Homeಮುಖಪುಟಹಿಂದಿಯೇತರ 7 ಭಾಷೆಗಳಿಗೆ ಸಾಹಿತ್ಯ ಪ್ರಶಸ್ತಿ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್

ಹಿಂದಿಯೇತರ 7 ಭಾಷೆಗಳಿಗೆ ಸಾಹಿತ್ಯ ಪ್ರಶಸ್ತಿ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ತಮಿಳು, ಬಂಗಾಳಿ ಮತ್ತು ಮರಾಠಿ ಸೇರಿದಂತೆ 7 ಭಾಷೆಗಳಿಗೆ ವಾರ್ಷಿಕ ಸಾಹಿತ್ಯ ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭಾನುವಾರ ಘೋಷಿಸಿದ್ದಾರೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಮಿಳುನಾಡು ಸರ್ಕಾರದ ಆಶ್ರಯದಲ್ಲಿ ನೀಡಲಾಗುವ ಈ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು. ಇದನ್ನು ‘ಸೆಮ್ಮೋಳಿ ಇಲ್ಲಕಿಯ ವಿರುಧು” (ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ) ಎಂದು ಹೆಸರಿಸಲಾಗಿದೆ. ಮೊದಲ ಹಂತದಲ್ಲಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿನ ಅತ್ಯುತ್ತಮ ಕೃತಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು.

ಚೆನ್ನೈ ಅಂತರರಾಷ್ಟ್ರೀಯ ಪುಸ್ತಕ ಮೇಳದ (ಸಿಐಬಿಎಫ್‌-2026) ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್, “ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳ ಘೋಷಣೆಯನ್ನು ಇತ್ತೀಚೆಗೆ ರದ್ದುಪಡಿಸಲಾಗಿದೆ, ಇದರಿಂದ ಸಾಕಾಷ್ಟು ಅನಾನುಕೂಲಕರವಾಗಿದೆ. ಕೇಂದ್ರ ಸಂಸ್ಕೃತಿ ಸಚಿವಾಲಯದ ಹಸ್ತಕ್ಷೇಪದಿಂದಾಗಿ ಈ ಬೆಳವಣಿಗೆ ಸಂಭವಿಸಿದೆ” ಎಂದು ಅವರು ಆರೋಪಿಸಿದರು.

ಪ್ರಶಸ್ತಿಗಳ ಮೇಲಿನ ಅನಿಶ್ಚಿತತೆಯನ್ನು ಒತ್ತಿ ಹೇಳಿದ ಅವರು, “ಕಲೆ ಮತ್ತು ಸಾಹಿತ್ಯ ಪ್ರಶಸ್ತಿಗಳಲ್ಲಿಯೂ ಸಹ ರಾಜಕೀಯ ಹಸ್ತಕ್ಷೇಪಗಳು ಅಪಾಯಕಾರಿ” ಎಂದು ಅವರು ಹೇಳಿದರು. ಅಂತಹ ಸಂದರ್ಭಗಳಲ್ಲಿ, ಹಲವಾರು ಬರಹಗಾರರು ಮತ್ತು ಕಲಾ/ಸಾಹಿತ್ಯ ಸಂಸ್ಥೆಗಳ ಪ್ರತಿನಿಧಿಗಳು ಸೂಕ್ತ, ರಚನಾತ್ಮಕ, ಪ್ರತಿ-ಕ್ರಿಯಾ ಯೋಜನೆಗಾಗಿ ತಮ್ಮಲ್ಲಿ ಮನವಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

“ಇದು ಈ ಸಮಯದ ಅಗತ್ಯವಾಗಿದೆ ಎಂದು ನಮಗೆ ಅರಿವಾಗಿದೆ, ನಿಮ್ಮೆಲ್ಲರನ್ನು ಸಂತೋಷಪಡಿಸುವ ಘೋಷಣೆಯನ್ನು ನಾನು ಮಾಡಲು ಬಯಸುತ್ತೇನೆ. ಅದರಂತೆ, ಪ್ರತಿ ವರ್ಷ ತಮಿಳುನಾಡು ಸರ್ಕಾರದ ಪರವಾಗಿ, ಆಯ್ದ ಭಾರತೀಯ ಭಾಷೆಗಳಲ್ಲಿನ ಅತ್ಯುತ್ತಮ ಸಾಹಿತ್ಯ ಕೃತಿಗಳಿಗೆ ರಾಷ್ಟ್ರೀಯ ಮಟ್ಟ ಪ್ರಶಸ್ತಿಗಳನ್ನು ನೀಡಲಾಗುವುದು” ಎಂದು ಅವರು ಹೇಳಿದರು.

“ಪ್ರಶಸ್ತಿ ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ಮೊದಲ ಹಂತದಲ್ಲಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿನ ಅತ್ಯುತ್ತಮ ಕೃತಿಗಳಿಗೆ ‘ಸೆಮ್ಮೊಳಿ ಇಲ್ಲಕಿಯ ವಿರುಧು’ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರತಿ ಭಾಷೆಗೆ ಪ್ರಶಸ್ತಿಯು ರೂ. 5 ಲಕ್ಷ ನಗದು ಬಹುಮಾನವನ್ನು ಹೊಂದಿರುತ್ತದೆ. ತಮಿಳುನಾಡು ಸರ್ಕಾರವು ಪೋಷಕರ ಪಾತ್ರವನ್ನು ಸಂತೋಷದಿಂದ ನಿರ್ವಹಿಸುತ್ತದೆ. ಆಯ್ಕೆ ಪ್ರಕ್ರಿಯೆಯ ಕಾರ್ಯವನ್ನು ಸ್ವತಂತ್ರ ತಜ್ಞರಿಗೆ ಹಸ್ತಾಂತರಿಸುತ್ತದೆ” ಎಂದು ಮುಖ್ಯಮಂತ್ರಿ ಹೇಳಿದರು.

“ಸಾಹಿತ್ಯ ಕೃತಿಗಳ ಗುಣಮಟ್ಟ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಪ್ರತಿ ಭಾಷೆಗೆ (ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು) ಹೆಸರಾಂತ ಬರಹಗಾರರನ್ನು ಒಳಗೊಂಡ ಸಮಿತಿಯನ್ನು ಸ್ಥಾಪಿಸಲಾಗುವುದು. ಇದಲ್ಲದೆ, ತಮ್ಮ ನೇತೃತ್ವದ ದ್ರಾವಿಡ ಮಾದರಿ ಸರ್ಕಾರವು ಪ್ರತಿ ಮನೆಗೂ ಜ್ಞಾನವನ್ನು ಕೊಂಡೊಯ್ಯಲು ಹಲವಾರು ಉಪಕ್ರಮಗಳನ್ನು ತೆಗೆದುಕೊಂಡಿದೆ. ಪುಸ್ತಕ ಮೇಳವು ಒಂದು ಪ್ರಮುಖ ಹೆಜ್ಜೆಯಾಗಿದೆ” ಎಂದು ಅವರು ಹೇಳಿದರು.

ಈ ಪುಸ್ತಕ ಮೇಳದಲ್ಲಿ, ಅನುವಾದಗಳು ಮತ್ತು ಹಕ್ಕುಸ್ವಾಮ್ಯ ವಿನಿಮಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...