Homeಮುಖಪುಟಮಸೀದಿ, ದರ್ಗಾಗಳನ್ನು ಗುರಿಯಾಗಿಸಿಕೊಂಡು ಪದೇ ಪದೇ ಪಿಐಎಲ್‌ : ಎನ್‌ಜಿಒಗೆ ಹೈಕೋರ್ಟ್ ತರಾಟೆ

ಮಸೀದಿ, ದರ್ಗಾಗಳನ್ನು ಗುರಿಯಾಗಿಸಿಕೊಂಡು ಪದೇ ಪದೇ ಪಿಐಎಲ್‌ : ಎನ್‌ಜಿಒಗೆ ಹೈಕೋರ್ಟ್ ತರಾಟೆ

- Advertisement -
- Advertisement -

ರಾಷ್ಟ್ರ ರಾಜಧಾನಿಯಲ್ಲಿ ಮಸೀದಿ ಮತ್ತು ದರ್ಗಾಗಳು ಅತಿಕ್ರಮಣ ಮಾಡುತ್ತಿವೆ ಎಂದು ಆರೋಪಿಸಿ ಪದೇ ಪದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಕ್ಕಾಗಿ ಸೇವ್ ಇಂಡಿಯಾ ಫೌಂಡೇಶನ್ ಎಂಬ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಬುಧವಾರ (ಜ.14) ತರಾಟೆಗೆ ತೆಗೆದುಕೊಂಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ವಿಭಾಗೀಯ ಪೀಠವು, ಸಂಸ್ಥೆಯ ನಡವಳಿಕೆಯನ್ನು ಮೆಚ್ಚುವುದಿಲ್ಲ, ಅದು ನ್ಯಾಯಾಲಯದ ಪಿಐಎಲ್ ವ್ಯಾಪ್ತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹೇಳಿದೆ.

“ನೀವು ಒಂದೇ ರೀತಿಯ ಅತಿಕ್ರಮಣವನ್ನು ನೋಡುತ್ತಿದ್ದೀರಾ? ನಾವು ಇದನ್ನು ಮೆಚ್ಚುವುದಿಲ್ಲ. ನೀವು ನ್ಯಾಯಾಲಯದ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೀರಿ. ಪ್ರತಿ ವಾರ ನೀವು ನಗರವನ್ನು ಸುತ್ತಿ ಕೆಲವು ಧಾರ್ಮಿಕ ರಚನೆಗಳನ್ನು ನೋಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸುತ್ತೀರಿ” ಎಂದು ಮುಖ್ಯ ನ್ಯಾಯಮೂರ್ತಿ ಉಪಾಧ್ಯಾಯ ಟೀಕಿಸಿದ್ದಾರೆ. ಮಾನವೀಯ ಸೇವೆ ಸಲ್ಲಿಸಲು ಇತರ ಮಾರ್ಗಗಳಿವೆ ಎಂದು ಅವರು ಒತ್ತಿ ಹೇಳಿದ್ದಾರೆ.

“ನೀವು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ನಿಮ್ಮ ಹೆಸರನ್ನು ಬರಲು ಬಯಸುತ್ತಿದ್ದೀರಾ? ಸಮಾಜದಲ್ಲಿ ಬೇರೆ ಯಾವುದೇ ಅನಾರೋಗ್ಯ ಪೀಡಿತರು ನಿಮಗೆ ಕಾಣುತ್ತಿಲ್ಲವೇ? ಶುದ್ಧ ನೀರು ಸಿಗದ ಜನರು, ಹಸಿವಿನಿಂದ ಬಳಲುತ್ತಿರುವ ಜನರು, ನಿಮಗೆ ಕಾಣಿಸುತ್ತಿಲ್ಲವೇ? ನೀವು ಅತಿಕ್ರಮಣವನ್ನು ಮಾತ್ರ ನೋಡುತ್ತಿದ್ದೀರಾ? ದಯವಿಟ್ಟು ಈ ರೀತಿ ಪಿಐಎಲ್‌ಗಳನ್ನು ದುರುಪಯೋಗಪಡಿಸಿಕೊಳ್ಳಬೇಡಿ. ಈ ಅರ್ಜಿಗಳು ನಮ್ಮನ್ನು ತೊಂದರೆಗೊಳಿಸುತ್ತಿವೆ” ಎಂದು ಮುಖ್ಯ ನ್ಯಾಯಮೂರ್ತಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸೇವ್ ಇಂಡಿಯಾ ಫೌಂಡೇಶನ್ ಸಲ್ಲಿಸಿದ್ದ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಬುಧವಾರ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿತ್ತು. ಅವುಗಳಲ್ಲಿ ಒಂದು ಜಾಮಾ ಮಸೀದಿ ಮತ್ತು ಮದರಸಾ ಗಿರಿ ನಗರಕ್ಕೆ ಸಂಬಂಧಿಸಿದೆ. ಸರ್ಕಾರಕ್ಕೆ ಸೇರಿದ “ಹಸಿರು, ಜಾತ್ಯತೀತ” ಭೂಮಿಯನ್ನು ಈ ರಚನೆ (ಮಸೀದಿ, ಮದ್ರಸಾ) ಅತಿಕ್ರಮಿಸಿದೆ ಎಂದು ಸಂಸ್ಥೆ ಆರೋಪಿಸಿತ್ತು.

ಅರ್ಜಿದಾರರ ಪರ ವಕೀಲ ಉಮೇಶ್ ಚಂದ್ರ ಶರ್ಮಾ ವಾದ ಮಂಡಿಸಿ, ದೂರುಗಳು ದಾಖಲಾಗಿದ್ದರೂ ಮಸೀದಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದರು.

ದೆಹಲಿ ಸರ್ಕಾರದ ಪರ ವಕೀಲ ಸಮೀರ್ ವಶಿಷ್ಠ ವಾದ ಮಂಡಿಸಿ, ಸ್ಥಳೀಯ ಅಧಿಕಾರಿಗಳ ಪ್ರಕಾರ ಈ ರಚನೆಯು ಅತಿಕ್ರಮಣವಾಗಿದೆ ಎಂದು ತಿಳಿಸಿದ್ದಾರೆ.

ದೆಹಲಿ ವಕ್ಫ್ ಮಂಡಳಿಯ ಪರವಾಗಿ ಹಿರಿಯ ವಕೀಲ ಸಂಜಯ್ ಘೋಷ್ ವಾದ ಮಂಡಿಸಿ, ಮಸೀದಿಯು ಅಧಿಸೂಚಿತ ರಚನೆಯಾಗಿದ್ದು, ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಕೂಡ ಭೂಮಿಯ ಗಡಿ ಗುರುತಿಸುವಿಕೆಯಲ್ಲಿ ಭಾಗವಹಿಸಿದೆ ಎಂದು ವಾದಿಸಿದ್ದಾರೆ.

ಅರ್ಜಿದಾರರ ಸಂಸ್ಥೆ ಸಲ್ಲಿಸಿದ ಅರ್ಜಿಗಳನ್ನು ಮತ್ತು ಒಂದು ಸಮುದಾಯದ ಧಾರ್ಮಿಕ ರಚನೆಗಳನ್ನು ಗುರಿಯಾಗಿಸುವ ಮಾದರಿಯನ್ನು ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಾಧೀಶರು ಗಮನಿಸಿದ್ದಾರೆ ಎಂದು ಘೋಷ್ ತಿಳಿಸಿದ್ದಾರೆ.

ಸ್ವಲ್ಪ ಸಮಯದವರೆಗೆ ಪ್ರಕರಣದ ವಿಚಾರಣೆ ನಡೆಸಿದ ನಂತರ, ನ್ಯಾಯಾಲಯವು ಜನವರಿ 21ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...