Homeಮುಖಪುಟಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಸಂಭಾಲ್‌ನ ಸರ್ಕಲ್ ಆಫೀಸರ್ ಆಗಿದ್ದ ಮತ್ತು ಪ್ರಸ್ತುತ ಫಿರೋಝಾಬಾದ್‌ನಲ್ಲಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಗ್ರಾಮೀಣ) ಆಗಿ ನೇಮಕಗೊಂಡಿರುವ ಅನುಜ್ ಚೌಧರಿ ಮತ್ತು ಸಂಭಾಲ್ ಕೊತ್ವಾಲಿ ಚಂದೌಸಿಯ ಆಗಿನ ಸ್ಟೇಷನ್ ಹೌಸ್ ಆಫೀಸರ್ ಅನುಜ್ ತೋಮರ್ ಆರೋಪಿತರಲ್ಲಿ ಸೇರಿದ್ದಾರೆ. ಹಲವಾರು ಗುರುತಿಸಲಾಗದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಲು ನ್ಯಾಯಾಲಯ ನಿರ್ದೇಶಿಸಿದೆ.

ಹಿಂದುತ್ವ ಗುಂಪುಗಳ ವಲಯದಲ್ಲಿ ಪ್ರಸಿದ್ಧ ಪೊಲೀಸ್ ಅಧಿಕಾರಿಯಾಗಿದ್ದ ಅನುಜ್ ಚೌಧರಿ, ಹಿಂಸಾಚಾರದ ನಂತರ ಹೋಳಿ ಆಚರಣೆಗೆ ಸಂಬಂಧಿಸಿದಂತೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು.

ಖಗ್ಗು ಸರೈ ಅಂಜುಮಾನ್ ಪ್ರದೇಶದ ನಿವಾಸಿ ಯಾಮೀನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿಭಾಂಶು ಸುಧೀರ್ ಈ ಆದೇಶ ಹೊರಡಿಸಿದ್ದಾರೆ.

2024ರ ನವೆಂಬರ್ 24 ರಂದು ಶಾಹಿ ಜಾಮಾ ಮಸೀದಿ ಪ್ರದೇಶದಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ ನನ್ನ ಮಗ ಆಲಂ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು ಎಂದು ಯಾಮೀನ್ ಆರೋಪಿಸಿದ್ದರು. ಅರ್ಜಿಯ ಪ್ರಕಾರ, ಆಲಂ ರಸ್ಕ್ ಮತ್ತು ಬಿಸ್ಕತ್ತುಗಳನ್ನು ಮಾರಾಟ ಮಾಡಲು ತೆರಳಿದ್ದಾಗ ಗಲಭೆಯ ನಡುವೆ ಸಿಲುಕಿದ್ದರು. ಪೊಲೀಸರು ಅವರ ಮೇಲೆ ಗುಂಡು ಹಾರಿಸಿದ್ದರು.

ಪ್ರತ್ಯಕ್ಷದರ್ಶಿಗಳು ಮತ್ತು ಕುಟುಂಬಸ್ಥರ ಪ್ರಕಾರ, ಹಿಂಸಾಚಾರದಲ್ಲಿ ಕನಿಷ್ಠ ಐವರು ಮುಸ್ಲಿಮರು ಸಾವನ್ನಪ್ಪಿದ್ದು, ಅವರಲ್ಲಿ ಹೆಚ್ಚಿನವರು ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.

ಭಯದಿಂದ ನನ್ನ ಮಗ ತಲೆಮರೆಸಿಕೊಂಡು ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾನೆ. ನಂತರ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾನೆ ಎಂದು ಯಾಮೀನ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಜನವರಿ 9ರಂದು ನಡೆದ ವಿಚಾರಣೆಯ ನಂತರ, ನ್ಯಾಯಾಲಯವು ಎಲ್ಲಾ ಹೆಸರಿಸಲಾದ ಮತ್ತು ಹೆಸರಿಸದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ನಿರ್ದೇಶಿಸಿದೆ.

ಮಂಗಳವಾರ ಸಂಜೆ ನ್ಯಾಯಾಲಯದ ನಿರ್ಧಾರದ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿದೆ. ತಡವಾಗಿ ಆದೇಶ ಹೊರಡಿಸಿದ್ದರಿಂದ ಅದರ ಲಿಖಿತ ಪ್ರತಿ ಇನ್ನೂ ಬಂದಿಲ್ಲ ಎಂದು ಯಾಮೀನ್ ಅವರ ವಕೀಲ ಚೌಧರಿ ಅಖ್ತರ್ ಹುಸೇನ್ ತಿಳಿಸಿರುವುದಾಗಿ ಮಕ್ತೂಬ್‌ ಮೀಡಿಯಾ ವರದಿ ಮಾಡಿದೆ.

ಶಾಹಿ ಜಾಮಾ ಮಸೀದಿ ಮೂಲತಃ ದೇವಸ್ಥಾನವಾಗಿತ್ತು ಎಂಬ ಸಿವಿಲ್ ಮೊಕದ್ದಮೆಯ ನಂತರ, ನ್ಯಾಯಾಲಯದ ಆದೇಶದ ಮೇರೆಗೆ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯ ಸಮಯದಲ್ಲಿ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. 2024ರ ನವೆಂಬರ್ 19 ಮತ್ತು ನವೆಂಬರ್ 24 ರಂದು ಎರಡು ಹಂತಗಳಲ್ಲಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆಯನ್ನು ನಡೆಸಲಾಗಿತ್ತು. ಈ ಸಮಯದಲ್ಲಿ ದೊಡ್ಡ ಜನಸಮೂಹ ಜಮಾಯಿಸಿತ್ತು. ಹಿಂಸಾತ್ಮಕ ಪ್ರತಿಭಟನೆ ನಡೆದಿತ್ತು.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಭಾಲ್ ಕೊತ್ವಾಲಿ ಮತ್ತು ನಖಾಸಾ ಪೊಲೀಸ್ ಠಾಣೆಗಳಲ್ಲಿ ಪೊಲೀಸರು 12 ಪ್ರಕರಣಗಳನ್ನು ದಾಖಲಿಸಿದ್ದು, ಸಮಾಜವಾದಿ ಪಕ್ಷದ ಶಾಸಕ ಝಿಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅದೇ ಪಕ್ಷದ ಶಾಸಕ ಇಕ್ಬಾಲ್ ಮಹಮೂದ್ ಅವರ ಪುತ್ರ ಸುಹೈಲ್ ಇಕ್ಬಾಲ್ ಸೇರಿದಂತೆ ಹಲವಾರು ವ್ಯಕ್ತಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ, ಶಾಹಿ ಜಾಮಾ ಮಸೀದಿ ಅಧ್ಯಕ್ಷ ಮತ್ತು ವಕೀಲ ಜಾಫರ್ ಅಲಿ ಸೇರಿದಂತೆ 134 ಆರೋಪಿಗಳನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಬಂಧಿತರಲ್ಲಿ ಮೂವರು ಮಹಿಳೆಯರು ಕೂಡ ಸೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್ ಶಾರಿಕ್ ಸಾಥಾ ಅವರ ಮೂವರು ಸಹಚರರಾದ ಮುಲ್ಲಾ ಅಫ್ರೋಝ್, ವಾರಿಸ್ ಮತ್ತು ಗುಲಾಮ್ ಅವರನ್ನೂ ಪೊಲೀಸರು ಜೈಲಿಗೆ ತಳ್ಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜಾಫರ್ ಅಲಿಯನ್ನು ಆಗಸ್ಟ್ 2024ರಲ್ಲಿ ಮೊರಾದಾಬಾದ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಗಲಭೆಯ ಸಮಯದಲ್ಲಿ ಪೊಲೀಸರಿಂದ ನಡೆದ ಹತ್ಯೆಗಳಲ್ಲಿ ನ್ಯಾಯ ದೊರಕಿಸುವ ಸಲುವಾಗಿ ಕಾನೂನು ಹೋರಾಟ ನಡೆಸಲು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್‌) ಸಹಾಯ ಮಾಡಿದೆ. ಎಪಿಸಿಆರ್‌ನ ನದೀಮ್ ಖಾನ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ. ಹೆಚ್ಚಿನ ಕುಟುಂಬಗಳು ಪೊಲೀಸ್ ಹಿಂಸಾಚಾರದ ಬಗ್ಗೆ ಹೇಳಿಕೊಳ್ಳುವ ಸಲುವಾಗಿ ಮುಂದೆ ಬರಲು ಈ ಆದೇಶ ಅನುಕೂಲ ಮಾಡಿಕೊಡಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...