Homeದಲಿತ್ ಫೈಲ್ಸ್14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ ಬಾಲಕಿಯ ಶವ, ಆಕೆಯ ಮನೆಯಿಂದ ಸುಮಾರು 17 ಕಿಲೋ ಮೀಟರ್ ದೂರದ ವಾಣಿಯಂಬಲಂ ಎಂಬಲ್ಲಿ ರೈಲ್ವೆ ಹಳಿಯ ಬಳಿ ಪೊದೆಗಳ ನಡುವೆ ಪತ್ತೆಯಾಗಿದೆ.

ಬಾಲಕಿ ಶಾಲೆಯಿಂದ ಮನೆಗೆ ಮರಳದ ಹಿನ್ನೆಲೆ, ಆಕೆಯ ತಾಯಿ ಕರೆ ಮಾಡಿದ್ದರು. ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ಕರೆ ಸ್ವೀಕರಿಸಿದ ಬಾಲಕಿ, ಮನೆಗೆ ಬರುತ್ತಿದ್ದೇನೆ ಎಂದು ತಾಯಿಗೆ ತಿಳಿಸಿದ್ದಾಳೆ. ಬಳಿಕ ಆಕೆಯ ಮೊಬೈಲ್ ಸ್ವಿಚ್‌ ಆಫ್‌ ಆಗಿದೆ. ರಾತ್ರಿಯಾದರೂ ಆಕೆ ಮನೆ ತಲುಪದ ಹಿನ್ನೆಲೆ, ಮನೆಯವರು ಕರುವಕುಂಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾತ್ರಿಯಿಡೀ ಬಾಲಕಿಯ ಕುಟುಂಬಸ್ಥರು ಮತ್ತು ಸ್ಥಳೀಯರ ಜೊತೆಗೂಡಿ ಆಕೆಗಾಗಿ ಹುಡುಕಾಟ ನಡೆಸಿದ್ದರು. ಬಳಿಕ ಕುಟುಂಬಸ್ಥರ ಮಾಹಿತಿಯಂತೆ ಬಾಲಕಿಯ ಗೆಳೆಯ ಅಥವಾ ಆಕೆಯದ್ದೇ ಶಾಲೆಯಲ್ಲಿ ಕಲಿಯುವ ಪರಿಚಯಸ್ಥ ಹುಡುಗನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆ ನಡೆದಿರುವ ವಿಚಾರ ಬಯಲಾಗಿದೆ.

ಹುಡುಗ ನೀಡಿದ ಮಾಹಿತಿಯಂತೆ ವಾಣಿಯಂಬಲಂ ಬಳಿ ರೈಲ್ವೆ ಹಳಿಗಳ ಸಮೀಪ ಪೊದೆಯಲ್ಲಿ ಬಾಲಕಿಯ ಶವವನ್ನು ಶುಕ್ರವಾರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಶಾಲಾ ಸಮವಸ್ತ್ರ ಧರಿಸಿದ ರೀತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆಕೆಯ ಕೈ-ಕಾಲುಗಳನ್ನು ಬಟ್ಟೆಯಿಂದ ಕಟ್ಟಲಾಗಿತ್ತು. ಚಪ್ಪಲಿ ಮತ್ತು ಬ್ಯಾಗ್‌ ಮೃತದೇಹದ ಸಮೀಪದಲ್ಲೇ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆಮಿಷವೊಡ್ಡಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಬಳಿಕ ಆಕೆಯ ಕೈ-ಕಾಲುಗಳನ್ನು ಕಟ್ಟಿ ಅತ್ಯಾಚಾರವೆಸಗಿ, ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವುದನ್ನು ಬಾಲಕ ಒಪ್ಪಿಕೊಂಡಿದ್ದಾನೆ. ಆತನೇ ಘಟನಾ ಸ್ಥಳವನ್ನು ತೋರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಬಾಲಕ ಈ ಹಿಂದೆ ಎರಡು ಬಾರಿ ಬಾಲಕಿಗೆ ಕಿರುಕುಳ ನೀಡಿದ್ದ. ಈ ಸಂಬಂಧ ಒಮ್ಮೆ ಬಾಲಕಿಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಆತನನ್ನು ಕರೆದು ಎಚ್ಚರಿಕೆ ನೀಡಿ ಕಳಿಸಿದ್ದರು. ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದಿದ್ದ ಬಾಲಕ, ಈಗ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ಬಾಲಕಿಯ ತಂದೆ ಕರುವಕುಂಡ್ ಸಮೀಪ ವರ್ಕ್‌ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ತಾಯಿ ಸ್ಥಳೀಯ ಆಯಿಲ್‌ ಮಿಲ್‌ನಲ್ಲಿ ದುಡಿಯುತ್ತಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು. ಅವರಲ್ಲಿ ದೊಡ್ಡವಳು ಕೊಲೆಯಾದ ಬಾಲಕಿ.

ಶಾಲೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ, ವಿಶೇಷವಾಗಿ ಸ್ಟೂಡೆಂಟ್‌ ಪೊಲೀಸ್ ಕ್ಯಾಡೆಟ್‌ (ಎಸ್‌ಪಿಸಿ) ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆಕೆ, ಪ್ರತಿಭಾವಂತಳಾಗಿದ್ದಳು. ಬಾಲಕ ಕೂಡ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತ ಈ ಹಿಂದೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ಬಗ್ಗೆ ವರದಿಗಳಿಲ್ಲ.

ಬಾಲಕಿ ದಲಿತ ಸಮುದಾಯದವಳು ಎಂದು ಮಲಯಾಳಂನ ಪ್ರಮುಖ ಸುದ್ದಿ ಸಂಸ್ಥೆ onmanorama.com ವರದಿ ಮಾಡಿದೆ. ಮತ್ತೊಂದು ಪ್ರಮುಖ ಸುದ್ದಿ ಸಂಸ್ಥೆ keralakaumudi.com ಬಾಲಕ ಮಾದಕ ವ್ಯಸನಿಯಾಗಿದ್ದ ಎಂದು ಉಲ್ಲೇಖಿಸಿದೆ. ಈ ಕುರಿತು ಹೆಚ್ಚಿನ ಮತ್ತು ಖಚಿತ ಮಾಹಿತಿ ತಿಳಿದು ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...