Homeಕರ್ನಾಟಕಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

- Advertisement -
- Advertisement -

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿರುವ ಘಟನೆ ನಡೆದಿದೆ.

ರಾಜೀವ್ ಗೌಡ ಅವರು ಅಧಿಕಾರಿ ಅಮೃತಗೌಡ ಅವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಂಗಳವಾರ ಸಂಜೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ‘ಕಲ್ಟ್’ ಸಿನಿಮಾದ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಸಿನಿಮಾ ಪ್ರಚಾರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ನಗರಸಭೆ ಸಿಬ್ಬಂದಿ ಫ್ಲೆಕ್‌ಗಳನ್ನು ಕಚೇರಿಗೆ ತಂದಿಟ್ಟಿದ್ದರು. ಈ ಬಗ್ಗೆ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ರಾಜೀವ್ ಗೌಡ ಬೆಂಬಲಿಗ ಅಪ್ಸರ್‌ಗೆ ಪೌರಾಯುಕ್ತರು ಮಾಹಿತಿ ಕೂಡ ನೀಡಿದ್ದರು ಎಂದು ವರದಿಯಾಗಿದೆ.

ಫ್ಲೆಕ್ಸ್ ಬಿಚ್ಚಿದ್ದಕ್ಕೆ ತೀವ್ರ ಆಕ್ರೋಶಗೊಂಡ ರಾಜೀವ್‌ಗೌಡ ಪೌರಾಯುಕ್ತೆಗೆ ಕರೆಮಾಡಿ ಅವಾಚ್ಯವಾಗಿ ಬೈದಿದ್ದಾರೆ. ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

“ಬ್ಯಾನರ್ ಬಿಚ್ಚಿಸಿದರೆ ಬೆಂಕಿ ಹಚ್ಚಿಸುವೆ. ನನ್ನ ಒಳ್ಳೆಯತನ ನೋಡಿದ್ದೀರಿ ಕೆಟ್ಟತನ ನೋಡಿಲ್ಲ” ಎಂದು ರಾಜೀವ್‌ಗೌಡ ಪೌರಾಯುಕ್ತೆಗೆ ಧಮ್ಕಿ ಹಾಕಿರುವುದು ವೈರಲ್ ಆಡಿಯೋದಲ್ಲಿದೆ. ಇದಕ್ಕೆ ಪ್ರತಿಕ್ರಿಯಸಿದ ಪೌರಾಯುಕ್ತೆ ಅಮೃತಗೌಡ ಅವರು, “ರಸ್ತೆಯಲ್ಲಿ ಕಟ್ಟಿದ್ದಾರೆ. ಸಾರ್ವಜನಿಕರಿಂದ ದೂರು ಬಂದಿದೆ. ಅನುಮತಿ ಪಡೆಯದೆ ಬ್ಯಾನರ್ ಕಟ್ಟಿದ್ದಾರೆ. ಅಪಘಾತ ಆದರೆ ನಾವು ಹೊಣೆ..” ಎಂದು ಹೇಳಿದ್ದಾರೆ.

ಈ ವೇಳೆ ಮತಷ್ಟು ಕುಪಿತರಾದ ರಾಜೀವ್‌ಗೌಡ, “ಬೆಂಕಿ ಹಚ್ಚುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಜನರನ್ನು ದಂಗೆ ಏಳಿಸುತ್ತೇನೆ” ಎಂದಿದ್ದಾರೆ. ಮುಂದುವರಿದು, ಅವಾಚ್ಯ ಶಬ್ದಗಳಿಂದ ಮಹಿಳಾ ಸರ್ಕಾರಿ ಅಧಿಕಾರಿಗೆ ನಿಂದಿಸಿದ್ದಾರೆ.

ರಾಜೀವ್ ಗೌಡ ವಿರುದ್ದ ಪ್ರತಿಭಟನೆ

ಪೌರಾಯುಕ್ತೆ ಅಮೃತಾಗೌಡ ಅವರಿಗೆ ರಾಜೀವ್‌ಗೌಡ ಧಮ್ಕಿ ಹಾಕಿರುವುದನ್ನು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಬುಧವಾರ (ಜ.14) ಆಯಾ ನಗರ ಸ್ಥಳೀಯ ಸಂಸ್ಥೆಗಳ ಆವರಣದಲ್ಲಿ ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ.

ರಾಜೀವ್ ಗೌಡ ಧಮ್ಕಿ ಹಾಕಿರುವ ಆಡಿಯೋವನ್ನು ಜೆಡಿಎಸ್‌ ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಕಾಂಗ್ರೆಸ್‌ ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ” ಎಂದಿದೆ.

ಮುಂದುವರಿದು, “ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ.
ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ” ಎಂದು ಹೇಳಿದೆ.

“ಸಿಎಂ ಸಿದ್ದರಾಮಯ್ಯ , ಗೃಹ ಸಚಿವರ ಪಮೇಶ್ವರ್ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ ಕೆಪಿಸಿಸಿ ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...