Homeಮುಖಪುಟಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

- Advertisement -
- Advertisement -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ. ತಾಜುದ್ದೀನ್ ಅವರ ಮೇಲೆ ಸುಳ್ಳಾರೋಪ ಹೊರಿಸಿ ಅಕ್ರಮವಾಗಿ ಬಂಧಿಸಿದ್ದಕ್ಕೆ, ಅವರನ್ನು ಕಸ್ಟಡಿಯಲ್ಲಿಟ್ಟುಕೊಂಡು ಮಾನಸಿಕ, ದೈಹಿಕ ಕಿರುಕುಳ ನೀಡಿದ್ದಕ್ಕೆ ಮತ್ತು ಅವರ ವೈಯಕ್ತಿಯ ಘನತೆಯನ್ನು ಹಾಳು ಮಾಡಿದ್ದಕ್ಕೆ ಪರಿಹಾರ ಒದಗಿಸಲು ನ್ಯಾಯಾಲಯ ಆದೇಶಿಸಿದೆ.

ತಾಜುದ್ದೀನ್‌ಗೆ ನೀಡಲಾದ 14 ಲಕ್ಷ ರೂಪಾಯಿ ಪರಿಹಾರ ಹಣದಲ್ಲಿ ಅವರ ಪತ್ನಿ ಮತ್ತು ಮೂವರು ಮಕ್ಕಳ ಪಾಲು ತಲಾ 1 ಲಕ್ಷ ರೂಪಾಯಿಗಳು ಸೇರಿವೆ.

ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ತಾಜುದ್ದೀನ್ ಅವರನ್ನು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತಪ್ಪಾಗಿ ಸರಗಳ್ಳತನ ಮಾಡುವ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದರು. 2018ರಲ್ಲಿ ಅವರು ತಮ್ಮ ಮಗಳ ಮದುವೆಗೆ ಕೇರಳಕ್ಕೆ ಬಂದಿದ್ದಾಗ ಪೊಲೀಸರು ಬಂಧಿಸಿ ಕಿರುಕುಳ ನೀಡಿದ್ದರು. ಮಾಡದ ತಪ್ಪಿಗೆ 54 ದಿನಗಳನ್ನು ತಾಜುದ್ದೀನ್ ಜೈಲಿನಲ್ಲಿ ಕಳೆದಿದ್ದರು.

ಅಕ್ಟೋಬರ್ 14, 2025ರಂದು ಹೊರಡಿಸಲಾದ ಆದೇಶದಲ್ಲಿ ನ್ಯಾಯಮೂರ್ತಿ ಪಿ.ಎಂ. ಮನೋಜ್ ಅವರು, ಪೊಲೀಸ್ ಅಧಿಕಾರಿಗಳು ಇಂತಹ ‘ಬೇಜವಾಬ್ದಾರಿ ಕೃತ್ಯಗಳಲ್ಲಿ ತೊಡಗದಂತೆ ನೋಡಿಕೊಳ್ಳಲು ಪರಿಹಾರ ನೀಡಲು ಆದೇಶಿಸಲಾಗಿದೆ. ಭವಿಷ್ಯದಲ್ಲಿ ಇತರ ಅಧಿಕಾರಿಗಳು ಇದೇ ರೀತಿಯ ಕ್ರಮಗಳಲ್ಲಿ ತೊಡಗದಂತೆ ತಡೆಯಬೇಕು ಎಂದು ಹೇಳಿದ್ದಾರೆ.

ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ತಾಜುದ್ದೀನ್ ಮತ್ತು ಅವರ ಕುಟುಂಬವು ನಾಗರಿಕ ಕಾನೂನು ಪರಿಹಾರಗಳನ್ನು ಕೋರಲು ಸ್ವತಂತ್ರರು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ನ್ಯಾಯಾಲಯದ ಆದೇಶದ ಪ್ರತಿಯನ್ನು ಜನವರಿ 8, 2026 ರಂದು ಪ್ರಕಟಿಸಲಾಗಿದೆ.

ತನಗೆ ನ್ಯಾಯ ಸಿಕ್ಕಿದರೂ, ಪ್ರಕರಣದ ಸಮಯದಲ್ಲಿ ಅನುಭವಿಸಿದ ದೈಹಿಕ ಮತ್ತು ಮಾನಸಿಕ ಯಾತನೆಯಿಂದ ಇನ್ನೂ ಚೇತರಿಸಿಕೊಂಡಿಲ್ಲ ಎಂದು ತಾಜುದ್ದೀನ್ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಪ್ರಕರಣದ ನಂತರ ನನ್ನ ವ್ಯವಹಾರ ಕುಸಿದು ನಾನು ಭಾರೀ ನಷ್ಟ ಅನುಭವಿಸಿದ್ದೇನೆ. ಅವೆಲ್ಲದಕ್ಕೂ ನ್ಯಾಯಾಲಯದ ಆದೇಶ ಪರಿಹಾರ ನೀಡುವುದಿಲ್ಲ. ಆದರೂ, ನನಗೆ ನ್ಯಾಯ ಸಿಕ್ಕಿದೆ ಎಂದು ನಾನು ಹೇಳಬಲ್ಲೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಾನು ಸಿವಿಲ್ ಮೊಕದ್ದಮೆ ಹೂಡುತ್ತೇನೆ” ಎಂದು ತಾಜುದ್ದೀನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...