Homeಮುಖಪುಟಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸುತ್ತವೆ. ಸಮುದಾಯವನ್ನು ಮುಖ್ಯವಾಹಿನಿಯಿಂದ ಬೇರ್ಪಡಿಸುತ್ತವೆ ಎಂದು ಆರೋಪಿಸಿದ್ದಾರೆ.

ಜನವರಿ 1 ರಂದು ಕಾಸರಗೋಡಿನಲ್ಲಿ ಪ್ರಾರಂಭವಾಗಿ ರಾಜ್ಯಾದ್ಯಂತ ಸಂಚರಿಸಿ ತಿರುವನಂತಪುರಂನಲ್ಲಿ ಮುಕ್ತಾಯಗೊಂಡ ಕೇರಳ ಮುಸ್ಲಿಂ ಜಮಾತ್ ಆಯೋಜಿಸಿದ್ದ ‘ಕೇರಳ ಯಾತ್ರೆ’ಯ ಸಮಾರೋಪ ಅಧಿವೇಶನದಲ್ಲಿ ಮಾತನಾಡಿದ ವಿಜಯನ್, ಬಿಜೆಪಿ ಆಡಳಿತದ ವಿರುದ್ಧ ಈ ಆರೋಪಗಳನ್ನು ಮಾಡಿದ್ದಾರೆ.

“ಯಾವುದೇ ರೀತಿಯ ಕೋಮುವಾದದ ಬಗ್ಗೆ ಮೃದು ನಿಲುವು ಹೊಂದಿರುವುದು ಅಥವಾ ಸಮಾಧಾನ ತಂತ್ರ ಅಳವಡಿಸಿಕೊಳ್ಳುವುದು ಅಪಾಯಕಾರಿ. ಕೇರಳವು ಹಿಂದೆ ರಾಜ್ಯದಲ್ಲಿ ಹಲವಾರು ಕ್ರೂರ ಕೋಮು ಸಂಘರ್ಷಗಳು ಮತ್ತು ಗಲಭೆಗಳನ್ನು ಕಂಡಿದೆ. ಆದರೆ, ಯಾವುದೇ ರೀತಿಯ ಕೋಮುವಾದದ ವಿರುದ್ಧ ಎಲ್‌ಡಿಎಫ್ ಅಳವಡಿಸಿಕೊಂಡ ಬಲವಾದ, ರಾಜಿಯಾಗದ ನಿಲುವಿನಿಂದಾಗಿ ಇದೆಲ್ಲವೂ ಕೊನೆಗೊಂಡಿದೆ” ಎಂದು ಅವರು ಹೇಳಿದರು.

ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಂತಹ ಅಲ್ಪಸಂಖ್ಯಾತ ಸಮುದಾಯಗಳು, ಅವರ ಪೂಜಾ ಸ್ಥಳಗಳ ಮೇಲೆ ದೇಶಾದ್ಯಂತ ದಾಳಿ ನಡೆಯುತ್ತಿರುವುದರಿಂದ ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳು ಅಪಾಯದಲ್ಲಿವೆ ಎಂದು ಹೇಳಿದರು.

ಅಂತಹ ಪರಿಸ್ಥಿತಿಯಲ್ಲಿ, ಬಹುಸಂಖ್ಯಾತ ಕೋಮುವಾದವನ್ನು ಅಲ್ಪಸಂಖ್ಯಾತ ಕೋಮುವಾದದೊಂದಿಗೆ ಹೋರಾಡಲು ಸಾಧ್ಯವಿಲ್ಲ. ಏಕೆಂದರೆ, ಎರಡೂ ಶಕ್ತಿಗಳು ಪರಸ್ಪರ ಪೂರಕವಾಗಿರುತ್ತವೆ ಬದಲಾಗಿ, ಜಾತ್ಯತೀತತೆಯನ್ನು ಬಲಪಡಿಸುವ ಮೂಲಕ ಅವುಗಳನ್ನು ಎದುರಿಸಬೇಕಾಗಿದೆ” ಎಂದು ಅವರು ವಾದಿಸಿದರು.

ಧರ್ಮ, ಜನಾಂಗ, ಜಾತಿ ಅಥವಾ ಭಾಷೆಯ ಮೂಲಕ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅವರು ಕರೆ ನೀಡಿದರು. ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ನೇತೃತ್ವದ ‘ಕೇರಳ ಯಾತ್ರೆ’ಯನ್ನು ಶ್ಲಾಘಿಸಿದರು, ಇದು ಸರಿಯಾದ ದಿಕ್ಕಿನಲ್ಲಿ ಇಟ್ಟ ಹೆಜ್ಜೆ ಎಂದು ಹೇಳಿದರು.

“ಧರ್ಮ ಅಥವಾ ಜನಾಂಗದ ಹೆಸರಿನಲ್ಲಿ ಜನರನ್ನು ಬೇರ್ಪಡಿಸಲು ಪ್ರಜ್ಞಾಪೂರ್ವಕ ಪ್ರಯತ್ನಗಳು ನಡೆಯುತ್ತಿರುವ ಈ ಯುಗದಲ್ಲಿ, ಅಂತಹ ನಡೆಗಳು ಅದರ ವಿರುದ್ಧ ಉತ್ತಮ ರಕ್ಷಣೆಯಾಗಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....