ಇತ್ಯಾದಿ ಘೋಷಣೆಗಳನ್ನು ಖಮೇನಿ ವಿರುದ್ದ ಪ್ರತಿಭಟನಕಾರರು ಕೂಗುತ್ತಿದ್ದಾರೆ. ಇದೇ ವೇಳೆ ಹಳೆಯ ಪಹ್ಲವಿ ರಾಜವಂಶದ ರಾಜಕುಮಾರ ರೆಝಾ ಪಹ್ಲವಿಯನ್ನು ಬೆಂಬಲಿಸುತ್ತಿದ್ದಾರೆ. “ಶಾಹ್ ದೀರ್ಘಾಯುಷ್ಯ!”, “ರೆಝಾ ಪಹ್ಲವಿ ಬರುತ್ತಿದ್ದಾರೆ!” ಈ ಘೋಷಣೆಗಳೂ ಕೂಡ ಪ್ರತಿಭಟನಾಕಾರರಿಂದ ಕೇಳಿ ಬರುತ್ತಿವೆ.

ಇರಾನ್‌ನ ಎಲ್ಲ 31 ಪ್ರಾಂತ್ಯಗಳ 100ಕ್ಕೂ ಹೆಚ್ಚು ನಗರಗಳಲ್ಲಿ (ತೆಹ್ರಾನ್, ಇಸ್ಫಹಾನ್, ಕೊಮ್, ಶಿರಾಜ್, ಕರ್ಮಾನ್‌ಶಾಹ್, ಮಶ್ಹದ್ ಸೇರಿದಂತೆ) ಪ್ರತಿಭಟನೆಗಳು ನಡೆಯುತ್ತಿವೆ. ಖಮೇನಿಯ ಪ್ರಭಾವ ಹೆಚ್ಚಿರುವ ಕೇಂದ್ರಗಳಲ್ಲೂ (ಕೊಮ್, ಮಶ್ಹದ್) ಪ್ರತಿಭಟನೆಗಳು ಹರಡಿವೆ.

ಪೊಲೀಸ್, ಬಸಿಜ್ ಪ್ಯಾರಾ ಮಿಲಿಟರಿ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೈನಿಕರು ಲೈವ್ ಬುಲೆಟ್, ಟಿಯರ್ ಗ್ಯಾಸ್, ಶಾಟ್‌ಗನ್‌ನಿಂದ ಮೆಟಲ್ ಪೆಲೆಟ್‌ಗಳನ್ನು ಬಳಸಿ ಪ್ರತಿಭಟನಾಕಾರರ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿಭಟನಕಾರರು ಬಸಿಜ್ ಕಚೇರಿಗಳು, ಸರ್ಕಾರಿ ಕಟ್ಟಡಗಳು, ಪೊಲೀಸ್ ವಾಹನಗಳನ್ನು ಸುಟ್ಟಿದ್ದಾರೆ. ಕೆಲವು ಸ್ಥಳಗಳಲ್ಲಿ ತೀವ್ರ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ಮಾನವ ಹಕ್ಕು ಸಂಘಟನೆಗಳ ಪ್ರಕಾರ (HRANA, Hengaw, Amnesty)ಕನಿಷ್ಠ 51 ರಿಂದ 65ಕ್ಕೂ ಹೆಚ್ಚು ಪ್ರತಿಭಟನಕಾರರು ಸತ್ತಿದ್ದಾರೆ (ಮಕ್ಕಳು ಸೇರಿದಂತೆ). ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಐಆರ್‌ಜಿಸಿ ಸೈನಿಕರು ಕೂಡ ಬಲಿಯಾಗಿದ್ದಾರೆ.

2000ಕ್ಕಿಂತ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಬಂಧಿಸುವ ಪ್ರಕ್ರಿಯೆಗಳೂ ನಡೆದಿವೆ.

ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳನ್ನು ಸರ್ಕಾರ ಕಡಿತಗೊಳಿಸಿದೆ. ಇದರಿಂದ ಮಾಹಿತಿ ಹರಿವು ತಡೆಯಲಾಗಿದೆ, ಆದರೆ ವಿಪಿಎನ್‌ ಮತ್ತು ಸ್ಟಾರ್‌ಲಿಂಕ್ ಮೂಲಕ ಕೆಲವು ವೀಡಿಯೊಗಳು ಹೊರಬರುತ್ತಿವೆ.

ರಸ್ತೆಗಳನ್ನು ತಡೆಯುವುದು, ಬೆಂಕಿ ಹಚ್ಚುವುದು, ಖಮೇನಿ ಪೋಸ್ಟರ್‌ಗಳನ್ನು ಸುಡುವುದು (ಮಹಿಳೆಯರು ಸಿಗರೇಟ್ ಉರಿಸಲು ಬಳಸುವುದು), ಹಳೆಯ ಲಯನ್ ಅಂಡ್ ಸನ್ ಧ್ವಜವನ್ನು (ಪಹ್ಲವಿ ಕಾಲದ ರಾಜಧ್ವಜ) ತೋರಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಖಮೇನಿ ಆಡಳಿತದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಂತಾರಾಷ್ಟ್ರಿಯ ಪ್ರತಿಕ್ರಿಯೆ

ಅಮೆರಿಕ ಅಧ್ಯಕ್ಷ ಟ್ರಂಪ್ “ಇರಾನ್ ದೊಡ್ಡ ಸಮಸ್ಯೆಯಲ್ಲಿದೆ” ಎಂದಿದ್ದು, ಪ್ರತಿಭಟನಕಾರರನ್ನು “ಧೈರ್ಯಶಾಲಿಗಳು” ಎಂದು ಹೊಗಳಿದ್ದಾರೆ. ಹೆಚ್ಚಿನ ಸಾವುಗಳಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯುರೋಪಿಯನ್ ದೇಶಗಳು (ಫ್ರಾನ್ಸ್, ಯುಕೆ, ಜರ್ಮನಿ) ಹತ್ಯೆಗಳನ್ನು ಖಂಡಿಸಿದ್ದು, ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸಿವೆ. ಎಕ್ಸ್‌ (ಟ್ವಿಟರ್) ಪ್ರತಿಭಟನಾಕಾರರನ್ನು ಬೆಂಬಲಿಸಿ ಇರಾನ್ ಧ್ವಜದ ಇಮೋಜಿಯನ್ನು ಹಳೆಯ ಲಯನ್ ಅಂಡ್ ಸನ್‌ಗೆ ಬದಲಾಯಿಸಿದೆ.

ಈ ಪ್ರತಿಭಟನೆಗಳು ಇರಾನ್‌ನ ಇಸ್ಲಾಮಿಕ್ ರಿಪಬ್ಲಿಕ್‌ಗೆ ಇತ್ತೀಚಿನ ವರ್ಷಗಳಲ್ಲಿ ಎದುರಾಗಿರುವ ಅತಿ ದೊಡ್ಡ ಆಂತರಿಕ ಸವಾಲುಗಳಲ್ಲಿ ಒಂದು. ಆರ್ಥಿಕ ದುಸ್ಥಿತಿ, ರಾಜಕೀಯ ಆಡಳಿತದ ವಿರುದ್ದ ಆಕ್ರೋಶ ಮತ್ತು 2025ರ ಇಸ್ರೇಲ್-ಇರಾನ್ ಸಂಘರ್ಷದ ನಂತರ ಖಮೇನಿ ಆಡಳಿತಕ್ಕೆ ದೊಡ್ಡ ಸವಾಲು ಎದುರಾಗಿದೆ. ಸ್ಥಿತಿ ಬಹಳ ತ್ವರಿತವಾಗಿ ಬದಲಾಗುತ್ತಿದೆ, ದಮನ ತೀವ್ರವಾಗುತ್ತಿದ್ದರೂ ಪ್ರತಿಭಟನೆಗಳು ಮುಂದುವರೆಯುತ್ತಿವೆ ಎಂದು ವರದಿಗಳು ಹೇಳಿವೆ.

ಟ್ರಂಪ್ ಮಧ್ಯಪ್ರವೇಶ ಕೋರಿದ ಪಹ್ಲವಿ

ಹೊರಗಟ್ಟಲ್ಪಟ್ಟ ಇರಾನ್‌ನ ಮಾಜಿ ರಾಜಕುಮಾರ ರೆಝಾ ಪಹ್ಲವಿ (ಪಹ್ಲವಿ ವಂಶದ ಕೊನೆಯ ಶಾಹ್‌ನ ಮಗ) ಜನವರಿ 9, 2026ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸಾಮಾಜಿಕ ಜಾಲತಾಣ ಪೋಸ್ಟ್ ಮೂಲಕ ತುರ್ತು ಮನವಿಯೊಂದನ್ನು ಮಾಡಿದ್ದು, ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಪ್ರತಿಭಟನಾಕಾರರನ್ನು ಬೆಂಬಲಿಸುವಂತೆ ಕೋರಿದ್ದಾರೆ.

“ಮಿಸ್ಟರ್ ಪ್ರೆಸಿಡೆಂಟ್, ಇದು ನಿಮ್ಮ ಗಮನ, ಬೆಂಬಲ ಮತ್ತು ಕ್ರಮಕ್ಕಾಗಿ ತುರ್ತು ಮತ್ತು ತಕ್ಷಣದ ಕೋರಿಕೆಯಾಗಿದೆ. ಪ್ರತಿಭಟನಕಾರರು ರಸ್ತೆಗಳಲ್ಲಿ ಲೈವ್ ಬುಲೆಟ್‌ಗಳನ್ನು ಎದುರಿಸುತ್ತಿದ್ದಾರೆ. ಈಗ ದೇಶವ್ಯಾಪಿ ಇಂಟರ್ನೆಟ್ ಮತ್ತು ಫೋನ್ ಸೇವೆಗಳ ನಿರ್ಬಂಧದಿಂದ ಸಂಪರ್ಕ ಕಡಿತಗೊಂಡಿದೆ. ಸುಪ್ರೀಂ ಲೀಡರ್ ಅಲಿ ಖಮೇನಿ ಇಂಟರ್‌ನೆಟ್‌, ಫೋನ್‌ ಸೇವೆಗಳನ್ನು ನಿರ್ಬಂಧಿಸಿ ‘ಯುವ ನಾಯಕರನ್ನು ಕೊಲ್ಲಲು’ ಯೋಜಿಸುತ್ತಿದ್ದಾರೆ” ಎಂದು ಪಹ್ಲವಿ ಟ್ರಂಪ್‌ ಅನ್ನು ಉದ್ದೇಶಿಸಿ ಮಾಡಿದ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ಟ್ರಂಪ್ ಶಾಂತಿ ಬಯಸುವ ಮತ್ತು ಮಾತಿನ ಮೇಲೆ ನಿಲ್ಲುವ ಮನುಷ್ಯ” ಎಂದು ಕೊಂಡಾಡಿರುವ ಪಹ್ಲವಿ, ಇರಾನ್ ಜನರಿಗೆ ಸಹಾಯ ಮಾಡಲು ಸಿದ್ಧರಾಗಿರಿ ಎಂದು ಕೋರಿದ್ದಾರೆ.

ಖಮೇನಿ ಹೇಳಿದ್ದೇನು?

ಜನವರಿ 9, 2026ರಂದು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ಪ್ರತಿಭಟನೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ರತಿಭಟನಕಾರರನ್ನು “ವಾಂಡಲ್ಸ್” (ವಿನಾಶಕಾರಿ), “ಸಬೋಟರ್ಸ್” (ವಿನಾಶಕಾರಿ ಏಜೆಂಟ್‌ಗಳು) ಮತ್ತು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ) ಬೆಂಬಲಿಗರು ಎಂದು ಕರೆದಿದ್ದಾರೆ.

“ಅಮೆರಿಕಾ ಅಧ್ಯಕ್ಷನನ್ನು ಸಂತೋಷಪಡಿಸಲು ಪ್ರತಿಭಟನಾಕಾರರು ತಮ್ಮ ರಸ್ತೆಗಳನ್ನು ಹಾಳುಗೆಡವುತ್ತಿದ್ದಾರೆ. ಟ್ರಂಪ್ ಕೈಗಳಲ್ಲಿ ಇರಾನ್ ಜನರ ರಕ್ತ ಮೆತ್ತಿಕೊಂಡಿವೆ. ಅವರು ತಮ್ಮ ದೇಶದ ಸಮಸ್ಯೆಗಳತ್ತ ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ಆಡಳಿತ “ಹಿಂದಕ್ಕೆ ಸರಿಯುವುದಿಲ್ಲ” ಎಂದು ದೃಢವಾಗಿ ಹೇಳಿ, ಹೆಚ್ಚಿನ ದಮನದ ಸಂಕೇತ ನೀಡಿದೆ.
ಪ್ರತಿಭಟನೆಗಳನ್ನು “ಟೆರರಿಸ್ಟ್ ಆಕ್ಷನ್‌” ಎಂದು ಕರೆದು, ಏಕತೆಗೆ ಕರೆ ಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...