Homeಕರ್ನಾಟಕಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ ತಗುಲಿದ ಪರಿಣಾಮ ಹೊಗೆಯಿಂದ ಉಸಿರುಗಟ್ಟಿ ಶರ್ಮಿಳಾ ಅವರು ಸಾವಿಗೀಡಾಗಿದ್ದರು ಎಂದು ನಂಬಲಾಗಿತ್ತು. ಆದರೆ, ಪೊಲೀಸರ ತನಿಖೆಯಿಂದ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ಗೊತ್ತಾಗಿದೆ. ಶರ್ಮಿಳಾ ಅವರನ್ನು ಕತ್ತು ಹಿಸುಕಿ ಕೊಂದು, ನಂತರ ಸಾಕ್ಷ್ಯಗಳನ್ನು ನಾಶಮಾಡಲು ಆಕೆಯ ಫ್ಲ್ಯಾಟ್‌ಗೆ ಬೆಂಕಿ ಹಚ್ಚಿದ ಆರೋಪದ ಮೇಲೆ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ ಪಿಯುಸಿ ವಿದ್ಯಾರ್ಥಿ ಕರ್ನಲ್ ಕುರೈ ಕೆ ಎಂದು ಗುರುತಿಸಲಾಗಿದೆ. ಈತ ಶರ್ಮಿಳಾ ಅವರ ಪಕ್ಕದ ಫ್ಲಾಟ್‌ನಲ್ಲಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ.

ಶರ್ಮಿಳಾ ಅವರ ಸ್ನೇಹಿತರ ಹೇಳಿಕೆಗಳು ಮತ್ತು ವಿಧಿವಿಜ್ಞಾನ ಪರೀಕ್ಷೆಯ ಆಧಾರದ ಮೇಲೆ, ಪೊಲೀಸರು ಕರ್ನಲ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಪ್ರಕಾರ, ಜನವರಿ 3ರಂದು ರಾತ್ರಿ 9 ಗಂಟೆಯ ಸುಮಾರಿಗೆ ಆರೋಪಿ ಕರ್ನಲ್ ಶರ್ಮಿಳಾ ಅವರ ಫ್ಲ್ಯಾಟ್‌ಗೆ ಸ್ಲೈಡಿಂಗ್ ಕಿಟಕಿ ಮೂಲಕ ಪ್ರವೇಶಿಸಿದ್ದ. ಶರ್ಮಿಳಾ ಮುಖಾಮುಖಿಯಾದಾಗ ಆಕೆಯೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿದ್ದ. ಆಕೆ ವಿರೋಧಿಸಿದಾಗ ಬಾಯಿ ಮತ್ತು ಮೂಗನ್ನು ಒತ್ತಿ ಹಿಡಿದಿದ್ದಾನೆ. ಇದರಿಂದ ಶರ್ಮಿಳಾ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಶರ್ಮಿಳಾ ಅವರ ಮನೆಗೆ ಹೋಗಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಯೇ ಎಂಬುವುದು ಇನ್ನೂ ದೃಢವಾಗಿಲ್ಲ. ಕೆಲ ಮಾಧ್ಯಮಗಳು ಅತ್ಯಾಚಾರ ನಡೆದಿದೆ ಎಂದು ವರದಿ ಮಾಡಿವೆ.

ಶರ್ಮಿಳಾ ಅವರ ಮೃತದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿವೆ. ಆರೋಪಿ ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡಲು ಬಟ್ಟೆಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ಒಳಗಡೆ ಪ್ರವೇಶಿಸಿದ ಅದೇ ಕಿಟಕಿಯ ಮೂಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ವಿಧಿವಿಜ್ಞಾನ ಮತ್ತು ಮರಣೋತ್ತರ ಪರೀಕ್ಷೆಯ ವರದಿಗಳು ಶರ್ಮಿಳಾ ಬೆಂಕಿ ಅವಘಡಕ್ಕೆ ಬಲಿಯಾಗಿದ್ದಾರೆ ಎಂಬ ಆರಂಭಿಕ ನಂಬಿಕೆಗೆ ವಿರುದ್ಧವಾಗಿ ಬಂದಿವೆ. ಆ ಬಳಿಕ ಪ್ರಕರಣ ತಿರುವು ಪಡೆದುಕೊಂಡಿದೆ. ಶರ್ಮಿಳಾ ಅವರ ಕೈಗಳ ಮೇಲಿದ್ದ ಗಾಯಗಳು, ಕೊನೆ ಕ್ಷಣದಲ್ಲಿ ಜೀವ ಉಳಿಸಿಕೊಳ್ಳಲು ಆಕೆ ಹೋರಾಟ ನಡೆಸಿದ್ದನ್ನು ಎತ್ತಿ ತೋರಿಸಿವೆ. ಮರಣೋತ್ತರ ಪರೀಕ್ಷೆಯ ವರದಿ ಬೆಂಕಿ ಆವರಿಸಿಕೊಳ್ಳುವ ಮುನ್ನವೇ ದೇಹದ ಮೇಲೆ ಗಾಯಗಳಾಗಿವೆ ಎಂಬುವುದಾಗಿ ಹೇಳಿವೆ ಎಂದು ತಿಳಿಸಿದ್ದಾರೆ.

ಕೊಲೆ ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಕರ್ನಲ್‌ನನ್ನು ಬಂಧಿಸಲಾಗಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪ್ರಕರಣದ ಹಿನ್ನೆಲೆ : ಜನವರಿ 3ರಂದು ರಾತ್ರಿ 10.30ರ ಸುಮಾರಿಗೆ ಶರ್ಮಿಳಾ ಅವರ ಫ್ಲ್ಯಾಟ್‌ನಿಂದ ಹೊಗೆ ಬರುತ್ತಿರುವುದನ್ನು ನೋಡಿದ ಅಪಾರ್ಟ್‌ಮೆಂಟ್ ಮಾಲೀಕ, ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಫ್ಲ್ಯಾಟ್‌ ಬಾಗಿಲು ಒಡೆದು ಒಳನುಗ್ಗಿ ಬೆಂಕಿ ನಂದಿಸಿದ್ದರು. ಈ ವೇಳೆ ಅವರಿಗೆ ಶರ್ಮಿಳಾ ಅವರು ಅಡುಗೆ ಕೋಣೆ ಬಳಿ ಪ್ರಜ್ಞಾಹೀನರಾಗಿ ಬಿದ್ದಿರುವುದು ಕಂಡು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಫ್ಲ್ಯಾಟ್‌ನಲ್ಲಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿದ ಕಾರಣ ಉಸಿರುಗಟ್ಟಿ ಶರ್ಮಿಳಾ ಸಾವಿಗೀಡಾಗಿರಬಹುದು ಎಂದು ಅಂದಾಜಿಸಿದ್ದರು. ಘಟನೆ ಸಂಬಂದ ಶರ್ಮಿಳಾ ಅವರ ಸ್ನೇಹಿತ ಕೆ. ರೋಹಿತ್ ಎಂಬವರು ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...