Homeಮುಖಪುಟಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

- Advertisement -
- Advertisement -

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ. ಈ ಫಲಿತಾಂಶಗಳು ರಾಜ್ಯದಲ್ಲಿ ಪಕ್ಷದ ಅತ್ಯುತ್ತಮ ಪ್ರದರ್ಶನಗಳಲ್ಲಿ ಒಂದಾಗಿದ್ದು, ರಾಷ್ಟ್ರೀಯ ಪಕ್ಷಗಳ ಸಾಂಪ್ರದಾಯಿಕ ಭದ್ರಕೋಟೆಗಳನ್ನು ಮೀರಿ ಬೆಳೆಯುತ್ತಿದೆ.

ಈ ಫಲಿತಾಂಶಗಳು, ಹಲವು ವರ್ಷಗಳ ಅಡಿಪಾಯ ಮತ್ತು ನಿರಂತರವಾಗಿ ಸ್ಥಳೀಯ ಭಾಗವಹಿಸುವಿಕೆಯ ಪರಿಣಾಮವನ್ನು ಪ್ರತಿಬಿಂಬಿಸುತ್ತವೆ ಎಂದು ಎಐಎಂಐಎಂ ನಾಯಕರು ಹೇಳಿದ್ದಾರೆ. 2017 ರ ಪುರಸಭೆ ಚುನಾವಣೆಯಲ್ಲಿ ಪಕ್ಷವು 81 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿ ಡಿಸೆಂಬರ್ 2025 ರಲ್ಲಿ ಮಹಾರಾಷ್ಟ್ರ ಪೌರ ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುವ ಮೂಲಕ ತನ್ನ ಅಸ್ತಿತ್ವವನ್ನು ವಿಸ್ತರಿಸಿತು. ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ಯಶಸ್ಸಿನ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಯಿತು, ನಮ್ಮ ಪ್ರಯತ್ನ ಫಲ ನೀಡಿದೆ ಎಂದು ತೋರುತ್ತದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ನೇತೃತ್ವದ ಮನೆ ಮನೆಗೆ ತೆರಳಿ ಪ್ರಚಾರ ಮತ್ತು ಹಿಂದಿನ ಚುನಾವಣೆಗಳಲ್ಲಿ ಅಲ್ಪ ಅಂತರದ ಸೋತ ಕ್ಷೇತ್ರದಲ್ಲಿ ಕೆಲಸ ಮಾಡಲು ಪಕ್ಷದ ಕಾರ್ಯಕರ್ತರನ್ನು ಪ್ರೇರೇಪಿಸಿತು ಎಂದು ಎಐಎಂಐಎಂ ನಾಯಕಿ ಶರೇಖ್ ನಕ್ಷ್ಬಂದಿ ಹೇಳಿದರು. ಸ್ಥಳೀಯ ವಿಷಯಗಳ ಬಗ್ಗೆ ಕಾರ್ಯಕರ್ತರು ಹೊಸ ಶಕ್ತಿಯಿಂದ ಕೆಲಸ ಮಾಡಿದ್ದಾರೆ. ಇದು ಜನರ ಬೆಂಬಲವನ್ನು ಮತಗಳಾಗಿ ಪರಿವರ್ತಿಸಲು ನಮಗೆ ಸಹಾಯ ಮಾಡಿದೆ ಎಂದು ಅವರು ಹೇಳಿದರು.

ನಗರವಾರು ಫಲಿತಾಂಶಗಳನ್ನು ನೋಡುವುವಾದಾದರೆ, ಎಐಎಂಐಎಂ ಛತ್ರಪತಿ ಸಂಭಾಜಿನಗರದಲ್ಲಿ 33, ಮಾಲೆಗಾಂವ್‌ನಲ್ಲಿ 21, ಅಮರಾವತಿಯಲ್ಲಿ 15, ನಾಂದೇಡ್‌ನಲ್ಲಿ 13, ಧುಲೆಯಲ್ಲಿ 10, ಸೋಲಾಪುರದಲ್ಲಿ ಎಂಟು, ಮುಂಬೈನಲ್ಲಿ ಆರು, ಥಾಣೆಯಲ್ಲಿ ಐದು, ಜಲಗಾಂವ್‌ನಲ್ಲಿ ಎರಡು ಮತ್ತು ಚಂದ್ರಾಪುರದಲ್ಲಿ ಒಂದು ಸ್ಥಾನವನ್ನು ಗೆದ್ದಿದೆ. ಈ ಫಲಿತಾಂಶದೊಂದಿಗೆ, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಒಟ್ಟಾರೆ ಸ್ಥಾನಗಳಿಗಿಂತ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ರಾಜಕೀಯ ವೀಕ್ಷಕರು ಹೇಳುವಂತೆ, ಈ ಫಲಿತಾಂಶಗಳು ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಇದು ಸಾಂಪ್ರದಾಯಿಕವಾಗಿ ಹಲವಾರು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತರ ಬೆಂಬಲವನ್ನು ಅವಲಂಬಿಸಿದೆ. ಎಐಎಂಐಎಂನ ಏರಿಕೆ ಮುಂಬೈ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಸವಾಲನ್ನು ಒಡ್ಡಿದೆ. 2029 ರಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವು ಈ ಆವೇಗವನ್ನು ಹೆಚ್ಚಿಸಿಕೊಳ್ಳುವ ಆಶಯವನ್ನು ಹೊಂದಿದೆ.

ಎಐಎಂಐಎಂ ಭದ್ರಕೋಟೆ ಎಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಛತ್ರಪತಿ ಸಂಭಾಜಿನಗರದಲ್ಲಿ, ಶಿವಸೇನೆಯ ಎರಡೂ ಬಣಗಳನ್ನು ಹಲವಾರು ವಾರ್ಡ್‌ಗಳಲ್ಲಿ ಸೋಲಿಸುವ ಮೂಲಕ ಪಕ್ಷವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಮತ್ತು ಎನ್‌ಸಿಪಿ ಅಭ್ಯರ್ಥಿಗಳು ಈ ಹಿಂದೆ ಪ್ರಾಬಲ್ಯ ಹೊಂದಿದ್ದ ಅಲ್ಪಸಂಖ್ಯಾತ ಪ್ರಾಬಲ್ಯದ ಪ್ರದೇಶಗಳಲ್ಲಿ ಸ್ಥಾನಗಳನ್ನು ಗೆಲ್ಲುವ ಮೂಲಕ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ಗೆ ಗಮನಾರ್ಹ ಪ್ರವೇಶ ಮಾಡುತ್ತಿದೆ.

ಮುಂಬೈನ ವಾರ್ಡ್ ಸಂಖ್ಯೆ 145 ರಿಂದ ಗೆದ್ದ ಎಐಎಂಐಎಂ ನಾಯಕಿ ಖೈರುನಿಸಾ ಅಕ್ಬರ್ ಹುಸೇನ್, ಜನಾದೇಶ ಜನರಿಗೆ ಸೇರಿದ್ದು ಎಂದು ಹೇಳಿದರು. ಪ್ರಚಾರದ ಸಮಯದಲ್ಲಿ ಪಕ್ಷವು ಎತ್ತಿದ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತದೆ. ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು.

ನಾಗ್ಪುರದಲ್ಲಿ ಬಿಜೆಪಿ-ಶಿವಸೇನೆಗೆ ಸೆಡ್ಡು

ವಿದರ್ಭದಲ್ಲಿ, ಬಿಜೆಪಿ ಭದ್ರಕೋಟೆಯಾದ ನಾಗ್ಪುರದಲ್ಲಿ ತನ್ನ ಖಾತೆಯನ್ನು ತೆರೆಯುವ ಮೂಲಕ ಪಕ್ಷವು ಅನೇಕರನ್ನು ಅಚ್ಚರಿಗೊಳಿಸಿತು. ಆರು ಸ್ಥಾನಗಳನ್ನು ಗೆದ್ದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಎಐಎಂಐಎಂ ವಿದರ್ಭದ ಮಾಜಿ ಅಧ್ಯಕ್ಷ ಶಾಹಿದ್ ರಂಗೂನ್‌ವಾಲಾ ಅವರು, ಫಲಿತಾಂಶಗಳು ಸಾಂಸ್ಥಿಕ ಬಲವರ್ಧನೆಯ ಯಶಸ್ಸನ್ನು ಮತ್ತು ತಳಮಟ್ಟದ ಕಾರ್ಯಕರ್ತರಿಗೆ, ಮೊದಲ ಬಾರಿಗೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ನಿರ್ಧಾರವನ್ನು ತೋರಿಸಿದೆ ಎಂದು ಹೇಳಿದರು. ನಾಗ್ಪುರದಲ್ಲಿ ಬಿಜೆಪಿ ಮತ್ತು ಶಿವಸೇನಾ ಅಭ್ಯರ್ಥಿಗಳ ವಿರುದ್ಧ ಸ್ಥಾನಗಳನ್ನು ಗೆಲ್ಲುವುದು ಗಮನಾರ್ಹ ಸಾಧನೆಯಾಗಿದೆ ಎಂದು ಅವರು ಹೇಳಿದರು.

ಎಐಎಂಐಎಂ ಇತ್ತೀಚೆಗೆ ಅಕೋಟ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸುವ ಮೂಲಕ ಗಮನ ಸೆಳೆದಿದ್ದರೂ, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾದ ನಂತರ ಮೈತ್ರಿ ಬೇಗನೆ ಕೊನೆಗೊಂಡಿತು. ಇತ್ತೀಚಿನ ನಾಗರಿಕ ಸಮೀಕ್ಷೆಯ ಫಲಿತಾಂಶಗಳು ಮತದಾರರು ಅಭಿವೃದ್ಧಿ, ನ್ಯಾಯ ಮತ್ತು ಪ್ರಾತಿನಿಧ್ಯದ ಮೇಲೆ ಅದರ ಗಮನವನ್ನು ಬೆಂಬಲಿಸಿದ್ದಾರೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...