Homeಅಂತರಾಷ್ಟ್ರೀಯಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

- Advertisement -
- Advertisement -

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ ಸಾಧಿಸಿವೆ ಎಂದು ವರದಿಯಾಗಿದೆ.

ಭಾನುವಾರ (ಜ.18) ಎರಡೂ ಪಕ್ಷಗಳು ದೇಶವನ್ನು ಮತ್ತೆ ಒಗ್ಗೂಡಿಸುವ ಗುರಿಯನ್ನು ಹೊಂದಿರುವ ತಕ್ಷಣದ ಕದನ ವಿರಾಮವನ್ನು ಘೋಷಿಸಿವೆ ಎಂದು ವರದಿ ಹೇಳಿದೆ.

ಕದನ ವಿರಾಮಕ್ಕೂ ಮುನ್ನ, ಸಿರಿಯಾ ಸೇನೆಯು ತನ್ನ ಮಿಲಿಟರಿ ವಾಯುನೆಲೆ ಮತ್ತು ತಬ್ಕಾ ಅಣೆಕಟ್ಟು (ಸಿರಿಯಾದ ಅತಿದೊಡ್ಡ) ಒಳಗೊಂಡ ಆಯಕಟ್ಟಿನ ಪಟ್ಟಣವಾದ ತಬ್ಕಾವನ್ನು ವಶಪಡಿಸಿಕೊಂಡಿದೆ. ದೇಶದ ಅತಿದೊಡ್ಡ ಅಲ್-ಒಮರ್ ತೈಲ ಕ್ಷೇತ್ರ ಕೂಡ ಸೇನೆಯ ವಶವಾಗಿದೆ.

ಎಸ್‌ಡಿಎಫ್ ಗುಂಪುಗಳನ್ನು ಯೂಫ್ರಟಿಸ್ ನದಿಯ ಪೂರ್ವಕ್ಕೆ ಹಿಮ್ಮೆಟ್ಟಿಸಿದ ಸರ್ಕಾರಿ ಪಡೆಗಳು, ರಕ್ಕಾ ಮತ್ತು ಅಲೆಪ್ಪೊದ ಪೂರ್ವಕ್ಕೆ ಡೀರ್ ಹಫರ್ ಹಾಗೂ ಮಸ್ಕಾನಾ ಸೇರಿದಂತೆ ಹಲವು ಪಟ್ಟಣಗಳಿಗೆ ಪ್ರವೇಶಿಸಿವೆ.

ಅಧ್ಯಕ್ಷ ಅಹ್ಮದ್ ಅಲ್-ಶರಾ ಮತ್ತು ಎಸ್‌ಡಿಎಫ್‌ ನಾಯಕ ಮಜ್ಲೌಮ್ ಅಬ್ದಿ ಅವರು 14 ಅಂಶಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಎಲ್ಲಾ ಎಸ್‌ಡಿಎಫ್‌ ಪಡೆಗಳು ಯೂಫ್ರಟಿಸ್ ನದಿಯ ಪೂರ್ವಕ್ಕೆ ಹಿಂದೆ ಸರಿಯಬೇಕು ಎಂಬುವುದು ಒಪ್ಪಂದದ ಪ್ರಮುಖ ಅಂಶವಾಗಿದೆ.

ದೀರ್ ಎಜ್-ಜೋರ್, ರಖ್ಖಾ ಮತ್ತು ಹಸಾಕಾ ಪ್ರಾಂತ್ಯಗಳ ಸಂಪೂರ್ಣ ಆಡಳಿತವನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು. ಎಸ್‌ಡಿಎಫ್‌ ಸಂಘಟನೆಯನ್ನು ವಿಸರ್ಜಿಸಿ, ಅದರ ಹೋರಾಟಗಾರರನ್ನು ಸಿರಿಯನ್ ರಾಷ್ಟ್ರೀಯ ಸೈನ್ಯಕ್ಕೆ ಸೇರಿಸಿಕೊಳ್ಳಲಾಗುವುದು ಎಂಬುವುದು ಒಪ್ಪಂದಲ್ಲಿದೆ.

ಈ ಬೆಳವಣಿಗೆಯ ಭಾಗವಾಗಿ, ಸಿರಿಯಾ ಸರ್ಕಾರವು ಕುರ್ದಿಶ್ ಭಾಷೆಯನ್ನು ರಾಷ್ಟ್ರೀಯ ಭಾಷೆಯೆಂದು ಅಧಿಕೃತವಾಗಿ ಗುರುತಿಸಿದೆ ಮತ್ತು ಕುರ್ದಿಶ್ ಸಿರಿಯನ್ನರಿಗೆ ನಾಗರಿಕತ್ವವನ್ನು ಮರುಸ್ಥಾಪಿಸಿದೆ ಎಂದು ವರದಿಯಾಗಿದೆ.

ಈ ಒಪ್ಪಂದವು 2024ರಲ್ಲಿ ಅಸ್ಸಾದ್ ಆಡಳಿತದ ಪತನದ ನಂತರ ಸಿರಿಯಾವನ್ನು ಪುನರ್ ಏಕೀಕರಣಗೊಳಿಸುವತ್ತ ಮಹತ್ವದ ಹೆಜ್ಜೆಯೆಂದು ಪರಿಗಣಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...