Homeಮುಖಪುಟಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

- Advertisement -
- Advertisement -

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಧಾಬಾ ಗ್ರಾಮದಲ್ಲಿ ಶಾಲೆಯನ್ನು ನಿರ್ಮಿಸಲು ಅಬ್ದುಲ್ ನಯೀಮ್ ಎಂಬ ನಿವಾಸಿ ಸುಮಾರು 20 ಲಕ್ಷ ರೂಪಾಯಿಗಳನ್ನು ಸಾಲವಾಗಿ ಪಡೆದ ಹಣ ಮತ್ತು ಕುಟುಂಬದ ಉಳಿತಾಯದಿಂದ ಹೂಡಿಕೆ ಮಾಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಸಾಲವಾಗಿ ಪಡೆದ 20 ಲಕ್ಷ ರೂಪಾಯಿ ಮತ್ತು ಕುಟುಂಬದ ಉಳಿತಾಯ ಹಣವನ್ನು ವ್ಯಯಿಸಿ ಧಾಬಾ ಗ್ರಾಮದಲ್ಲಿ ಅಬ್ದುಲ್ ನಯೀಮ್ ಎಂಬವರು ಶಾಲೆ ನಿರ್ಮಿಸುತ್ತಿದ್ದರು. ಧಾಬಾ ಗ್ರಾಮ ಮತ್ತು ಸುತ್ತಮುತ್ತಲಿನ ಆದಿವಾಸಿ ಹಳ್ಳಿಗಳ ಕುಟುಂಬಗಳು ತಮ್ಮ ಮಕ್ಕಳನ್ನು ಹಲವಾರು ಕಿಲೋಮೀಟರ್ ದೂರದ ಶಾಲೆಗಳಿಗೆ ಕಳುಹಿಸಬೇಕಾಗಿರುವುದರಿಂದ, ನಯೀಮ್ ಅವರು ನರ್ಸರಿಯಿಂದ 8 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗಾಗಿ ಶಾಲೆಯನ್ನು ನಿರ್ಮಿಸುತ್ತಿದ್ದರು. ಡಿಸೆಂಬರ್ 30ರಂದು ಅವರು ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ಕಳೆದ ವಾರದಿಂದ ಆ ಪ್ರದೇಶದಲ್ಲಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಲು ಪ್ರಾರಂಭಿಸಿದ್ದವು ಎಂದು ವರದಿ ಉಲ್ಲೇಖಿಸಿದೆ.

“ನನ್ನ ಹಳ್ಳಿಯ ಪ್ರಗತಿ ಮತ್ತು ಮಕ್ಕಳಿಗೆ ಅಧ್ಯಯನ ಮಾಡಲು ಸುಲಭವಾಗಲೆಂದು ನನ್ನ ಖಾಸಗಿ ಭೂಮಿಯಲ್ಲಿ ಶಾಲೆ ನಿರ್ಮಿಸಲು ನಿರ್ಧರಿಸಿದ್ದೆ. ಆದರೆ, ನಾವು ಇಲ್ಲಿ ಅಕ್ರಮ ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಗ್ರಾಮದಲ್ಲಿ ಕೇವಲ 3 ಮುಸ್ಲಿಂ ಮನೆಗಳಿವೆ. ಹೀಗಿರುವಾಗ ಇಲ್ಲಿ ಮದ್ರಸಾ ನಿರ್ಮಿಸಲು ಹೇಗೆ ಸಾಧ್ಯ? ಇನ್ನು ಇಲ್ಲಿ ಕಟ್ಟಡದ ಕೆಲಸ ಪೂರ್ಣಗೊಂಡಿರಲಿಲ್ಲ. ತರಗತಿ ಪ್ರಾರಂಭಗೊಂಡು, ಮಕ್ಕಳೂ ಇರಲಿಲ್ಲ” ಎಂದು ನಯೀಮ್ ಹೇಳಿದ್ದಾರೆ.

ಭಾನುವಾರ, ಪಂಚಾಯತ್ ನಯೀಮ್‌ಗೆ ಶಾಲೆಯನ್ನು ಕೆಡವಲು ಆದೇಶಿಸಿ ನೋಟಿಸ್ ನೀಡಿತ್ತು. ಕಟ್ಟಡವನ್ನು ನಿರ್ಮಿಸಲು ನಿಮಗೆ ಅನುಮತಿ ಇಲ್ಲ ಎಂದು ಹೇಳಿತ್ತು. ಪಂಚಾಯತ್ ಕಚೇರಿಯ ಅಧಿಕಾರಿಗಳು ಅವರ ಪ್ರತಿಕ್ರಿಯೆಯನ್ನು ಸ್ವೀಕರಿಸಲು ನಿರಾಕರಿಸಿದ್ದರು ಮತ್ತು ಹಿಂತಿರುಗಲು ಹೇಳಿದ್ದರು ಎಂದು ಆರೋಪಿಸಲಾಗಿದೆ.

ಸ್ಥಳೀಯ ನಿವಾಸಿಗಳ ಪ್ರತಿಭಟನೆಯ ನಂತರ, ಪಂಚಾಯತ್ ಸೋಮವಾರ ಶಾಲೆಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ನಿರ್ಮಾಣವಾಗುತ್ತಿದ್ದ ಕಟ್ಟಡ ಅನಧಿಕೃತ ಮದ್ರಸಾ ಎಂದು ಆರೋಪಿಸಿ ಯಾವುದೇ ದೂರುಗಳು ಬಂದಿಲ್ಲ ಎಂದು ಸರ್ಪಂಚ್ ಹೇಳಿದ್ದರು ಎಂದಿದೆ.

ಆದಾಗ್ಯೂ, ಮಂಗಳವಾರ, ನಯೀಮ್ ಮತ್ತು ಕೆಲವು ಗ್ರಾಮಸ್ಥರು ಈ ವಿಷಯದ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲು ಹೋದಾಗ, ಪಂಚಾಯತ್ ಆಡಳಿತವು ಶಾಲಾ ಕಟ್ಟಡದ ಕೆಲ ಭಾಗಗಳನ್ನು ಕೆಡವಿದೆ.

ಅತಿಕ್ರಮಣ ಮತ್ತು ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಪಂಚಾಯತ್ ನೀಡಿದ ದೂರಿನ ಮೇರೆಗೆ ಆಡಳಿತವು ಕ್ರಮ ಕೈಗೊಂಡಿದೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅಜಿತ್ ಮರಾವಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

“ಪರಿಶೀಲನೆಯಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡದ ಒಂದು ಭಾಗ ಅತಿಕ್ರಮಣ ಎಂದು ಕಂಡುಬಂದಿದೆ” ಎಂದು ಮರಾವಿ ಹೇಳಿದ್ದಾರೆ. “ಇಡೀ ಕಟ್ಟಡವನ್ನು ಕೆಡವಿಲ್ಲ, ಅಕ್ರಮ ಭಾಗವನ್ನು ಮಾತ್ರ ತೆಗೆದುಹಾಕಲಾಗಿದೆ” ಎಂದು ಮರಾವಿ ತಿಳಿಸಿದ್ದಾರೆ. ಎಲ್ಲಾ ಅನುಮತಿಗಳನ್ನು ಪಡೆಯಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ನನ್ನ ಬಳಿ ಪಂಚಾಯತ್ ಎನ್‌ಒಸಿ ಇತ್ತು” ಎಂದು ನಯೀಮ್ ಹೇಳಿರುವುದಾಗಿ ವರದಿಯಾಗಿದೆ. ಅವರು ಶಾಲೆಯ ಅನುಮೋದನೆಗೆ ಅರ್ಜಿ ಸಲ್ಲಿಸಿದ್ದರು ಎಂದು ವರದಿ ಹೇಳಿದೆ.

ಪಂಚಾಯತ್ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡದ ಕಾರಣ ಕಟ್ಟಡವನ್ನು ಕೆಡವಲಾಗುವುದು ಎಂದು ತಿಳಿಸಲಾಗಿತ್ತು ಎಂದು ನಯೀಮ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...