Homeಮುಖಪುಟಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

- Advertisement -
- Advertisement -

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾದ್ರಿ ಬಿಪಿನ್ ಬಿಹಾರಿ ನಾಯಕ್, ಅವರ ಪತ್ನಿ ಮತ್ತು ಇತರ ಕೆಲವರೊಂದಿಗೆ ಪರ್ಜಂಗ್ ಗ್ರಾಮದ ಮನೆಯೊಂದರಲ್ಲಿ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದಾಗ ಸುಮಾರು 40 ಜನರ ಗುಂಪೊಂದು ಮನೆಯ ಹೊರಗೆ ಜಮಾಯಿಸಿತ್ತು ಎಂದು ವರದಿ ಹೇಳಿದೆ.

“ಗುಂಪು ನಾಯಕ್ ಅವರನ್ನು ಮನೆಯಿಂದ ಹೊರಗೆ ಬರಲು ಒತ್ತಾಯಿಸಿತು. ಪ್ರಾರ್ಥನೆ ಮುಗಿದ ನಂತರ ಹೊರಗೆ ಬರುವುದಾಗಿ ನಾಯಕ್ ಹೇಳಿದಾಗ, ಗುಂಪು ಮನೆಯೊಳಗೆ ಪ್ರವೇಶಿಸಿತು. ನಂತರ ಮನೆಯೊಳಗಿದ್ದ ಎಲ್ಲರಿಗೂ ಹೊಡೆಯಲು ಪ್ರಾರಂಭಿಸಿತು. ನಮ್ಮೊಂದಿಗೆ ಪ್ರಾರ್ಥನೆ ಮಾಡುತ್ತಿದ್ದ ಏಳು ಕುಟುಂಬಗಳು ಇದ್ದವು. ನನ್ನ ಮಕ್ಕಳು ಮತ್ತು ನಾನು ಮನೆಯಿಂದ ಹೊರಗೆ ಓಡಿಹೋಗುವಲ್ಲಿ ಯಶಸ್ವಿಯಾದೆವು ಮತ್ತು ಕಿರಿದಾದ ಓಣಿಯ ಮೂಲಕ ಹತ್ತಿರದ ಪೊಲೀಸ್ ಠಾಣೆಯ ಕಡೆಗೆ ಧಾವಿಸಿದೆವು” ಎಂದು ಪಾದ್ರಿ ನಾಯಕ್ ಅವರ ಪತ್ನಿ ವಂದನಾ ಹೇಳಿದ್ದಾಗಿ ಮಕ್ತೂಬ್ ಮೀಡಿಯಾ ಉಲ್ಲೇಖಿಸಿದೆ.

“ತನ್ನನ್ನು ಮನೆಯಿಂದ ಹೊರಗೆಳೆದು ದೇಹದ ಯಾವುದೇ ಜಾಗವೂ ಬಿಡದೆ ಥಳಿಸಿದರು. ಕಪಾಳಮೋಕ್ಷ ಮಾಡಿದರು. ಕೋಲುಗಳಿಂದ ಹೊಡೆದರು. ಹಣೆಗೆ ಮುಖಕ್ಕೆ ಕುಂಕುಮ ಬಳಿದು, ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದರು. ನಂತರ ಬಜರಂಗದಳ ಸದಸ್ಯರು ಮತ್ತು ಕೆಲವು ಗ್ರಾಮಸ್ಥರು ಗ್ರಾಮದಾದ್ಯಂತ ಮೆರವಣಿಗೆ ಮಾಡಿದರು. ಇದು ಸುಮಾರು ಎರಡು ಗಂಟೆಗಳ ಕಾಲ ಮುಂದುವರೆಯಿತು” ಎಂದು ಪಾದ್ರಿ ನಾಯಕ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಈ ನಡುವೆ, ವಂದನಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡನನ್ನು ರಕ್ಷಿಸುವಂತೆ ಅಧಿಕಾರಿಗಳನ್ನು ಬೇಡಿಕೊಳ್ಳುತ್ತಿದ್ದರು. ಸುಮಾರು ಎರಡು ಗಂಟೆಗಳ ನಂತರವೇ ಪೊಲೀಸರು ಗ್ರಾಮವನ್ನು ತಲುಪಿದರು ಎಂದು ವರದಿ ಹೇಳಿದೆ.

“ತಾನು ಪದೇ ಪದೇ ವಿನಂತಿಸಿಕೊಂಡರೂ, ಪೊಲೀಸರು ಆರಂಭದಲ್ಲಿ ಗ್ರಾಮದಲ್ಲಿ ಯಾರೂ ಇಲ್ಲ ಎಂದು ಹೇಳಿ ತನ್ನನ್ನು ದಾರಿ ತಪ್ಪಿಸಿದರು ಎಂದು ವಂದನಾ ತಿಳಿಸಿದ್ದಾರೆ. ಕೊನೆಗೆ ನಾನು ಪೊಲೀಸರೊಂದಿಗೆ ಗ್ರಾಮಕ್ಕೆ ತೆರಳಿದಾಗ ಕಂಡದ್ದು ಭಯಾನಕ ದೃಶ್ಯವಾಗಿತ್ತು ಎಂದಿದ್ದಾರೆ.

“ನನ್ನ ಗಂಡನನ್ನು ಗ್ರಾಮದ ಹನುಮಾನ್ ದೇವಸ್ಥಾನಕ್ಕೆ ಕಟ್ಟಿ ಹಾಕಲಾಗಿತ್ತು. ಅವರ ಎರಡೂ ಕೈಗಳನ್ನು ರಾಡ್‌ನ ಹಿಂದೆ ಕಟ್ಟಲಾಗಿತ್ತು. ಅವರಿಗೆ ಹಸುವಿನ ಸಗಣಿ ತಿನ್ನುವಂತೆ ಒತ್ತಾಯಿಸುತ್ತಿದ್ದರು. ತೀವ್ರ ರಕ್ತಸ್ರಾವವಾಗುತ್ತಿತ್ತು. ಜನರು ಅವರಿಗೆ ಕಪಾಳಮೋಕ್ಷ ಮಾಡಿ ಜೈ ಶ್ರೀ ರಾಮ್ ಕೂಗುವಂತೆ ಒತ್ತಾಯಿಸುತ್ತಿದ್ದರು” ಎಂದು ವಂದನಾ ವಿವರಿಸಿದ್ದಾರೆ.

ಪೊಲೀಸರ ಮಧ್ಯಪ್ರವೇಶದ ಹೊರತಾಗಿಯೂ, ಗುಂಪು ತಕ್ಷಣ ಹಲ್ಲೆ ನಡೆಸುವುದನ್ನು ನಿಲ್ಲಿಸಿರಲಿಲ್ಲ. ಕೊನೆಗೆ ಪೊಲೀಸರು ನಾಯಕ್ ಅವರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ವರದಿ ಉಲ್ಲೇಖಿಸಿದೆ.

ಠಾಣೆಗೆ ಕರೆದೊಯ್ದ ಮೇಲೆ ಯಾವುದೇ ವೈದ್ಯಕೀಯ ಚಿಕಿತ್ಸೆ ನೀಡದೆ ನಾಯಕ್ ಅವರನ್ನು ಸುಮಾರು ಒಂದು ಗಂಟೆಗಳ ಕಾಲ ಸುಮ್ಮನೆ ಕೂರಿಸಲಾಗಿತ್ತು. ನಾನು ಠಾಣೆಗೆ ತಲುಪುವ ಹೊತ್ತಿಗೆ, ಅವರು ಅಲ್ಲಿಯೇ ಮೂರ್ಛೆ ಹೋಗಿದ್ದರು. ಅವರು ಬರಿಗಾಲಿನಲ್ಲಿದ್ದರು ಮತ್ತು ಮುಖದ ಮೇಲೆ ಕುಂಕುಮವಿತ್ತು. ಅವರು ಭಯಾನಕ ಸ್ಥಿತಿಯಲ್ಲಿದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.

ನಾಯಕ್ ಬಲವಂತದ ಧಾರ್ಮಿಕ ಮತಾಂತರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗುಂಪು ಹಲ್ಲೆ ನಡೆಸಲಾಗಿದೆ. ಗ್ರಾಮದ ಸರಪಂಚ್ ಮಾಡಿದ ಮತಾಂತರದ ಆರೋಪಗಳನ್ನು ಉಲ್ಲೇಖಿಸಿ ಪೊಲೀಸರು ಈ ವಿಷಯವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದರು ಮತ್ತು ಆರಂಭದಲ್ಲಿ ದೂರು ದಾಖಲಿಸಲು ನಿರಾಕರಿಸಿದ್ದರು ಎಂದು ಸಾಮಾಜಿಕ ಕಾರ್ಯಕರ್ತ ಆರೋಪಿಸಿದ್ದಾರೆ.

ಪದೇ ಪದೇ ಒತ್ತಾಯಿಸಿದ ನಂತರ ಕೊನೆಗೆ ದೂರು ದಾಖಲಿಸಲಾಯಿತಾದರೂ, ಬಲವಂತದ ಮತಾಂತರದ ಆರೋಪ ಹೊರಿಸಿ ನಾಯಕ್ ವಿರುದ್ಧ ಪ್ರತಿ ಎಫ್‌ಐಆರ್ ಕೂಡ ದಾಖಲಿಸಲಾಗಿದೆ ಎಂದು ವಂದನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...