Homeಮುಖಪುಟಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

- Advertisement -
- Advertisement -

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ.

ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಸ್ತುತ ಕೆನಡಾದಲ್ಲಿ ಕೆಲಸ ಮಾಡುತ್ತಿರುವ ಪತ್ತನಂತಿಟ್ಟದ ಮಹಿಳೆಯೊಬ್ಬರು ಮಾಂಕೂಟತ್ತಿಲ್ ವಿರುದ್ಧ ಮೂರನೇ ಅತ್ಯಾಚಾರ ದೂರು ದಾಖಲಿಸಿದ ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ದೂರಿನಲ್ಲಿ, ಮಹಿಳೆ ಮಾಂಕೂಟತ್ತಿಲ್ ವಿರುದ್ಧ ಕ್ರೂರ ಲೈಂಗಿಕ ದೌರ್ಜನ್ಯ, ಬಲವಂತದ ಗರ್ಭಪಾತ ಮತ್ತು ಆರ್ಥಿಕ ಶೋಷಣೆ ಸೇರಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ದೂರು ದಾಖಲಾದ ನಂತರ ಪೊಲೀಸರು ಮಾಂಕೂಟತ್ತಿಲ್‌ನನ್ನು ವಶಕ್ಕೆ ಪಡೆಯಲು ತ್ವರಿತವಾಗಿ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಮಹಿಳೆ ತಾನು ಗರ್ಭಿಣಿಯಾಗಿರುವುದಾಗಿ ಮತ್ತು ಭ್ರೂಣದ ಡಿಎನ್ಎ ಪರೀಕ್ಷೆಗೆ ತಯಾರಿ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಪ್ರಯೋಗಾಲಯವು ಮಾಂಕೂಟತ್ತಿಲ್‌ಗೆ ಮಾದರಿಯನ್ನು ನೀಡುವಂತೆ ಕೇಳಿದೆ, ಆದರೆ ಅವರು ಡಿಎನ್ಎ ಪರೀಕ್ಷಾ ಪ್ರಕ್ರಿಯೆಗೆ ಸಹಕರಿಸಿಲ್ಲ ಎಂದು ಮಹಿಳೆ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ. ಮಹಿಳೆ ತನ್ನ ಆರೋಪವನ್ನು ಬೆಂಬಲಿಸಲು ತನ್ನ ಬಳಿ ಪುರಾವೆಗಳಿವೆ ಎಂದು ಹೇಳಿಕೊಂಡು ಅದನ್ನು ತನಿಖಾ ತಂಡಕ್ಕೆ ಸಲ್ಲಿಸಿದ್ದಾರೆ ಎಂದು ಎನ್‌ಡಿವಿ ವರದಿ ಉಲ್ಲೇಖಿಸಿದೆ.

ತನ್ನ ದಾಂಪತ್ಯದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದ ಸಮಯದಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭೇಟಿಯಾದೆ. ನಂತರ ಅವರು ತನ್ನೊಂದಿಗೆ ಸಂಬಂಧ ಬೆಳೆಸಿಕೊಂಡು ಪತಿಗೆ ವಿಚ್ಚೇದನ ನೀಡುವಂತೆ ಒತ್ತಡ ಹೇರಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ರಾಹುಲ್ ಮಾಂಕೂಟತ್ತಿಲ್ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದಾರೆ, ಮಗು ಬೇಕು ಎಂದು ಒತ್ತಾಯಿಸಿದ್ದಾರೆ. ಮಗುವಾದರೆ ತನ್ನ ಕುಟುಂಬದಿಂದ ಮದುವೆಗೆ ತ್ವರಿತ ಅನುಮೋದನೆ ದೊರೆಯುತ್ತದೆ ಎಂದು ಹೇಳಿದ್ದಾರೆ ಎಂಬುವುದಾಗಿ ಮಹಿಳೆ ತಿಳಿಸಿದ್ದಾರೆ.

ರಾಹುಲ್ ಪದೇ ಪದೇ ತನ್ನನ್ನು ಭೇಟಿಯಾಗುವ ಭಯಕೆ ವ್ಯಕ್ತಪಡಿಸುತ್ತಿದ್ದರು. ನಾನು ರೆಸ್ಟೋರೆಂಟ್ ಒಂದರಲ್ಲಿ ಭೇಟಿಯಾಗೋಣ ಎಂದಾಗ ಅವರು ಅದಕ್ಕೆ ನಿರಾಕರಿಸಿದ್ದರು. ತಾನು ಸಾರ್ವಜನಿಕ ವ್ಯಕ್ತಿಯಾಗಿರುವುದರಿಂದ ಅದು ಸಾಧ್ಯವಿಲ್ಲ ಎಂದಿದ್ದರು. ರೆಸ್ಟೋರೆಂಟ್ ಬದಲಾಗಿ ಪಾಲಕ್ಕಾಡ್‌ನಲ್ಲಿರುವ ಹೋಟೆಲ್‌ನಲ್ಲಿ ಭೇಟಿಯಾಗುವಂತೆ ಅವರು ಸೂಚಿಸಿದ್ದರು. ಅದಕ್ಕಾಗಿ ಅವರು ಕೊಠಡಿ ಕಾಯ್ದಿರಿಸಿದ್ದರು. ತಾನು ಹೋಟೆಲ್‌ಗೆ ಹೋದಾಗ, ನಾನು ಮಾತನಾಡುವ ಮೊದಲೇ ಅವರು ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಸಾಕ್ಷ್ಯಾಧಾರಗಳು ಮತ್ತು ಹೇಳಿಕೆಗಳ ಆಧಾರದ ಮೇಲೆ ತನಿಖೆ ಮುಂದುವರೆದಿದ್ದು, ಮುಂದಿನ ಕಾನೂನು ಕ್ರಮಗಳು ಅನುಸರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಹುಲ್ ಮಾಂಕೂಟತ್ತಿಲ್ ವಿರುದ್ದ ಈಗ ದಾಖಲಾಗಿರುವುದು ಮೂರನೇ ಅತ್ಯಾಚಾರ ಪ್ರಕರಣವಾಗಿದೆ.

ಮೊದಲ ಪ್ರಕರಣದಲ್ಲಿ ತನ್ನ ಮದುವೆಯಾಗುವುದಾಗಿ ಭರವಸೆ ನೀಡಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ ಗರ್ಭಪಾತ ಮಾಡಿಸುವಂತೆ ಒತ್ತಾಯಿಸಿದ್ದಾರೆ ಎಂದು ರಾಹುಲ್ ವಿರುದ್ಧ ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್‌ಗೆ ಕೇರಳ ಹೈಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿತ್ತು.

ಮತ್ತೊಂದು ಪ್ರಕರಣದಲ್ಲಿ ಮದುವೆಯಾಗುವ ಭರವಸೆ ನೀಡಿ, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬೆಂಗಳೂರಿನ ಮಹಿಳೆಯೊಬ್ಬರು ಆರೋಪಿಸಿದ್ದರು. ಇದರಲ್ಲೂ ತಿರುವನಂತಪುರದ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿತ್ತು.

ಮೂರನೇ ಪ್ರಕರಣವನ್ನು ಪ್ರಸ್ತುತ ಕೆನಡಾದಲ್ಲಿ ಕೆಲಸ ಮಾಡುತ್ತಿರುವ ಪತ್ತನಂತಿಟ್ಟ ಮೂಲದ ಮಹಿಳೆ ನೀಡಿದ ದೂರು ಆಧರಿಸಿ ದಾಖಲಿಸಲಾಗಿದೆ. ಈ ಪ್ರಕರಣ ದಾಖಲಾದ ಕೂಡಲೇ ರಾಹುಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....