Homeದಲಿತ್ ಫೈಲ್ಸ್ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ.

ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ ಈತ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಮೀರತ್ ಮತ್ತು ಸಹರಾನ್ಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಹರಿದ್ವಾರ ಸಮೀಪ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಶದಲ್ಲಿದ್ದ ಯುವತಿಯನ್ನು ರಕ್ಷಿಸಿದ್ದಾರೆ. ಇಬ್ಬರನ್ನೂ ಮೀರತ್‌ಗೆ ಕರೆತರಲಾಗಿದೆ ಎಂದು ವರದಿಯಾಗಿದೆ.

ಯುವತಿಯ ಹೇಳಿಕೆ ಪಡೆಯುವುದು ಸೇರಿದಂತೆ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ಮತ್ತು ಆರೋಪಿ ಯುವಕನ ನಡುವೆ ಕಳೆದ ಮೂರು ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಈ ನಡುವೆ ಯುವತಿಯ ಕುಟುಂಬಸ್ಥರು ಆಕೆಗೆ ಬೇರೆ ಯುವಕನ ಜೊತೆ ಮದುವೆ ಮಾಡಲು ಮುಂದಾಗಿದ್ದರು. ಈ ವಿಷಯ ತಿಳಿದು ಆಕೆಯನ್ನು ಕರೆದೊಯ್ಯಲು ಯುವಕ ಮುಂದಾಗಿದ್ದ. ಇದಕ್ಕೆ ಅಡ್ಡಿಯಾದ ಆಕೆಯ ತಾಯಿಯನ್ನು ಕೊಲೆ ಮಾಡಿದ್ದಾನೆ ಎಂದು ಕೆಲ ವರದಿಗಳು ಹೇಳಿವೆ. ಅಪರಾಧದ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಘಟನೆಯ ಹಿನ್ನೆಲೆ : ಮೀರತ್‌ನ ಸರ್ಧಾನ ಪೊಲೀಸ್ ಠಾಣೆ ವ್ಯಾಪ್ತಿಯ ಕಪ್ಸದ್ ಗ್ರಾಮದಲ್ಲಿ ಜನವರಿ 8ರಂದು ಬೆಳಿಗ್ಗೆ ಘಟನೆ ನಡೆದಿದೆ. ಯುವತಿ ಮತ್ತು ಆಕೆಯ ತಾಯಿ ಹೊಲಕ್ಕೆ ಕೆಲಸಕ್ಕೆ ಹೋಗುತ್ತಿದ್ದಾಗ, ಮಾರ್ಗ ಮಧ್ಯೆ ಅವರನ್ನು ತಡೆದ ಆರೋಪಿ ಪರಾಸ್ ಸೋಮ್, ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ತಾಯಿ ಮಗಳನ್ನು ರಕ್ಷಿಸಲು ಮುಂದಾದಾಗ ಆರೋಪಿ ಪರಾಸ್ ಆಕೆಯ ತಲೆಗೆ ಹರಿತವಾಗಿ ಆಯುಧದಿಂದ ಹೊಡೆದಿದ್ದ. ಪರಿಣಾಮ ಆಕೆಗೆ ಗಂಭೀರ ಗಾಯವಾಗಿತ್ತು. ಸ್ಥಳೀಯರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ, ತೀವ್ರ ರಕ್ತಸ್ರಾವದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ತಾಯಿಯ ತಲೆಗೆ ಹೊಡೆದ ಬಳಿಕ, ಆರೋಪಿ ಪರಾಸ್ ಆತನ ಸಹಚರರ ಜೊತೆಗೂಡಿ ಯುವತಿಯನ್ನು ಅಪಹರಿಸಿದ್ದ. ಆರೋಪಿಯ ಸಹಚರರ ಪೈಕಿ ಓರ್ವನ ಹೆಸರು ಸುನಿಲ್ ಕುಮಾರ್ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ರಾಜಕೀಯ ನಾಯಕರಿಂದ ಖಂಡನೆ

ದಲಿತ ಮಹಿಳೆಯ ಕೊಲೆ ಮತ್ತು ಆಕೆಯ ಮಗಳ ಅಪಹರಣ ಪ್ರಕರಣ ಉತ್ತರ ಪ್ರದೇಶದ ಮಾತ್ರವಲ್ಲದೆ, ದೇಶದಾದ್ಯಂತ ಸುದ್ದಿಯಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಭೀಮ್ ಆರ್ಮಿ ಸೇರಿದಂತೆ ದಲಿತ ಸಂಘಟನೆಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿವೆ.

ಮಾಯಾವತಿ, ಅಖಿಲೇಶ್ ಯಾದವ್, ಚಂದ್ರಶೇಖರ್ ಆಝಾದ್ ಸೇರಿದಂತೆ ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದ ಚಂದ್ರಶೇಖರ್ ಆಝಾದ್ ಅವರನ್ನು ಶನಿವಾರ ಪೊಲೀಸರು ತಡೆದಿದ್ದಾರೆ.

ಪೊಲೀಸರು ಕೊಲೆ, ಅಪಹರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಗ್ರಾಮದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. ರಾಜಕೀಯ ಭೇಟಿಗಳನ್ನು ತಡೆಯಲು ರಸ್ತೆಗಳನ್ನು ಮುಚ್ಚಲಾಗಿದೆ. ಸಂತ್ರಸ್ತೆಯ ಕುಟುಂಬವು ಆರಂಭದಲ್ಲಿ ಅಂತ್ಯಕ್ರಿಯೆ ನಡೆಸಲು ನಿರಾಕರಿಸಿತ್ತು. ಆರೋಪಿಗಳ ಬಂಧನ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿತ್ತು.

ಕೊಲೆಯಾದ ಮಹಿಳೆಯ ಕುಟುಂಬಕ್ಕೆ ಆರಂಭದಲ್ಲಿ 10 ಲಕ್ಷ ರೂಪಾಯಿ ಪರಿಹಾರ ಮತ್ತು ಭದ್ರತೆಯನ್ನು ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...