Homeಕರ್ನಾಟಕ88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ :...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

- Advertisement -
- Advertisement -


ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು.

2003ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದು ಹೇಳಿದರು.

ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು

ಪೋಲೀಸ್ ಸಬ್ ಇನ್‌ಸ್ಪೆಕ್ಟರ್, ಎಎಸ್‌ಪಿ, ಡಿವೈಎಸ್‌ಪಿ, ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು.

ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕವಸ್ತು ಮುಕ್ತವನ್ನಾಗಿಸಬಹುದು

ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು. ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿಪಡಿಸಿದರೆ, ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕು. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂಬುವುದಾಗಿ ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.

ಪೋಲೀಸ್ ಠಾಣೆಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಬೇಕು

ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್, ಡಿವೈಎಸ್‌ಪಿಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು ಎಂದರು.

ಡ್ರಗ್ಸ್ ಪತ್ತೆ ಹಚ್ಚುವಲ್ಲಿ ವಿಫಲರಾದ ಪೊಲೀಸರ ಮೇಲೆ ಕ್ರಮಕ್ಕೆ ಸೂಚನೆ

ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರು ಏಕೆ ಮಾಡಬಾರದು? ರಾಜ್ಯದ ಪೊಲೀಸರು ಇದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ.
ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.

ಐಪಿಎಲ್ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಡಿ ಮೈಕಲ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ, ಅವರ ಶಿಫಾರಸ್ಸುಗಳನ್ನು ಪಾಲಿಸಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ. ಅಲ್ಪಾವಧಿ ಶಿಫಾರಸ್ಸುಗಳನ್ನು ಕೂಡಲೆ ಜಾರಿಗೆ ತರಬೇಕು ಹಾಗೂ ದೀರ್ಘಾವಧಿಯಲ್ಲಿ ಉಳಿದವನ್ನು ಪಾಲಿಸಬೇಕಿದೆ. ಶಿಫಾರಸುಗಳನ್ನು ಜಾರಿ ಮಾಡಲೇಬೇಕು ಎಂದರು.

ಬಳ್ಳಾರಿ ಘಟನೆ: ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಬಳ್ಳಾರಿ ಸೂಕ್ಷ್ಮ ಪ್ರದೇಶವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ. ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜೀವ್ ಗೌಡರನ್ನು ಬಂಧಿಸಲಾಗುವುದು

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ, ಅವರು ತಲೆಮರೆಸಿಕೊಂಡಿದ್ದು, ಬಂಧಿಸಲಾಗುವುದು. ಅವರ ಮೇಲೆ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಪಕ್ಷದವರಾಗಲಿ ಕಾನೂನಿಗಿಂತ ಯಾರೂ ಮೇಲಲ್ಲ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...