Homeದಲಿತ್ ಫೈಲ್ಸ್14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ ಬಾಲಕಿಯ ಶವ, ಆಕೆಯ ಮನೆಯಿಂದ ಸುಮಾರು 17 ಕಿಲೋ ಮೀಟರ್ ದೂರದ ವಾಣಿಯಂಬಲಂ ಎಂಬಲ್ಲಿ ರೈಲ್ವೆ ಹಳಿಯ ಬಳಿ ಪೊದೆಗಳ ನಡುವೆ ಪತ್ತೆಯಾಗಿದೆ.

ಬಾಲಕಿ ಶಾಲೆಯಿಂದ ಮನೆಗೆ ಮರಳದ ಹಿನ್ನೆಲೆ, ಆಕೆಯ ತಾಯಿ ಕರೆ ಮಾಡಿದ್ದರು. ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ಕರೆ ಸ್ವೀಕರಿಸಿದ ಬಾಲಕಿ, ಮನೆಗೆ ಬರುತ್ತಿದ್ದೇನೆ ಎಂದು ತಾಯಿಗೆ ತಿಳಿಸಿದ್ದಾಳೆ. ಬಳಿಕ ಆಕೆಯ ಮೊಬೈಲ್ ಸ್ವಿಚ್‌ ಆಫ್‌ ಆಗಿದೆ. ರಾತ್ರಿಯಾದರೂ ಆಕೆ ಮನೆ ತಲುಪದ ಹಿನ್ನೆಲೆ, ಮನೆಯವರು ಕರುವಕುಂಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾತ್ರಿಯಿಡೀ ಬಾಲಕಿಯ ಕುಟುಂಬಸ್ಥರು ಮತ್ತು ಸ್ಥಳೀಯರ ಜೊತೆಗೂಡಿ ಆಕೆಗಾಗಿ ಹುಡುಕಾಟ ನಡೆಸಿದ್ದರು. ಬಳಿಕ ಕುಟುಂಬಸ್ಥರ ಮಾಹಿತಿಯಂತೆ ಬಾಲಕಿಯ ಗೆಳೆಯ ಅಥವಾ ಆಕೆಯದ್ದೇ ಶಾಲೆಯಲ್ಲಿ ಕಲಿಯುವ ಪರಿಚಯಸ್ಥ ಹುಡುಗನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆ ನಡೆದಿರುವ ವಿಚಾರ ಬಯಲಾಗಿದೆ.

ಹುಡುಗ ನೀಡಿದ ಮಾಹಿತಿಯಂತೆ ವಾಣಿಯಂಬಲಂ ಬಳಿ ರೈಲ್ವೆ ಹಳಿಗಳ ಸಮೀಪ ಪೊದೆಯಲ್ಲಿ ಬಾಲಕಿಯ ಶವವನ್ನು ಶುಕ್ರವಾರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಶಾಲಾ ಸಮವಸ್ತ್ರ ಧರಿಸಿದ ರೀತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆಕೆಯ ಕೈ-ಕಾಲುಗಳನ್ನು ಬಟ್ಟೆಯಿಂದ ಕಟ್ಟಲಾಗಿತ್ತು. ಚಪ್ಪಲಿ ಮತ್ತು ಬ್ಯಾಗ್‌ ಮೃತದೇಹದ ಸಮೀಪದಲ್ಲೇ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆಮಿಷವೊಡ್ಡಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಬಳಿಕ ಆಕೆಯ ಕೈ-ಕಾಲುಗಳನ್ನು ಕಟ್ಟಿ ಅತ್ಯಾಚಾರವೆಸಗಿ, ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವುದನ್ನು ಬಾಲಕ ಒಪ್ಪಿಕೊಂಡಿದ್ದಾನೆ. ಆತನೇ ಘಟನಾ ಸ್ಥಳವನ್ನು ತೋರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಬಾಲಕ ಈ ಹಿಂದೆ ಎರಡು ಬಾರಿ ಬಾಲಕಿಗೆ ಕಿರುಕುಳ ನೀಡಿದ್ದ. ಈ ಸಂಬಂಧ ಒಮ್ಮೆ ಬಾಲಕಿಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಆತನನ್ನು ಕರೆದು ಎಚ್ಚರಿಕೆ ನೀಡಿ ಕಳಿಸಿದ್ದರು. ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದಿದ್ದ ಬಾಲಕ, ಈಗ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ಬಾಲಕಿಯ ತಂದೆ ಕರುವಕುಂಡ್ ಸಮೀಪ ವರ್ಕ್‌ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ತಾಯಿ ಸ್ಥಳೀಯ ಆಯಿಲ್‌ ಮಿಲ್‌ನಲ್ಲಿ ದುಡಿಯುತ್ತಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು. ಅವರಲ್ಲಿ ದೊಡ್ಡವಳು ಕೊಲೆಯಾದ ಬಾಲಕಿ.

ಶಾಲೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ, ವಿಶೇಷವಾಗಿ ಸ್ಟೂಡೆಂಟ್‌ ಪೊಲೀಸ್ ಕ್ಯಾಡೆಟ್‌ (ಎಸ್‌ಪಿಸಿ) ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆಕೆ, ಪ್ರತಿಭಾವಂತಳಾಗಿದ್ದಳು. ಬಾಲಕ ಕೂಡ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತ ಈ ಹಿಂದೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ಬಗ್ಗೆ ವರದಿಗಳಿಲ್ಲ.

ಬಾಲಕಿ ದಲಿತ ಸಮುದಾಯದವಳು ಎಂದು ಮಲಯಾಳಂನ ಪ್ರಮುಖ ಸುದ್ದಿ ಸಂಸ್ಥೆ onmanorama.com ವರದಿ ಮಾಡಿದೆ. ಮತ್ತೊಂದು ಪ್ರಮುಖ ಸುದ್ದಿ ಸಂಸ್ಥೆ keralakaumudi.com ಬಾಲಕ ಮಾದಕ ವ್ಯಸನಿಯಾಗಿದ್ದ ಎಂದು ಉಲ್ಲೇಖಿಸಿದೆ. ಈ ಕುರಿತು ಹೆಚ್ಚಿನ ಮತ್ತು ಖಚಿತ ಮಾಹಿತಿ ತಿಳಿದು ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...