Homeಮುಖಪುಟರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.

ಅಲ್ಲದೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ಬಗ್ಗೆ ಉಲ್ಲೇಖಿಸಿರುವ ಅವರು, ಇದರ ವಿರುದ್ದ ಕಠಿಣ ಕಾನೂನು ಜಾರಿಯಾಗಬೇಕೆಂದು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ದಲಿತ ಯುವಜನರು ಧ್ವನಿ ಎತ್ತುವಂತೆ ಕರೆ ನೀಡಿದ್ದಾರೆ.

“ರೋಹಿತ್ ವೇಮುಲ ನಿಧನರಾಗಿ ಇಂದಿಗೆ 10 ವರ್ಷಗಳು. ಆದರೆ, “ಈ ದೇಶದಲ್ಲಿ ಕನಸು ಕಾಣಲು ಎಲ್ಲರಿಗೂ ಸಮಾನ ಹಕ್ಕುಗಳಿವೆಯೇ? ಎಂಬ ಅವರ ಪ್ರಶ್ನೆ ಇನ್ನೂ ನಮ್ಮ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರೋಹಿತ್ ಓದಲು, ಬರೆಯಲು ಬಯಸಿದ್ದರು. ವಿಜ್ಞಾನ, ಸಮಾಜ ಮತ್ತು ಮಾನವೀಯತೆಯನ್ನು ಅರ್ಥಮಾಡಿಕೊಳ್ಳುವ ಮೂಲಕ ಈ ದೇಶವನ್ನು ಸುಧಾರಿಸಲು ಅವರು ಬಯಸಿದ್ದರು. ಆದರೆ ಈ ವ್ಯವಸ್ಥೆಗೆ ಒಬ್ಬ ದಲಿತ ಮುಂದೆ ಬರುವುದು ಇಷ್ಟವಿರಲಿಲ್ಲ. “ಸಾಂಸ್ಥಿಕ ಜಾತಿವಾದ, ಸಾಮಾಜಿಕ ಬಹಿಷ್ಕಾರ, ದಿನನಿತ್ಯದ ಅವಮಾನ, ‘ಯೋಗ್ಯತೆ’ಯನ್ನು ಕುರಿತು ಮಾತನಾಡುವ ಭಾಷೆ ಮತ್ತು ಅಮಾನವೀಯ ವರ್ತನೆ – ಇದೇ ಆ ವಿಷವಾಗಿದ್ದು, ಒಬ್ಬ ಪ್ರತಿಭಾವಂತ ಯುವಕನನ್ನು ಅವನ ಘನತೆಯನ್ನು ಕಸಿದುಕೊಂಡು, ಅವನನ್ನು ಏಕಾಂಗಿಯನ್ನಾಗಿ ಮಾಡುವ ಹಂತಕ್ಕೆ ತಳ್ಳಿತು” ಎಂದಿದ್ದಾರೆ.

“ಮತ್ತೆ ಇಂದು? ದಲಿತ ಯುವಜನರ ವಾಸ್ತವವೇನಾದರೂ ಬದಲಾಗಿದೆಯೇ? ಕ್ಯಾಂಪಸ್‌ಗಳಲ್ಲಿ ಅದೇ ತಿರಸ್ಕಾರ, ಹಾಸ್ಟೆಲ್‌ಗಳಲ್ಲಿ ಅದೇ ಪ್ರತ್ಯೇಕತೆ, ತರಗತಿಗಳಲ್ಲಿ ಅದೇ ಕೀಳರಿಮೆ, ಮತ್ತೆ ಅದೇ ಹಿಂಸೆ – ಮತ್ತು ಕೆಲವೊಮ್ಮೆ ಅದೇ ಸಾವು. ಏಕೆಂದರೆ ಜಾತಿ ಇಂದಿಗೂ ಈ ದೇಶದ ಅತಿದೊಡ್ಡ ಪ್ರವೇಶ ಪತ್ರವಾಗಿದೆ” ಎಂದು ಹೇಳಿದ್ದಾರೆ.

“ಅದಕ್ಕಾಗಿಯೇ ರೋಹಿತ್ ವೇಮುಲ ಕಾಯ್ದೆಯು ಕೇವಲ ಒಂದು ಘೋಷಣೆಯಲ್ಲ, ಅದೊಂದು ಅಗತ್ಯವಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯ ಅಪರಾಧವಾಗಲು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಯಾವುದೇ ವಿದ್ಯಾರ್ಥಿಯನ್ನು ಅವರ ಜಾತಿಯ ಹೆಸರಿನಲ್ಲಿ ಕುಗ್ಗಿಸುವ, ಮೌನಗೊಳಿಸುವ ಮತ್ತು ಹೊರಗಟ್ಟುವುದನ್ನು ಕೊನೆಗಾಣಿಸಲು ಇದು ಅಗತ್ಯವಾಗಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಈ ಹೋರಾಟ ಕೇವಲ ಸಂಸತ್ತಿನದ್ದಲ್ಲ. ಈ ಹೋರಾಟ ಕ್ಯಾಂಪಸ್‌ಗಳದ್ದು, ಯುವಜನತೆಯದ್ದು, ನಮ್ಮೆಲ್ಲರದ್ದು. ದಲಿತ ಯುವಕರೇ – ಧ್ವನಿ ಎತ್ತಿ, ಸಂಘಟಿತರಾಗಿ, ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲಿ. ರೋಹಿತ್ ವೇಮುಲ ಕಾಯ್ದೆಯನ್ನು ಕೂಡಲೇ ಜಾರಿಗೆ ತನ್ನಿ ಮತ್ತು ತಾರತಮ್ಯ ವಿರೋಧಿ ಕಾನೂನು ಈಗಲೇ ಬೇಕು ಎಂದು ಒತ್ತಾಯಿಸಿ” ಎಂದು ಕರೆ ನೀಡಿದ್ದಾರೆ.

“ಕರ್ನಾಟಕ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರಗಳು ಈ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರುವ ಪ್ರಕ್ರಿಯೆಯಲ್ಲಿವೆ. ನ್ಯಾಯಯುತವಾದ, ಮಾನವೀಯ ಮತ್ತು ಸಮಾನತೆಯ ಭಾರತವನ್ನು ನಾವು ಬಯಸುತ್ತೇವೆ – ಅಲ್ಲಿ ಯಾವುದೇ ದಲಿತ ವಿದ್ಯಾರ್ಥಿ ತನ್ನ ಕನಸುಗಳಿಗಾಗಿ ಪ್ರಾಣ ತೆರಬೇಕಾದ ಪರಿಸ್ಥಿತಿ ಬರಬಾರದು. ರೋಹಿತ್, ನಿನ್ನ ಹೋರಾಟ ನಮ್ಮ ಜವಾಬ್ದಾರಿ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...