Homeಅಂತರಾಷ್ಟ್ರೀಯ'ನಮ್ಮ ದೇಶ ಮಾರಾಟಕ್ಕಿಲ್ಲ': ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

- Advertisement -
- Advertisement -

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು ಜನರು, ‘ಗ್ರೀನ್‌ಲ್ಯಾಂಡ್‌ ಮಾರಾಟಕ್ಕಿಲ್ಲ” ಎಂಬ ಘೋಷಣೆಗಳನ್ನು ಕೂಗುವ ಮೂಲಕ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ. ಇದು ಗ್ರೀನ್‌ಲ್ಯಾಂಡ್ ಇತಿಹಾಸದಲ್ಲೇ ನಡೆದ ಅತಿದೊಡ್ಡ ಪ್ರತಿಭಟನೆ ಎಂದು ಹೇಳಲಾಗುತ್ತಿದೆ.

ಗ್ರೀನ್‌ಲ್ಯಾಂಡ್‌ನ ಪ್ರಧಾನ ಮಂತ್ರಿ ಜೆನ್ಸ್-ಫ್ರೆಡೆರಿಕ್ ನೀಲ್ಸನ್ ಅವರೇ ಸ್ವತಃ ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ತಮ್ಮ ದೇಶದ ಸ್ವಾಯತ್ತತೆಯನ್ನು ರಕ್ಷಿಸುವ ಭರವಸೆ ನೀಡಿದ್ದಾರೆ.

ಗ್ರೀನ್‌ಲ್ಯಾಂಡ್‌ನ ರಾಜಧಾನಿ ನೂಕ್ ನಗರದ ಜನಸಂಖ್ಯೆ ಸುಮಾರು 20,000 ಆಗಿದ್ದು, ಪ್ರತಿಭಟನೆಯಲ್ಲಿ ಅದರ ನಾಲ್ಕನೇ ಒಂದು ಭಾಗದಷ್ಟು ಜನರು (ಸುಮಾರು 5,000ಕ್ಕೂ ಹೆಚ್ಚು ಜನರು) ಭಾಗವಹಿಸಿದ್ದರು. ಚಳಿ ಮತ್ತು ಮಳೆಯನ್ನೂ ಲೆಕ್ಕಿಸದೆ ಜನರು ಸಾಂಪ್ರದಾಯಿಕ ಇನ್ಯೂಟ್ ಗೀತೆಗಳನ್ನು ಹಾಡುತ್ತಾ ಮೆರವಣಿಗೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನಾಕಾರರು “Make America Go Away” (ಅಮೆರಿಕಾವನ್ನು ದೂರವಿಡಿ) ಎಂದು ಬರೆದ ಕೆಂಪು ಟೋಪಿಗಳನ್ನು ಧರಿಸಿದ್ದರು. ಅಷ್ಟೇ ಅಲ್ಲದೆ, “Yankee Go Home” ಮತ್ತು “Kalaallit Nunaat” (ಗ್ರೀನ್‌ಲ್ಯಾಂಡ್‌ನ ಸ್ಥಳೀಯ ಹೆಸರು) ಎಂಬ ಘೋಷಣೆಗಳು ಮೊಳಗಿವೆ ಎಂದು ವರದಿ ಉಲ್ಲೇಖಿಸಿದೆ.

ಗ್ರೀನ್‌ಲ್ಯಾಂಡ್‌ಗೆ ಬೆಂಬಲ ಸೂಚಿಸಿ ಡೆನ್ಮಾರ್ಕ್‌ನ ರಾಜಧಾನಿ ಕೋಪನ್‌ಹೆಗನ್‌ನಲ್ಲಿ ಮತ್ತು ಡೆನ್ಮಾರ್ಕ್‌ಗೆ ಸೇರಿದ ಇತರ ಸ್ಥಳಗಳಲ್ಲಿ ಜನರು ಮೆರವಣಿಗೆ ಮತ್ತು ರ‍್ಯಾಲಿ ನಡೆಸಿದ್ದಾರೆ. ಕೆನಡಾದಲ್ಲಿರುವ ‘ನುನಾವುಟ್’ ಎಂಬ ಇನ್ಯೂಟ್ ಜನರು (ಗ್ರೀನ್‌ಲ್ಯಾಂಡ್‌ನ ಸ್ಥಳೀಯರಂತೆಯೇ ಇರುವ ಜನಾಂಗ) ಆಡಳಿತ ನಡೆಸುವ ಪ್ರದೇಶದ ರಾಜಧಾನಿಯಲ್ಲಿಯೂ ಸಹ ಗ್ರೀನ್‌ಲ್ಯಾಂಡ್‌ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಯುರೋಪ್ ರಾಷ್ಟ್ರಗಳ ಬೆಂಬಲ

ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಫ್ರಾನ್ಸ್, ಜರ್ಮನಿ, ಬ್ರಿಟನ್, ಸ್ವೀಡನ್ ಮತ್ತು ನಾರ್ವೆ ಸೇರಿದಂತೆ ಹಲವು ದೇಶಗಳು ಗ್ರೀನ್‌ಲ್ಯಾಂಡ್‌ನ ಭದ್ರತೆಗಾಗಿ ‘ಆಪರೇಷನ್ ಆರ್ಕ್ಟಿಕ್ ಎಂಡ್ಯೂರೆನ್ಸ್’ ಎಂಬ ಮಿಲಿಟರಿ ಅಭ್ಯಾಸದ ಭಾಗವಾಗಿ ತಮ್ಮ ಸೈನಿಕರನ್ನು ಅಲ್ಲಿಗೆ ಕಳುಹಿಸಿವೆ.

ಪ್ರತಿಭಟನೆಗಳ ನಡುವೆಯೇ, ಗ್ರೀನ್‌ಲ್ಯಾಂಡ್ ಹಸ್ತಾಂತರಕ್ಕೆ ಒಪ್ಪದ ಯುರೋಪಿಯನ್ ರಾಷ್ಟ್ರಗಳ ಮೇಲೆ ಟ್ರಂಪ್ ಅವರು ಫೆಬ್ರವರಿ 1 ರಿಂದ ಶೇ. 10 ರಷ್ಟು ಮತ್ತು ಜೂನ್ 1 ರಿಂದ ಶೇ. 25 ರಷ್ಟು ಆಮದು ಸುಂಕ ಹೇರುವುದಾಗಿ ಘೋಷಿಸಿದ್ದಾರೆ.

ಸಮೀಕ್ಷೆಗಳ ಪ್ರಕಾರ ಗ್ರೀನ್‌ಲ್ಯಾಂಡ್‌ನ ಶೇ. 85 ರಷ್ಟು ಜನರು ಅಮೆರಿಕಾದ ಭಾಗವಾಗಲು ಇಷ್ಟಪಡುತ್ತಿಲ್ಲ. “ನಮ್ಮ ದೇಶವು ಒಂದು ಆಟಿಕೆಯಲ್ಲ, ಇದು ನಮ್ಮ ಮನೆ” ಎಂಬುದು ಅಲ್ಲಿನ ನಾಗರಿಕರ ಒಮ್ಮತದ ಅಭಿಪ್ರಾಯವಾಗಿದೆ.

ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರು ಟ್ರಂಪ್ ಅವರ ಈ ನಡೆಯನ್ನು “ಅಪಾಯಕಾರಿ ಆಟ” ಎಂದು ಕರೆದಿದ್ದು, ಇದು ನ್ಯಾಟೋ ಒಕ್ಕೂಟದ ಅಸ್ತಿತ್ವಕ್ಕೆ ಧಕ್ಕೆ ತರಬಹುದು ಎಂದು ಎಚ್ಚರಿಸಿದ್ದಾರೆ.

ಟ್ರಂಪ್‌ ಸಂಚಿನ ವಿರುದ್ದದ ಗ್ರೀನ್‌ಲ್ಯಾಂಡ್‌ ಜನರ ಪ್ರತಿಭಟನೆಯು ಕೇವಲ ಒಂದು ದೇಶದ ವಿಷಯವಾಗಿ ಉಳಿಯದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಜಾಪ್ರಭುತ್ವ ಮತ್ತು ಸ್ವಾಯತ್ತತೆಯ ಹೋರಾಟವಾಗಿ ಬದಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...