Homeಮುಖಪುಟಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು :...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

- Advertisement -
- Advertisement -

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10) ತನಿಖೆ ಆರಂಭಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ತನಿಖಾಧಿಕಾರಿಗಳು ಕಾರ್ಯಾಚರಣೆಯ ಸಮಯದಲ್ಲಿ ಎರಡೂ ಸ್ಥಳಗಳಲ್ಲಿ ಹಾಜರಿದ್ದ ಇಡಿ ಸಿಬ್ಬಂದಿಯನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಶನಿವಾರ ಬೆಳಿಗ್ಗೆ, ಕೋಲ್ಕತ್ತಾದ ಶೇಕ್ಸ್‌ಪಿಯರ್ ಸರನಿ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರತೀಕ್ ಜೈನ್ ಅವರ ಮನೆಗೆ ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಡಿವಿಆರ್ ರೆಕಾರ್ಡಿಂಗ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಮನೆಯ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ. ಗುರುತಿಸುವಿಕೆ ಪೂರ್ಣಗೊಂಡ ನಂತರ, ಆರೋಪಿಗಳಿಗೆ ನೋಟಿಸ್ ನೀಡಲಾಗುವುದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನೀಡಿದ ದೂರುಗಳ ಆಧಾರದ ಮೇಲೆ ಪೊಲೀಸರು ಅಪರಿಚಿತ ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಗುರುವಾರ (ಜ.8) ಜೈನ್ ಅವರ ಲೌಡನ್ ಸ್ಟ್ರೀಟ್‌ನ ಮನೆ ಮತ್ತು ಅವರ ಸಾಲ್ಟ್ ಲೇಕ್ ಕಚೇರಿ ಮೇಲೆ ಇಡಿ ತಂಡ ನಡೆಸಿದ ದಾಳಿಗೆ ಸಂಬಂಧಿಸಿದಂತೆ, ಶೇಕ್ಸ್‌ಪಿಯರ್ ಸರನಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಇಡಿ ಅಧಿಕಾರಿಗಳು ಮತ್ತು ಸಿಆರ್‌ಪಿಎಫ್ ಸಿಬ್ಬಂದಿಗಳ ವಿರುದ್ಧ ಮತ್ತು ಬಿಧಾನ್‌ನಗರ ಪೊಲೀಸ್ ವ್ಯಾಪ್ತಿಯ ಎಲೆಕ್ಟ್ರಾನಿಕ್ ಕಾಂಪ್ಲೆಕ್ಸ್ ಪಿಎಸ್‌ನಲ್ಲಿರುವ ಅಪರಿಚಿತ ಇಡಿ ಅಧಿಕಾರಿಗಳ ವಿರುದ್ಧ ಮಮತಾ ಬ್ಯಾನರ್ಜಿ ದೂರು ನೀಡಿದ್ದಾರೆ.

ಶೇಕ್ಸ್‌ಪಿಯರ್ ಸರನಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ, ಕಳ್ಳತನ ಮತ್ತು ಕ್ರಿಮಿನಲ್ ಅತಿಕ್ರಮಣಕ್ಕೆ ಸಂಬಂಧಿಸಿದ ಪ್ರಕರಣಗಳು ಹಾಗೂ ಕಂಪ್ಯೂಟರ್ ಸಂಬಂಧಿತ ಅಪರಾಧಗಳನ್ನು ನಿರ್ವಹಿಸುವ ಐಟಿ ಕಾಯ್ದೆಯ ಸೆಕ್ಷನ್ 66 ರ ಅಡಿಯಲ್ಲಿ ಅನಧಿಕೃತ ಪ್ರವೇಶ ಅಥವಾ ಡೇಟಾ ಹಾನಿಯಂತಹ ಅಪ್ರಾಮಾಣಿಕ ಅಥವಾ ಮೋಸದ ಕೃತ್ಯಗಳನ್ನು ಅಪರಾಧೀಕರಿಸುವ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದಲ್ಲದೆ, ಗುರುವಾರ ಸಂಜೆ ತಡರಾತ್ರಿ ಪೊಲೀಸರು ಅದೇ ಪೊಲೀಸ್ ಠಾಣೆಯಲ್ಲಿ ಇಡಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡುತ್ತಾ, ಗುರುವಾರ ಬೆಳಿಗ್ಗೆ 6:15ರ ಸುಮಾರಿಗೆ ಪ್ರತೀಕ್ ಜೈನ್ ಅವರ ಲೌಡನ್ ಸ್ಟ್ರೀಟ್ ಅಪಾರ್ಟ್‌ಮೆಂಟ್‌ನಲ್ಲಿ ಕೇಂದ್ರೀಯ ಸಂಸ್ಥೆಯ ಸಿಬ್ಬಂದಿ ಶೋಧ ನಡೆಸಿದ್ದರು. ಆದರೆ, ಐದು ಗಂಟೆಗಳ ನಂತರವೇ ಕೋಲ್ಕತ್ತಾ ಪೊಲೀಸರಿಗೆ ಇಮೇಲ್ ಮೂಲಕ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

“ಶೋಧದ ಸುದ್ದಿ ತಿಳಿದ ಕೂಡಲೇ, ಉಪ ಪೊಲೀಸ್ ಆಯುಕ್ತರು (ದಕ್ಷಿಣ) ಸೇರಿದಂತೆ ಪೊಲೀಸ್ ಅಧಿಕಾರಿಗಳು ಇಡಿ ಅಧಿಕಾರಿಗಳೊಂದಿಗೆ ಮಾತನಾಡಲು ಪ್ರತೀಕ್ ಅವರ ಮನೆಗೆ ಹೋದರು. ಅಲ್ಲಿದ್ದ ಇಡಿ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಅವರನ್ನು ತಡೆದರು, ಒಂದು ಹಂತದಲ್ಲಿ ಅಧಿಕಾರಿಗಳ ಮೇಲೆ ಲಾಠಿ ಪ್ರಹಾರ ನಡೆಸಿದರು” ಎಂದು ಅಧಿಕಾರಿ ಆರೋಪಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಚುನಾವಣೆಗೆ ಸಂಬಂಧಿಸಿದ ದಾಖಲೆಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿಯವರ ಆರೋಪದ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಮಮತಾ ಬ್ಯಾನರ್ಜಿಯ ದೂರಿನ ಪ್ರಕಾರ, ಅಪರಿಚಿತ ಇಡಿ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಜೈನ್ ಅವರ ಅಪಾರ್ಟ್‌ಮೆಂಟ್‌ ಮತ್ತು ಸಾಲ್ಟ್ ಲೇಕ್ ಸೆಕ್ಟರ್ 4ರಲ್ಲಿರುವ ಐ-ಪ್ಯಾಕ್ ಕಚೇರಿಗೆ ಪ್ರವೇಶಿಸಿ, ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಡೇಟಾವನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ.

ಇಡಿ ಅಧಿಕಾರಿಗಳು ಗುರುತಿನ ಚೀಟಿಗಳನ್ನು ತೋರಿಸಿಲ್ಲ ಮತ್ತು ಶೋಧದ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿಲ್ಲ. ಪೊಲೀಸರು ನ್ಯಾಯಾಲಯ ಹೊರಡಿಸಿದ ಶೋಧ ವಾರಂಟ್ ಸೇರಿದಂತೆ ವಿವರಗಳನ್ನು ಕೋರಿದಾಗ, ಅವರನ್ನು ತಳ್ಳಿ ಒಳಗೆ ಬರದಂತೆ ತಡೆದಿದ್ದಾರೆ ಎಂದು ಹೇಳಲಾಗಿದೆ.

ತನಿಖೆ ಮುಂದುವರೆದಿದ್ದು, ಇಡಿ ಸಿಬ್ಬಂದಿಯ ಪಾತ್ರ ಸೇರಿದಂತೆ ಎಲ್ಲಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ನಡುವೆ, ಇಡಿ ದಾಳಿಗಳಿಗೆ ಸಂಬಂಧಿಸಿದಂತೆ ತನ್ನ ವಿಚಾರಣೆ ನಡೆಸದೆ ಯಾವುದೇ ಆದೇಶವನ್ನು ಹೊರಡಿಸಬಾರದು ಎಂದು ಕೋರಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದೆ.

ಗುರುವಾರ ಬೆಳಿಗ್ಗೆಯಿಂದ ಪಶ್ಚಿಮ ಬಂಗಾಳದ ಆರು ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದ್ದು, ಲೌಡನ್ ಸ್ಟ್ರೀಟ್‌ನಲ್ಲಿರುವ ಐ-ಪ್ಯಾಕ್‌ ಮತ್ತು ಟಿಎಂಸಿ ಐಟಿ ಸೆಲ್ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮತ್ತು ಕೋಲ್ಕತ್ತಾದ ಸೆಕ್ಟರ್ 4ರ ಗೋದ್ರೇಜ್ ವಾಟರ್‌ಸೈಡ್ ಕಟ್ಟಡದಲ್ಲಿರುವ ಕಂಪನಿಯ ಕಚೇರಿ ಸೇರಿದಂತೆ ವಿವಿದೆಡೆ ದಾಳಿ ನಡೆಸಲಾಗಿದೆ.

ಇಡಿ ಶೋಧದ ಸಮಯದಲ್ಲಿ ಜೈನ್ ಅವರ ನಿವಾಸಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ, ಇಡಿ ಅಧಿಕಾರಿಗಳು ಟಿಎಂಸಿಯ ಸೂಕ್ಷ್ಮ ಸಾಂಸ್ಥಿಕ ಡೇಟಾವನ್ನು ಒಳಗೊಂಡಿರುವ ಹಾರ್ಡ್ ಡಿಸ್ಕ್‌ಗಳು ಮತ್ತು ಆಂತರಿಕ ದಾಖಲೆಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಮತ್ತೊಂದೆಡೆ, ಜೈನ್ ಅವರ ಮನೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಪೊಲೀಸರ ಸಹಾಯದಿಂದ ಇಡಿ ವಶದಿಂದ ದೋಷಾರೋಪಣೆಗೆ ಸಂಬಂಧಿಸಿದ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ, ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಕಲ್ಕತ್ತಾ ಹೈಕೋರ್ಟ್‌ನ ಮೊರೆ ಹೋಗಿ ಸಿಬಿಐ ತನಿಖೆ ನಡೆಸುವಂತೆ ಕೋರಿದೆ. ಇದರ ವಿಚಾರಣೆಯನ್ನು ಹೈಕೋರ್ಟ್‌ ಜನವರಿ 14ಕ್ಕೆ ಮುಂದೂಡಿದೆ.

ಶನಿವಾರ ಇಡಿ ಸುಪ್ರೀಂ ಕೋರ್ಟ್‌ಗೂ ಅರ್ಜಿ ಸಲ್ಲಿಸಿದ್ದು, ಮಮತಾ ಬ್ಯಾನರ್ಜಿ ಸರ್ಕಾರ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...