Homeಕರ್ನಾಟಕವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ನರೇಗಾ ಉಳಿಸಿ ಆಂದೋಲನದ ಪೂರ್ವ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು.

ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಸಿಎಂ ಹೇಳಿದರು.

ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ನರೇಗಾ ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ ನರೇಗಾ ರದ್ದು ಮಾಡಿ ವಿಬಿ-ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು.

ನರೇಗಾದಿಂದ 12.16 ಕೋಟಿ ಕಾರ್ಮಿಕರಿಗೆ ಕೆಲಸ

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನರೇಗಾ ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿಸಿದರು. ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು. ಕಳೆದ 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದು ತಿಳಿಸಿದರು.

ವಿಬಿ-ಜಿ ರಾಮ್ ಜಿ ಮೂಲಕ ಮತ್ತೊಮ್ಮೆ ಮಹಾತ್ಮ ಗಾಂಧೀಯ ಕೊಲೆ

ನರೇಗಾದಿಂದ ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿ-ಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮಾ ಗಾಂಧಿ ಕೊಂದ ನಾಥೂರಾಮ ಇದು. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ. ನರೇಗಾ ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು ಎಂದರು.

ನರೇಗಾ ಉಳಿಸಿ ಜನಾಂದೋಲನವಾಗಬೇಕು

ಈಗ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ, ಅಲ್ಲಿ ಕೆಲಸ ಮಾಡಬೇಕು. ರಾಜ್ಯಗಳು ಶೇಕಡ 40ರಷ್ಟು ವೆಚ್ಚವನ್ನು ಭರಿಸಬೇಕಿದೆ. 2,500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ನರೇಗಾ ಉಳಿಸಿ ಆಂದೋಲನವನ್ನು ರೂಪಿಸಲಾಗಿದೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...