Homeಅಂತರಾಷ್ಟ್ರೀಯದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

- Advertisement -
- Advertisement -

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ.

ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ “ಅಮೆರಿಕ ಇರಾನ್ ಮೇಲೆ ಸೇನಾ ದಾಳಿ ನಡೆಸಿದರೆ, ಅಮೆರಿಕದ ಸೈನ್ಯ ಮತ್ತು ಇಸ್ರೇಲ್ ಎರಡೂ ನಮ್ಮ ಕಾನೂನುಬದ್ಧ ಗುರಿಗಳಾಗುತ್ತವೆ” ಎಂದು ಎಚ್ಚರಿಸಿದ್ದಾರೆ.

ಸಂಸತ್ ಅಧ್ಯಕ್ಷರು ಈ ರೀತಿ ಹೇಳುತ್ತಿದ್ದಂತೆ, ಸಂಸದರು ಅಧ್ಯಕ್ಷರ ಪೀಠ ಏರಿ “ಅಮೆರಿಕಕ್ಕೆ ಮರಣ!” (Death to America!) ಎಂದು ಜೋರಾಗಿ ಕೂಗಿದ್ದಾರೆ.

“ಇರಾನ್‌ನ ಶಾಂತಿಯುತ ಪ್ರತಿಭಟನಾಕಾರರ ಹತ್ಯೆ ಮುಂದುವರಿದರೆ, ಅವರನ್ನು ರಕ್ಷಿಸಲು ಅಮೆರಿಕ ಮಧ್ಯ ಪ್ರವೇಶಿಸಲಿದೆ. ಹಿಂದೆಂದಿಗಿಂತಲೂ ಹೆಚ್ಚಾಗಿ ಇರಾನ್ ಸ್ವಾತಂತ್ರ್ಯ ಬಯಸುತ್ತಿದೆ. ಅದಕ್ಕೆ ಸಹಾಯ ಮಾಡಲು ಯುಎಸ್‌ ಸಿದ್ದವಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

ಪ್ರತಿಭಟನಾಕಾರರು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ ಮತ್ತು ಇಸ್ರೇಲ್‌) ಬೆಂಬಲಿಗರು ಎಂದು ಇರಾನ್ ಆರೋಪಿಸಿದೆ. ದೇಶದಲ್ಲಿ ಆಡಳಿತ ವಿರೋಧಿ ದಂಗೆ ಏಳಿಸಿದ್ದೇ ಅಮೆರಿಕ ಮತ್ತು ಇಸ್ರೇಲ್ ಎಂದು ಹೇಳಿದೆ. ಇದನ್ನು ಪುಷ್ಠೀಕರಿಸುವಂತೆ ಇರಾನ್‌ನ ಮಾಜಿ ದೊರೆಯ ಮಗ ರೆಝಾ ಪಹ್ಲವಿ ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಟ್ರಂಪ್‌ಗೆ ಮನವಿ ಮಾಡಿದ್ದಾರೆ.

ಪ್ರತಿಭಟನಾಕಾರರು ಇರಾನ್‌ ಇಸ್ಲಾಮಿಕ್ ಗಣರಾಜ್ಯದ ಸರ್ವೋಚ್ಚ ನಾಯಕ ಅಯಾತೊಲ್ಲ ಖಮೇನಿಯನ್ನು ಪಟ್ಟದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ ಮತ್ತು ಪಹ್ಲವಿ ರಾಜಾಡಳಿತವನ್ನು ಬಯಸುತ್ತಿದ್ದಾರೆ. ಇವೆಲ್ಲವೂ ಅಮೆರಿಕ ಮತ್ತು ಇಸ್ರೇಲ್‌ನ ಕುತಂತ್ರ. ಪಹ್ಲವಿ ಟ್ರಂಪ್‌ನ ಸಾಕು ನಾಯಿ ಎಂದು ಇರಾನ್ ಹೇಳಿದೆ.

ಪ್ರತಿಭಟನಾಕಾರರನ್ನು ‘ದೇವರ ವಿರೋಧಿಗಳು’ ಎಂದು ಇರಾನ್‌ ಸರ್ಕಾರ ಘೋಷಣೆ ಮಾಡಿದ್ದು, ಅವರಿಗೆ ಮರಣದಂಡನೆ ವಿಧಿಸಲು ಸಿದ್ದತೆ ನಡೆಸಿದೆ. ಈಗಾಗಲೇ 116ರಕ್ಕೂ ಹೆಚ್ಚು ಪ್ರತಿಭಟನಾಕಾರರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ.

ಇರಾನ್ ಸರ್ಕಾರದ ಅಧೀನದ ದೂರದರ್ಶನ ಸಂಸತ್ತಿನ ಅಧಿವೇಶನವನ್ನು ನೇರ ಪ್ರಸಾರ ಮಾಡಿದೆ. ಅದರಲ್ಲಿ ಕಂಡಂತೆ ಈ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಂಸತ್ತಿನ ಹಾಲಿ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್, ಪ್ರತಿಭಟನೆಯ ಸಮಯದಲ್ಲಿ ಸರ್ಕಾರದ ಪರ ನಿಂತ ಪೊಲೀಸರು, ಇಸ್ಲಾಮಿಕ್ ಪ್ಯಾರಾಮಿಲಿಟರಿ ಪಡೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ (ಐಆರ್‌ಜಿಸಿ), ಅದರ ಸ್ವಯಂಸೇವಕ ತಂಡ ಬಸಿಜ್‌ಗೆ ಧನ್ಯವಾದ ಹೇಳಿದ್ದಾರೆ.

“ಪ್ರತಿಭಟನಾ ನಿರತ ಇರಾನಿನ ಜನರೇ, ನಾವು ನಿಮ್ಮನ್ನು ಬಂಧಿಸುತ್ತೇವೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಖಲೀಬಾಫ್ ಎಚ್ಚರಿಕೆ ನೀಡಿದ್ದಾರೆ. ಆಕ್ರಮಿತ ಪ್ರದೇಶ ಎಂದ ಇಸ್ರೇಲ್‌ ಅನ್ನು ಉಲ್ಲೇಖಿಸಿರುವ ಖಲೀಬಾಫ್, ಇಸ್ರೇಲ್ ಮತ್ತು ಅಮೆರಿಕ ಮಿಲಿಟರಿ ಮೇಲೆ ನೇರ ದಾಳಿ ನಡೆಸುವ ಬೆದರಿಕೆ ಹಾಕಿದ್ದಾರೆ.

“ಇರಾನ್ ಮೇಲೆ ದಾಳಿಗೆ ಮುಂದಾದರೆ, ಆಕ್ರಮಿತ ಪ್ರದೇಶ ಮತ್ತು ಅದರೊಳಗಿರುವ ಅಮೆರಿಕದ ಎಲ್ಲಾ ಸೇನಾ ನೆಲೆಗಳು ಮತ್ತು ಹಡಗುಗಳು ನಮ್ಮ ಕಾನೂನುಬದ್ದ ಗುರಿಯಾಗಲಿದೆ. ನಾವು ದಾಳಿ ನಡೆದ ಮೇಲೆ ಪ್ರತಿದಾಳಿ ನಡೆಸುವುದಿಲ್ಲ. ದಾಳಿಯ ಸಣ್ಣ ಸೂಚನೆ ಸಿಕ್ಕರೂ ಕಠಿಣವಾಗಿ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.

2025ರ ಜೂನ್‌ನಲ್ಲಿ ಇಸ್ರೇಲ್ ಜೊತೆಗಿನ 12 ದಿನಗಳ ಸಂಘರ್ಷದಲ್ಲಿ ತನ್ನ ವಾಯು ರಕ್ಷಣಾ ಪಡೆಗಳು ನಾಶವಾದ ನಂತರ, ದಾಳಿ ನಡೆಸುವುದರ ಬಗ್ಗೆ ಇರಾನ್ ಎಷ್ಟು ಗಂಭೀರವಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯುದ್ಧಕ್ಕೆ ಹೋಗುವ ಯಾವುದೇ ನಿರ್ಧಾರವು ಇರಾನ್‌ನ 86 ವರ್ಷದ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮೇಲೆ ಅವಲಂಬಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...