Homeಮುಖಪುಟಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

- Advertisement -
- Advertisement -

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ.

ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ನಿಯೋಗ, ಮಂಗಳವಾರ (ಜ.13) ಆರ್‌ಎಸ್‌ಎಸ್‌ ಕಚೇರಿಯಲ್ಲಿ, ಅದರ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಎಂದು ತಿಳಿದು ಬಂದಿದೆ.

ಬಿಜೆಪಿಯ ದೆಹಲಿ ಕಚೇರಿಗೆ ಸಿಪಿಸಿ ನಿಯೋಗ ಭೇಟಿ ನೀಡಿರುವ ಮಾಹಿತಿಯನ್ನು, ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಘಟಕದ ಮುಖ್ಯಸ್ಥ ವಿಜಯ್ ಚೌತೈವಾಲೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, “ಅಂತಾರಾಷ್ಟ್ರೀಯ ಸಂಪರ್ಕ ವಿಭಾಗದ ಉಪಾಧ್ಯಕ್ಷರಾಗಿರುವ ಸನ್ ಹೈಯಾನ್ ನೇತೃತ್ವದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವು ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದೆ” ಎಂದು ಹೇಳಿದ್ದಾರೆ.

“ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ‘ಬಿಜೆಪಿ ಮತ್ತು ಸಿಪಿಸಿ’ ನಡುವಿನ ಅಂತರ-ಪಕ್ಷ ಸಂವಹನವನ್ನು ಹೇಗೆ ಮುಂದುವರಿಸುವುದು ಎಂಬುದರ ಕುರಿತು ದೀರ್ಘವಾಗಿ ಚರ್ಚಿಸಿದೆ” ಎಂದು ಚೌತೈವಾಲೆ ತಿಳಿಸಿದ್ದಾರೆ.

ಮಂಗಳವಾರ ಕೇಶವ್ ಕುಂಜ್‌ನಲ್ಲಿರುವ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯಲ್ಲಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿಯಾದ ನಿಯೋಗ ಸುಮಾರು30-40 ನಿಮಿಷ ಮಾತುಕತೆ ನಡೆಸಿದೆ. ಇದು ಸೌಜನ್ಯಯುತ ಭೇಟಿ, ಆರ್‌ಎಸ್‌ಎಸ್‌ನ ಕಾರ್ಯನಿರ್ವಹಣೆಯ ಬಗ್ಗೆ ನಿಯೋಗ ಮಾಹಿತಿ ಪಡೆದುಕೊಂಡಿದೆ ಎಂದು ವರದಿಗಳು ಹೇಳಿವೆ.

ಬಿಜೆಪಿ ಮತ್ತು ಚೀನಾ ಕಮ್ಯುನಿಸ್ಟ್ ಪಕ್ಷಗಳು 2000ರ ದಶಕದ ಅಂತ್ಯದಿಂದಲೂ ಒಳ್ಳೆಯ ಸಂಪರ್ಕದಲ್ಲಿವೆ. ಬಿಜೆಪಿಯ ಹಲವಾರು ನಿಯೋಗಗಳು ಚೀನಾದ ನಾಯಕರನ್ನು ಭೇಟಿ ಮಾಡಲು ಬೀಜಿಂಗ್‌ಗೆ ಭೇಟಿ ನೀಡಿವೆ. 2009ರಲ್ಲಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು ಎಂದು ವರದಿಗಳು ಉಲ್ಲೇಖಿಸಿವೆ.

ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವು ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರನ್ನು ಕೂಡ ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಪಕ್ಷದ ನಾಯಕರೊಬ್ಬರನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.

ಈ ನಡುವೆ, ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ ಮಂಗಳವಾರ ಚೀನಾದ ನಿಯೋಗದೊಂದಿಗಿನ ಬಿಜೆಪಿ ಸಭೆಯನ್ನು ಟೀಕಿಸಿದ್ದಾರೆ.

“ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ಪಾಕಿಸ್ತಾನವನ್ನು ಬೆಂಬಲಿಸಿತ್ತು” ಎಂದು ಶ್ರೀನಾತೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. “ನಮ್ಮ ಧೈರ್ಯಶಾಲಿ ಸೈನಿಕರು ಗಾಲ್ವಾನ್‌ನಲ್ಲಿ ಹುತಾತ್ಮರಾದರು. ಲಡಾಖ್‌ನಲ್ಲಿ ಅತಿಕ್ರಮಣ ಮಾಡಿದ ನಂತರ ಚೀನಾ ಅಲ್ಲಿಯೇ ಕುಳಿತಿದೆ. ಅದು ಅರುಣಾಚಲ ಪ್ರದೇಶದ ಹಳ್ಳಿಗಳನ್ನು ಕಬಳಿಸುತ್ತಿದೆ. ಇಲ್ಲಿ, ಅಪ್ಪುಗೆಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ತಮ್ಮ ಪಕ್ಷವು ತನ್ನ ಚೀನಾ ನೀತಿಯ ಬಗ್ಗೆ ಸರ್ಕಾರದಿಂದ ಸಂಪೂರ್ಣ ಹೊಣೆಗಾರಿಕೆ ಮತ್ತು ಸಂಪೂರ್ಣ ಪಾರದರ್ಶಕತೆಯನ್ನು ಬಯಸುತ್ತದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ತುಹಿನ್ ಸಿನ್ಹಾ, “ಇದು ಔಪಚಾರಿಕ ಸಭೆಯ ಪ್ರಕ್ರಿಯೆಯಾಗಿತ್ತು. ಪರಿಸ್ಥಿತಿ ಸುಧಾರಿಸಿದಾಗ ಔಪಚಾರಿಕ ಸಭೆ ನಡೆಯುತ್ತದೆ. ನಾವು ಅದನ್ನು ಬಹಳ ಬಹಿರಂಗವಾಗಿ ಮಾಡುತ್ತೇವೆ” ಎಂದಿದ್ದಾರೆ.

“ನಾವು ವರ್ಷಗಳ ಕಾಲ ವಿವರಿಸಲು ಸಾಧ್ಯವಾಗದ ಯಾವುದೇ ತಿಳುವಳಿಕೆ ಒಪ್ಪಂದಕ್ಕೆ ರಹಸ್ಯವಾಗಿ ಸಹಿ ಹಾಕುವುದಿಲ್ಲ” ಎಂದು ಹೇಳಿದ್ದಾರೆ. ಕಾಂಗ್ರೆಸ್ ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂಬುವುದು ಬಿಜೆಪಿಯ ಆರೋಪವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...